Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮತ್ತೊಂದು ನೇಮಕಾತಿ ಕರ್ಮಕಾಂಡ..?
    ಸುದ್ದಿ

    ಮತ್ತೊಂದು ನೇಮಕಾತಿ ಕರ್ಮಕಾಂಡ..?

    vartha chakraBy vartha chakraಜುಲೈ 9, 2022Updated:ಜುಲೈ 9, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Law and Order ADGP Kamal Pant held a press meet at SP office in Davangere on Wednesday (05-09-18), Photo By : Anup R. Thippeswamy.
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.9-ಪಿಎಸ್‌ ಐ ಅಕ್ರಮ ನೇಮಕಾತಿ ಹಗರಣದ ಬೆನ್ನಲ್ಲೇ ಇಲಾಖೆಯ ‌ಕ್ರೈಮ್ ಆಫೀಸರ್ ಹುದ್ದೆಗಳಿಗೆ ಒಂದೇ ಕಾಲೇಜಿನ 103 ಮಂದಿ ಅಭ್ಯರ್ಥಿಗಳು ಆಯ್ಕೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕ್ರೈಮ್ ಆಫೀಸರ್ ವಿಭಾಗದಲ್ಲಿ ಖಾಲಿ ಇದ್ದ ಒಟ್ಟು 209 ಹುದ್ದೆಗಳ ಪೈಕಿ 103 ಹುದ್ದೆಗಳಿಗೆ ಒಂದೇ ಕಾಲೇಜಿಗೆ ಸೇರಿದವರೇ ಆಯ್ಕೆಯಾಗಿರುವುದು ಭ್ರಷ್ಟಾಚಾರ ನಡೆದಿರುವ ಸಂಶಯಕ್ಕೆ ಕಾರಣವಾಗಿದೆ.
    ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಎಡಿಜಿಪಿ ಅಮೃತ್ ಪೌಲ್ ಪೊಲೀಸ್ ನೇಮಕಾತಿ ಪ್ರಾಧಿಕಾರದ
    ಅಧ್ಯಕ್ಷರಾಗಿ ಪ್ರಾಧಿಕಾರದಿಂದ ವರ್ಗಾವಣೆ ಆಗುವ ಮುನ್ನ ನಡೆದಿದ್ದ ನೇಮಕಾತಿಯ ಆಯ್ಕೆಪಟ್ಟಿಯು ಬಿಡುಗಡೆಗೊಂಡ ಬೆನ್ನಲ್ಲೇ ಇದೀಗ ಒಂದೇ ಕಾಲೇಜಿನ 103 ಮಂದಿ ಆಯ್ಕೆಯಾಗಿರುವುದು ಮುನ್ನೆಲೆಗೆ ಬಂದಿದೆ.
    ಆಯ್ಕೆಯಾಗಿರುವ 103 ಮಂದಿ ಕರ್ನಾಟಕ ವಿಶ್ವವಿದ್ಯಾಲಯದ ಕರ್ನಾಟಕ ವಿಜ್ಞಾನ ಕಾಲೇಜಿನ ಕ್ರಿಮಿನಾಲಜಿ ಮತ್ತು ಫೋರೆನ್ಸಿಕ್ ವಿಭಾಗದ ಬಿಎಸ್ ಸಿ ಮತ್ತು ಬಿಎ ವಿದ್ಯಾರ್ಥಿಗಳಾಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ.
    ಅಲ್ಲದೆ ಆಯ್ಕೆಪಟ್ಟಿ ಹೊರಬಿದ್ದ ಬೆನ್ನಲ್ಲೇ ಈ ಸಂಗತಿ ಕಾಲೇಜಿನ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪ್ ನಲ್ಲಿ ಅಭಿನಂದನೆಗಳು ವ್ಯಕ್ತವಾಗಿವೆ
    ಇದೊಂದು ಹೆಮ್ಮೆ ಸಂಗತಿ. ಕೆಎಸ್ ಸಿಡಿ ಮತ್ತು ಕೆಎಸಿಡಿಯ ಒಟ್ಟು 103 ವಿದ್ಯಾರ್ಥಿಗಳು ಸೀನ್ ಆಫ್ ಕ್ರೈಮ್ ಅಫೀಸರ್ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಇದು ಕೆಸಿಡಿ ಇತಿಹಾಸಕ್ಕೆ ಸೇರ್ಪಡೆಯಾಗಿದೆ. ನಿವೃತ್ತ ಮತ್ತು ಹಾಲಿ ಬೋಧಕ ವೃಂದವು ಸಾಧಕರನ್ನು ಅಭಿನಂದಿಸಿದೆ,’ ಎಂಬ ಬರಹವು ವಾಟ್ಸಾಪ್ ಗ್ರೂಪ್ ನಲ್ಲಿ ಹರಿದಾಡುತ್ತಿದೆ.
    2021ರಲ್ಲಿ ಕ್ರೈಮ್ ಆಫೀಸರ್ ಆಯ್ಕೆ ಪ್ರಕ್ರಿಯೆ ನಡೆದಿತ್ತಾದರೂ 2022ರ ಜುಲೈ 2ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆಗೊಳಿಸಲಾಗಿದೆ. ಸಿಐಡಿ ಪೊಲೀಸರು ಅಮೃತ್ ಪೌಲ್ ಅವರನ್ನು ಬಂಧನಕ್ಕೊಳಪಡಿಸಿ ಅಮಾನತುಗೊಳಿಸಿರುವ ಬೆನ್ನಲ್ಲೇ 2022ರ ಜುಲೈ 2ರಂದು ಬಿಡುಗಡೆಗೊಂಡಿತ್ತು.
    ಅಮೃತ್ ಪೌಲ್ ಅವರು ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಇಡೀ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿತ್ತು. ಆದರೆ ಆಯ್ಕೆಪಟ್ಟಿಯನ್ನು ಬಿಡುಗಡೆಗೊಳಿಸಿರಲಿಲ್ಲ. ಪಿಎಸ್ ಐ ನೇಮಕಾತಿ ಹಗರಣದಲ್ಲಿ ವಿಚಾರಣೆ ನಡೆಯುತ್ತಿದ್ದರಿಂದಾಗಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆಗೊಳಿಸಿರಲಿಲ್ಲ ಎನ್ನಲಾಗಿದೆ. ನೇಮಕಾತಿ ಪ್ರಾಧಿಕಾರದ ಪ್ರಸ್ತುತ ಅಧ್ಯಕ್ಷರಾದ ಡಿಜಿಪಿ ಕಮಲ್ ಪಂತ್ ಅವರ ಸಹಿಯೊಂದಿಗೆ ತಾತ್ಕಾಲಿಕ ಆಯ್ಕೆಪಟ್ಟಿಯು ಬಿಡುಗಡೆಯಾಗಿತ್ತು.

    #cybercrime crime ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಮುನೀಶ್ ಮೌದ್ಗೀಲ್ ಗೆ ಬೆದರಿಕೆ..!
    Next Article ಪೌಲ್ ಗೆ Polygraph test..?
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    FIR ದಾಖಲಿಸಲು ಇದು ಕಡ್ಡಾಯ !

    ಜುಲೈ 26, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patricktup ರಲ್ಲಿ IT ದಾಳಿಯಲ್ಲಿ ಸಿಕ್ಕ ಹಣ ಬಿಜೆಪಿಯವರದ್ದಂತೆ! | IT Raid
    • Patricktup ರಲ್ಲಿ ಬಾಟಲಿ ನೀರು ಸುರಕ್ಷಿತವಲ್ಲ
    • Briancaugs ರಲ್ಲಿ ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe