Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೈ ಹಿಡಿದ ಪತ್ನಿ ATM ಅಲ್ಲ…!
    ಸುದ್ದಿ

    ಕೈ ಹಿಡಿದ ಪತ್ನಿ ATM ಅಲ್ಲ…!

    vartha chakraBy vartha chakraಜುಲೈ 19, 2022Updated:ಜುಲೈ 19, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.19-ಯಾವುದೇ ಭಾವನಾತ್ಮಕ ಸಂಬಂಧವಿಲ್ಲದೇ ಪತ್ನಿಯನ್ನು ಹಣ ನೀಡುವ ಹಸು ಅಥವ ಎಟಿಎಂನಂತೆ ನಡೆಸಿಕೊಳ್ಳುವುದು ಮಾನಸಿಕ ಕಿರುಕುಳಕ್ಕೆ ಸಮಾನವಾಗಿದೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
    ಅಲ್ಲದೆ, ಪ್ರಕರಣದಲ್ಲಿ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದು ಮಾಡಿ ಮಹಿಳೆಗೆ ಗಂಡನಿಂದ ವಿಚ್ಛೇದನ ನೀಡಿದ್ದು,
    ಪತಿಯಿಂದ ವಿಚ್ಛೇದನ ನೀಡದ ಕೌಟುಂಬಿಕ ಕೋರ್ಟ್​ ಆದೇಶದ ವಿರುದ್ಧ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಜೆ.ಎಂ.ಖಾಜಿ ಅವರಿದ್ದ ವಿಭಾಗೀಯ ಪೀಠವು ಈ ಆದೇಶ ನೀಡಿದೆ.
    ಪತಿ ಮಹಿಳೆಯೊಂದಿಗೆ ಯಾವುದೇ ಭಾವನಾತ್ಮಕ ಬಾಂಧವ್ಯವನ್ನು ಹೊಂದಿಲ್ಲ. ಕೇವಲ ಯಾಂತ್ರಿಕವಾಗಿ ಪತಿಯ ಪಾತ್ರವನ್ನು ಪೋಷಿಸಿದ್ದಾರೆ. ವ್ಯಾಪಾರ ನಡೆಸುವ ನೆಪದಲ್ಲಿ ಪತ್ನಿಯಿಂದ 60 ಲಕ್ಷ ರೂಗಳನ್ನು ಪತಿ ಪಡೆದುಕೊಂಡಿದ್ದಾರೆ. ಆಕೆಯನ್ನು ಆತ ಕೇವಲ ಹಣ ನೀಡುವ ಎಟಿಎಂ ಆಗಿ ಬಳಸಿಕೊಂಡಿದ್ದಾರೆ. ಗಂಡನ ಈ ವರ್ತನೆಯಿಂದ ಹೆಂಡತಿ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾರೆ. ಇದು ಮಾನಸಿಕ ಕಿರುಕುಳಕ್ಕೆ ಸಮವಾಗುತ್ತದೆ ಎಂದು ಕೋರ್ಟ್​ ಹೇಳಿದೆ.
    ಈ ಪ್ರಕರಣದಲ್ಲಿ ಪತಿಯಿಂದ ಪತ್ನಿಗೆ ಆಗಿರುವ ನೋವು, ಮಾನಸಿಕ ಕಿರುಕುಳ ಎಂದು ಪರಿಗಣಿಸಬಹುದು. ಕೌಟುಂಬಿಕ ನ್ಯಾಯಾಲಯ ಈ ಎಲ್ಲ ಅಂಶಗಳನ್ನು ಪರಿಗಣಿಸಲು ವಿಫಲವಾಗಿದೆ. ಇದಲ್ಲದೇ, ನ್ಯಾಯಾಲಯವು ಮಹಿಳೆಯನ್ನು ಪೂರ್ಣ ವಿಚಾರಿಸದೇ ಕೇವಲ ಹೇಳಿಕೆಗಳನ್ನು ಮಾತ್ರ ದಾಖಲಿಸಿದೆ ಎಂದಿದೆ.
    ವಿಚ್ಛೇದನಕ್ಕೆ ಅಸ್ತು:
    ನೊಂದ ಪತ್ನಿಯ ವಾದವನ್ನು ಪರಿಗಣಿಸಿರುವ ನ್ಯಾಯಾಲಯ ಅವರಿಗೆ ವಿಚ್ಛೇದನ ದಯಪಾಲಿಸಿದೆ. ಕೌಟುಂಬಿಕ ಕಲಹದ ಪ್ರಕರಣಗಳಲ್ಲಿ ಕ್ರೌರ್ಯದ ಆರೋಪಗಳನ್ನು ಪ್ರಕರಣದ ಅರ್ಹತೆಯ ಮೇಲೆ ಪರಿಶೀಲಿಸಬೇಕು ಎಂದು ಪೀಠವು ಒತ್ತಿಹೇಳಿದೆ.
    ಪ್ರಕರಣದ ವಿವರ:
    1991 ರಲ್ಲಿ ವಿವಾಹವಾದ ದಂಪತಿ 2001 ರಲ್ಲಿ ಹೆಣ್ಣು ಮಗುವನ್ನು ಹೊಂದಿದ್ದರು. ವ್ಯಾಪಾರ ನಡೆಸುತ್ತಿದ್ದ ಪತಿ ಸಾಲದ ಸುಳಿಗೆ ಸಿಲುಕಿದ್ದ. ಮರುಪಾವತಿಸಲು ಕಷ್ಟಪಡುತ್ತಿದ್ದರು. ಇದು ಮನೆಯಲ್ಲಿ ನಿತ್ಯ ಜಗಳಕ್ಕೆ ಕಾರಣವಾಗಿತ್ತು. ಈ ವೇಳೆ ಮಹಿಳೆ ಜೀವನಕ್ಕಾಗಿ ಬ್ಯಾಂಕ್‌ ಉದ್ಯೋಗಕ್ಕೆ ಸೇರಿಕೊಂಡಿದ್ದರು. 2008 ರಲ್ಲಿ ಹೆಂಡತಿ ತನ್ನ ಪತಿಗೆ ದುಬೈನಲ್ಲಿ ಸಲೂನ್​ ತೆರೆಯಲು 60 ಲಕ್ಷ ಹಣವನ್ನು ನೀಡಿದ್ದಾರೆ.
    ಆದರೆ, ನಷ್ಟಕ್ಕೀಡಾದ ಪತಿ ಭಾರತಕ್ಕೆ ವಾಪಸ್​ ಆಗಿದ್ದರು. ಹಣ ನೀಡಲು ಪೀಡಿಸುತ್ತಿದ್ದ ಪತಿಯಿಂದ ಮಹಿಳೆ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
    ಆದರೆ ಪ್ರಕರಣದಲ್ಲಿ ಯಾವುದೇ ತಿರುಳಿಲ್ಲ ಎಂದು ಕೋರ್ಟ್​ ಅರ್ಜಿ ವಜಾ ಮಾಡಿತ್ತು. ಇದರ ವಿರುದ್ಧ ಆ ಮಹಿಳೆಯು ಹೈಕೋರ್ಟ್​ ಮೊರೆ ಹೋಗಿದ್ದರು.

    ATM Bangalore dubai Government high court ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಕೊಡವರ ಅಪಮಾನ ಮಾಡಿದವ ಪೊಲೀಸ್ ಬಲೆಗೆ..
    Next Article ಗಿಣಿ ಹುಡುಕಿಕೊಟ್ಟವರಿಗೆ 50 ಸಾವಿರ ನಗದು ಬಹುಮಾನ ..!
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fgsca ರಲ್ಲಿ ಇದು ದರೋಡೆಕೋರರ ಹೆದ್ದಾರಿ | Bengaluru-Mysuru Highway
    • AlbertDuabe ರಲ್ಲಿ ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    • EdwardNor ರಲ್ಲಿ ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe