ಉಡುಪಿ: ಆಟವಾಡುವಾಗ ನೀರಿನ ಹೊಂಡಕ್ಕೆ ಬಿದ್ದು 5ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಬ್ರಹ್ಮಾವರದ ಉಪ್ಪೂರು ತೆಂಕಬೆಟ್ಟು ಎಂಬಲ್ಲಿ ಬುಧವಾರ ನಡೆದಿದೆ.
ನೋರ್ಮನ್ ಮತ್ತು ಸಿಲ್ವಿಯ ದಂಪತಿಗಳ ಪುತ್ರ ಲಾರೆನ್ ಲೂವಿಸ್(5) ಮೃತ ಬಾಲಕ. ಬಾಲಕ ಮನೆ ಪಕ್ಕದಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.