ಬೆಂಗಳೂರು.ಸೆ,5-
ಸಿಲಿಕಾನ್ ಸಿಟಿ ಬೆಂಗಳೂರು ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದೆ ಎಂದು ಪ್ರದೇಶ ಕಾಂಗ್ರೆಸ್ ಆಪಾದಿಸಿದೆ.
ಮಳೆಯಿಂದ ಮುಳುಗಿರುವ ನಗರದ ಕೆಲವು ಪ್ರದೇಶಗಳ ಚಿತ್ರಗಳೊಂದಿಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಬೆಂಗಳೂರು ಮುಳುಗಿರುವುದು ಮಳೆಯಿಂದಲ್ಲ.ಕಮೀಷನ್ ನಿಂದ ಎಂದು ಹೇಳಿದೆ.
ಹಲವು ತಿಂಗಳ ಹಿಂದೆ ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಬೆಂಗಳೂರಿನ ದುರಾವಸ್ಥೆಯ ಬಗ್ಗೆ ಧ್ವನಿ ಎತ್ತಿದ್ದರು. ಹಲವು ಉದ್ಯಮಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಐಟಿ ಕಂಪೆನಿಗಳು ಪತ್ರ ಬರೆದಿವೆ. ಬಸವರಾಜ ಬೊಮ್ಮಾಯಿ ಅವರೇ, ತಾವು ಎಚ್ಚರವಾಗಲು ಇನ್ನೇನಾಗಬೇಕು’ ಎಂದು ಪ್ರಶ್ನಿಸಿದೆ.
‘ಮಳೆಗೆ ಬೆಂಗಳೂರು ಮತ್ತೆ ನಲುಗಿದೆ. ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಈ ರಾಜ್ಯಕ್ಕೆ ಗೃಹ ಸಚಿವರೋ ಅಥವಾ ತಮ್ಮ ಕ್ಷೇತ್ರಕ್ಕೆ ಮಾತ್ರ ಗೃಹ ಸಚಿವರೋ ತಿಳಿಯದಾಗಿದೆ. ಬೆಂಗಳೂರಿನ ಸಪ್ತ ಸಚಿವರು ನಾಪತ್ತೆಯಾಗಿದ್ದಾರೆ. ಬಿಜೆಪಿ ಜನೋತ್ಸವದ ತಯಾರಿಯಲ್ಲಿದೆ’ ಎಂದು ಆರೋಪಿಸಿದೆ.
‘ಬೆಂಗಳೂರು ನಗರವನ್ನು ಪ್ರತಿನಿಧಿಸುವ 7 ಸಚಿವರು ಜಟ್ಕಾ ಕಟ್, ಹಲಾಲ್ ಕಟ್ ವಿಚಾರ ಮಾತಾಡಲು ಓಡೋಡಿ ಬರ್ತಾರೆ. ಸಾವರ್ಕರ್ ವಿಚಾರ ಮಾತಾಡಲು ಮುನ್ನುಗ್ಗುತ್ತಾರೆ. ಆದರೆ, ಬೆಂಗಳೂರು ಮಳೆ ಅವಾಂತರಕ್ಕೆ ಮಾತ್ರ ಬಾಯಿ ಬಿಡದೆ ಬಿಲ ಸೇರಿಕೊಂಡಿದ್ದೇಕೆ? ಬೆಂಗಳೂರಿನ ಬಗ್ಗೆ ಮಾತಾಡಲೂ ಸಚಿವರಿಗೆ 40 ಪರ್ಸೆಂಟ್ ಕಮಿಷನ್ ಕೊಡಬೇಕೆ’ ಎಂದು ಕೇಳಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

