Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬುಲ್ಡೋಜರ್ ಬೇಕು..
    ಸುದ್ದಿ

    ಬುಲ್ಡೋಜರ್ ಬೇಕು..

    vartha chakraBy vartha chakraಏಪ್ರಿಲ್ 23, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಏ.23- ಅಪರಾಧಿಗಳು ಹಾಗೂ ದಂಗೆಕೋರರನ್ನು ಮಟ್ಟ ಹಾಕಲು ಉತ್ತರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಇರುವ ಬುಲ್ಡೋಜರ್ ಪ್ರಯೋಗ ರಾಜ್ಯದಲ್ಲೂ ಜಾರಿ ಮಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚಿಸುವುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಸಾರ್ವಜನಿಕರ ಆಸ್ತಿಪಾಸ್ತಿಗಳನ್ನು ಹಾಳು ಮಾಡುವವರಿಗೆ ಪಾಠ ಕಲಿಸಲೆಂದೇ ಉತ್ತರಪ್ರದೇಶ ಮತ್ತಿತರ ಕಡೆ ಬುಲ್ಡೋಜರ್ ಮಾದರಿಯನ್ನು ಜಾರಿ ಮಾಡಲಾಗಿದೆ. ಇದನ್ನು ರಾಜ್ಯದಲ್ಲೂ ಅನುಷ್ಠಾನ ಮಾಡುವ ಕುರಿತು ಸಿಎಂ ಜೊತೆ ಮಾತುಕತೆ ನಡೆಸುತ್ತೇನೆ ಎಂದರು.
    ಯಾರು ಸಾರ್ವಜನಿಕರ ಆಸ್ತಿಯನ್ನು ಹಾಳು ಮಾಡುತ್ತಾರೋ ಅಂಥವರಿಗೆ ವಾಸಿಸಲು ಮನೆಯೂ ಕೂಡ ಇರಬಾರದು. ಇವರಿಗೆ ತಕ್ಕ ಪಾಠ ಕಲಿಸಲು ಸರ್ಕಾರ ಸಿದ್ದವಿದೆ. ಘಾತುಕಶಕ್ತಿಗಳನ್ನು ಮಟ್ಟ ಹಾಕಿಯೇ ತೀರುತ್ತೇವೆ ಎಂದು ಗುಡುಗಿದರು.
    ಉತ್ತರಪ್ರದೇಶ, ಮಧ್ಯಪ್ರದೇಶದಲ್ಲಿ ದಂಗೆಕೋರರವ ವಿರುದ್ಧ ಅಲ್ಲಿನ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ನಮ್ಮಲೂ ಕೂಡ ಇದು ಜಾರಿಯಾಗಬೇಕೆಂಬುದು ಬಹುತೇಕರ ಅಭಿಪ್ರಾಯವಾಗಿದೆ ಎಂದರು.
    ಹುಬ್ಬಳ್ಳಿ ದಾಂಧಲೆಕೋರರ ಜತೆ ವಿದೇಶಿಗರ ಜತೆ ನಂಟಿರಬಹುದು. ಹಿಜಾಬ್ ವಿಚಾರವೂ ಮೊದಲು ವಿದೇಶಿ ಚಾನಲ್‍ಗಳಲ್ಲಿ ಪ್ರಸಾರವಾಯಿತು ಇಲ್ಲಿದ್ದುಕೊಂಡು ಪಾಕಿಸ್ತಾನ ಪರ ಜೈ ಎನ್ನುವವರನ್ನು ಸಹಿಸಲು ಸಾಧ್ಯವಿಲ್ಲ. ನಾವು ಎಲ್ಲರನ್ನೂ ಅನುಮಾನದಿಂದ ನೋಡುವುದಿಲ್ಲ. ಆದರೆ ಕೆಲವರು ಒಳ್ಳೆಯವರೂ ಇದ್ದಾರೆ ಎಂದರು.


    ಜಾರಿಗೆ ಬರಲಿ: ಮತ್ತೊಂದೆಡೆ ಸುದ್ದಿಗಾರರೊಂದಿಗೆ‌ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್
    ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಪದೇ ಪದೇ ಸಾರ್ವಜನಿಕರ ಆಸ್ತಿಪಾಸ್ತಿಗಳನ್ನು ನಷ್ಟ ಮಾಡುವವರ ಆಸ್ತಿಯನ್ನು ಮುಟುಗೋಲು ಹಾಕಿಕೊಂಡು ದಂಗೆ ನಿಯಂತ್ರಿಸಲು ಬುಲ್ಡೋಜರ್ ಕಾನೂನನ್ನು ಜಾರಿಗೆ ತರಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
    ಸಮಾಜದಲ್ಲಿ ಆಸ್ತಿ ನಾಶ, ಸರ್ಕಾರಿ ಕಚೇರಿ, ಪೊಲೀಸ್ ಠಾಣೆಗೆ ಬೆಂಕಿ ಹಾಕುವುದು, ನಾಗರಿಕರಲ್ಲಿ ಮತ್ತು ಪೊಲೀಸರಲ್ಲಿ ಆತ್ಮಸ್ಥೈರ್ಯ ಕುಂದಿಸುವ ಕೆಲಸಗಳು ಭಯೋತ್ಪಾದನೆ ಚಟುವಟಿಕೆಗಳಿಗೆ ಸಮ ಎಂದು ಹೇಳಿದರು. ಯಾರು ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಾರೋ ಅಂಥವರ ಆಸ್ತಿಯನ್ನು ಮುಟುಗೋಲು ಹಾಕಿಕೊಳ್ಳಬೇಕು. ಇದು ತಪ್ಪೇನೂ ಅಲ್ಲ. ಇದಕ್ಕಾಗಿ ಬುಲ್ಡೋಜರ್ ಕಾನೂನು ಜಾರಿಗೆ ತರಬೇಕೆಂದು ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಒತ್ತಾಯಿಸುವುದಾಗಿ ತಿಳಿಸಿದರು.
    ಗುಜರಾತ್, ಉತ್ತರಪ್ರದೇಶ, ಮಧ್ಯಪ್ರದೇಶಗಳಲ್ಲಿ ಗಲಭೆ ನಿಯಂತ್ರಣಕ್ಕೆ ಕಠಿಣವಾದ ಕಾನೂನುಗಳಿವೆ. ಇದರಲ್ಲಿ ಯಾವುದೇ ಜಾತಿಮತ ಪಂಥಗಳ ಬೇಧವಿಲ್ಲ. ಇಂದು ರಾಜಕೀಯ ಪ್ರೇರಿತ ಗಲಭೆಗಳು ಹೆಚ್ಚಾಗುತ್ತಿವೆ ಎಂದರು. ಚುನಾವಣಾ ವರ್ಷ ಆಗಿರುವುದರಿಂದ ಕೆಲವು ಸಮಾಜಘಾತುಕ ಶಕ್ತಿಗಳು ಗಲಭೆಗಳನ್ನು ಸೃಷ್ಟಿ ಮಾಡುತ್ತಾರೆ. ಇದರ ವಿರುದ್ಧ ಕಠಿಣವಾದ ಕಾನೂನುಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ. ಯಾರೇ ಇರಲಿ ದಂಗೆಕೋರರ ಆಸ್ತಿಯನ್ನು ಮುಟುಗೋಲು ಹಾಕಿಕೊಂಡರೂ ತಪ್ಪಿಲ್ಲ ಎಂದು ಅಭಿಪ್ರಾಯಪಟ್ಟರು.

    Verbattle
    Verbattle
    Verbattle
    #bollywood #nalinkumarkateel
    Share. Facebook Twitter Pinterest LinkedIn Tumblr Email WhatsApp
    Previous Articleಪ್ರತಿಭಟನೆ ಹೀಗೂ ಮಾಡಬಹುದು…!!!
    Next Article ಮಾಲಗಾರನಹಳ್ಳಿ ಗ್ರಾಮಕ್ಕೆ ಅಂಬೇಡ್ಕರ್…!!!
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • X88 ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Krovlyanub ರಲ್ಲಿ ಲೋಕಾಯುಕ್ತಕ್ಕೆ ಏನಾಗಿದೆ.?
    • c168 com ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.