Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬರಹಗಾರರಿಗೆ ರಕ್ಷಣೆ ಕೊಡಿ.. !
    ಸುದ್ದಿ

    ಬರಹಗಾರರಿಗೆ ರಕ್ಷಣೆ ಕೊಡಿ.. !

    vartha chakraBy vartha chakraಜುಲೈ 12, 2022Updated:ಜುಲೈ 12, 20221 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಾಜ್ಯದ ಬರಹಗಾರರು, ಚಿಂತಕರು ಮತ್ತು ವಿರೋಧ ಪಕ್ಷಗಳ ಮುಖಂಡರುಗಳಿಗೆ ಬರುತ್ತಿರುವ ಜೀವ ಬೆದರಿಕೆ ಕರೆ ಹಾಗು ಪತ್ರಗಳನ್ನು ಸರ್ಕಾರ ನಿರ್ಲಕ್ಷಿಸಬಾರದು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

    ಈ ಕುರಿತು ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆಯ ವಿವರ ಹೀಗಿದೆ: ರಾಜ್ಯದ ಬರಹಗಾರರು, ಚಿಂತಕರು ಮತ್ತು ವಿರೋಧ ಪಕ್ಷದ ನಾಯಕರುಗಳಿಗೆ ಪದೆ ಪದೆ ಜೀವ ಬೆದರಿಕೆಯ ಪತ್ರಗಳನ್ನು ದಾವಣಗೆರೆ, ಭದ್ರಾವತಿ, ಅಜ್ಜಂಪುರ ಮುಂತಾದ ಊರುಗಳಿಂದ ಪೋಸ್ಟ್ ಮಾಡಲಾಗುತ್ತಿದೆ.

    ಕುಂ ವೀರಭದ್ರಪ್ಪನವರಿಗೆ 6 ಪತ್ರ, ಬಂಜಗೆರೆ ಜಯಪ್ರಕಾಶ್ ಅವರಿಗೆ 5 ಪತ್ರ, ಬಿ.ಟಿ.ಲಲಿತಾ ನಾಯಕ್, ಬಿ.ಎಲ್ ವೇಣು, ಚಂದ್ರಶೇಖರ್ ತಾಳ್ಯ ಅವರಿಗೆ ತಲಾ 2 ಪತ್ರ, ಎಸ್.ಜಿ ಸಿದ್ಧರಾಮಯ್ಯ ಮತ್ತು ವಸುಂಧರ ಭೂಪತಿಯವರುಗಳಿಗೆ ಒಂದೊಂದು ಪತ್ರಗಳನ್ನು ಬರೆಯಲಾಗಿದೆ.

    ಇವರುಗಳೆಲ್ಲ ಪ್ರಜಾತಾಂತ್ರಿಕ ಮೌಲ್ಯಗಳನ್ನು, ಸಂವಿಧಾನದ ಆಶಯಗಳನ್ನು ರಕ್ಷಿಸುವ ಸಲುವಾಗಿ ಹೋರಾಡುತ್ತಿದ್ದಾರೆ ಹಾಗಾಗಿ ಹಲವು ಬಾರಿ ಆಡಳಿತಾರೂಢ ಸರ್ಕಾರದ ವಿರುದ್ಧ ಮಾತನಾಡಲೇಬೇಕಾಗುತ್ತದೆ. ಇದಿಷ್ಟನ್ನೂ ಸಹಿಸದ ಕಿಡಿಗೇಡಿಗಳು ಜೀವ ಬೆದರಿಕೆಗಳನ್ನು ಒಡ್ಡುವ ಹೀನ ಕೆಲಸ ಮಾಡುತ್ತಿದ್ದಾರೆ. ಅನೇಕ ಸಾರಿ ನನ್ನ ಸೋಷಿಯಲ್ ಮೀಡಿಯಾ ಖಾತೆಗಳಿಗೂ ಬಂದು ಹೀನಮನೋವೃತ್ತಿ ತೋರುವವರೂ ಇದ್ದಾರೆ. ನನಗೂ ಹಲವು ಬೆದರಿಕೆ ಪತ್ರಗಳು ಬಂದಿವೆ. ಸ್ವತಃ ಡಿಜಿಯವರಿಗೆ ನಾನು ಈ ಕುರಿತು ಮಾತನಾಡಿದ್ದೆ. ಇತ್ತೀಚೆಗೆ ಟಿವಿಯೊಂದರಲ್ಲಿ ವೀರೇಶ್ ಎಂಬಾತ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ನನಗೆ ಗುಂಡು ಹಾರಿಸಬೇಕೆಂದು ಹೇಳಿಕೆ ಕೊಟ್ಟಿದ್ದ. ಈ ಬೆದರಿಕೆಯ ಹೇಳಿಕೆ ಹಾಗೂ ಪತ್ರಗಳ ಕುರಿತು ದೂರು ದಾಖಲಿಸಲಾಗಿದೆ.

    ಆದರೂ ಇದುವರೆಗೆ ಸರ್ಕಾರ ಎಫ್‍ಐಆರ್ ದಾಖಲಿಸಿಲ್ಲ. ಇದೇ ವಿಷಯಕ್ಕೆ ಹಲವು ಬಾರಿ ದೂರು ದಾಖಲಿಸಿದರೂ ಎಫ್‍ಐಆರ್ ಮಾಡಿ ತನಿಖೆ ನಡೆಸದಿರುವುದು ಸರ್ಕಾರದ ಬೇಜವಾಬ್ಧಾರಿಯುತವಾದ ನಡವಳಿಕೆ.

    ನಾಡಿನ ಬರಹಗಾರಗಾರರು, ಚಿಂತಕರುಗಳಿಗೆ ಬಹಿರಂಗವಾಗಿ ಜೀವ ಬೆದರಿಕೆ ಪತ್ರಗಳನ್ನು ಬರೆದರೂ ಸರ್ಕಾರ ಸುಮ್ಮನಿದೆಯೆಂದರೆ ಭಿನ್ನ ಮತ ಮತ್ತು ಭಿನ್ನ ಧ್ವನಿಗಳನ್ನು ದಮನಿಸಲು ಪ್ರಯತ್ನಿಸಲಾಗುತ್ತಿದೆ ಅಥವ ಪೊಲೀಸ್ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದರ್ಥ. ಅತ್ಯಂತ ಆಧುನಿಕ ವ್ಯವಸ್ಥೆ ಇದ್ದರೂ ದುರುಳರನ್ನು ಪತ್ತೆ ಹಚ್ಚದೆ ಸರ್ಕಾರ ನಿಷ್ಕ್ರಿಯವಾಗಿದೆ.
    ಈಗಾಗಲೆ ನಾಡಿನ ಪ್ರಖ್ಯಾತ ಚಿಂತಕರು ಹಾಗು ಬಸವ ತತ್ವದ ಅನುಯಾಯಿಗಳಾಗಿದ್ದ ಡಾ.ಎಂ.ಎಂ ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಅವರನ್ನು ಇದೇ ಗೋಡ್ಸೆ ಸಂತತಿಯವರು ಹಾಗು ಮನು ಸಂಸ್ಕಂತಿಯ ಪ್ರತಿಪಾದಕರುಗಳು ಗುಂಡಿಟ್ಟು ಕೊಂದರು. ಕೊಲೆಗಾರರಲ್ಲಿ ಬಹುತೇಕರು ಬಿಜೆಪಿಯನ್ನು ಬೆಂಬಲಿಸುವ ಸನಾತನ ಸಂಸ್ಕಂತಿಯೆಂಬ ಸಂಘಟನೆಯ ಸದಸ್ಯರುಗಳಾಗಿದ್ದಾರೆಂಬ ಮಾಹಿತಿ ಇದೆ. ಈಗಷ್ಟೆ ಆ ಇಬ್ಬರು ಹುತಾತ್ಮ ಚಿಂತಕರ ವಿಚಾರಣೆ ಪ್ರಾರಂಭವಾಗಿದೆ. ಈ ಪ್ರಕರಣಗಳನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸಬೇಕೆಂದು ಒತ್ತಾಯಿಸುತ್ತೇನೆ.‘ಸರ್ವಜನಾಂಗದ ಶಾಂತಿಯ ತೋಟ’ ಎಂದು ಹೆಸರಾದ ಕನ್ನಡ ನಾಡಿನಲ್ಲಿ ಸಮರ್ಥವಾಗಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಭಾಯಿಸಬೇಕಾದ ತುರ್ತು ಅಗತ್ಯವಿದೆ. ಯಾಕೆಂದರೆ ನಾಡಿನಲ್ಲಿ ಪದೇ ಪದೇ ಕಾನೂನು ಸುವ್ಯವಸ್ಥೆ ಕುಸಿದು ಬೀಳುತ್ತಿದೆ.ಆದ್ದರಿಂದ ಸರ್ಕಾರ ಕ್ರಿಯಾಶೀಲವಾಗಬೇಕು. ಬೆದರಿಕೆ ಪತ್ರಗಳನ್ನು ಬರೆಯುತ್ತಿರುವ ದುರುಳರನ್ನು ಕೂಡಲೆ ಪತ್ತೆ ಹಚ್ಚಿ ಕೂಡಲೆ ಶಿಕ್ಷೆ ವಿಧಿಸಿ ಪ್ರಜಾತಾಂತ್ರಿಕ ಮೌಲ್ಯಗಳನ್ನು ರಕ್ಷಿಸಬೇಕೆಂದು ಸರ್ಕಾರವನ್ನು ಆಗ್ರಹಿಸುತ್ತೇನೆ.

    art literature ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleವ್ಯಾಪಾರದ ನೆಪದಲ್ಲಿ ಬಂದು ಸರಗಳ್ಳತನ
    Next Article ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಸ್ಕಾರ್ಟ್ ವಾಹನ ಅಪಘಾತ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    ಅಕ್ಟೋಬರ್ 4, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lune Finvex Avis ರಲ್ಲಿ ಪೋಪ್ ಫ್ರಾನ್ಸಿಸ್ ಗೆ ಮತ್ತೊಂದು ಆರೋಗ್ಯ ಸಮಸ್ಯೆ
    • JeremyPah ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • EricKiple ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe