Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪುರುಷತ್ವ ಪರೀಕ್ಷೆಯಲ್ಲಿ ಶರಣರು ಫಿಟ್
    ಸುದ್ದಿ

    ಪುರುಷತ್ವ ಪರೀಕ್ಷೆಯಲ್ಲಿ ಶರಣರು ಫಿಟ್

    vartha chakraBy vartha chakraಸೆಪ್ಟೆಂಬರ್ 3, 2022Updated:ಸೆಪ್ಟೆಂಬರ್ 3, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿತ್ರದುರ್ಗ, ಸೆ.3-ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಪುರುಷತ್ವ ಪರೀಕ್ಷೆಯಲ್ಲಿ ಸಧೃಡ(ಫಿಟ್) ರಾಗಿದ್ದು ಸದ್ಯ ಜಾಮೀನು ದೊರೆಯುವುದು ಕೂಡ ಕಷ್ಟವಾಗಿದೆ.
    ಪೊಲೀಸರು ರಹಸ್ಯ ಸ್ಥಳದಲ್ಲಿ ನಿನ್ನೆ ರಾತ್ರಿಯಿಂದ ಶ್ರೀಗಳನ್ನು ವಿಚಾರಣೆ ನಡೆಸುತ್ತಿರುವ ಬೆನ್ನಲ್ಲೇ ಅವರು ಗಂಡಸ್ತನದಲ್ಲಿ ಫಿಟ್ ಆಗಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಧೃಢಪಟ್ಟಿದೆ.
    ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಶಿವಾಚಾರ್ಯ ಶರಣರ ಪುರುಷತ್ವ ಪರೀಕ್ಷೆ ಮಾಡಿದ್ದು ವರದಿಯಲ್ಲಿ ಶರಣರು ಗಂಡಸತ್ವ ಸಾಬೀತಾಗಿದೆ.
    ಶರಣರ ಡಿಎನ್‌ಎ, ರಕ್ತ, ಮೂತ್ರ, ಕೂದಲು ಸೇರಿದಂತೆ ಹಲವು ಸ್ಯಾಂಪಲ್‌ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯ ಪಡೆದಿದ್ದು ಅದರ ಪರೀಕ್ಷೆ ವರದಿ ಬರಬೇಕಿದೆ. ಶಿವಾಚಾರ್ಯರಿಗೆ ನಿನ್ನೆ ಸಂಜೆಯೇ
    ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು. ಇಂದು ಬೆಳಗ್ಗೆಯೇ ಈ ಸಂಬಂಧ ವರದಿಯನ್ನು ಕೂಡ ನೀಡಲಾಗಿದೆ.
    ಉಳಿದ ಮಾದರಿಗಳನ್ನು ಮಡಿವಾಳದ ಎಫ್‌ಎಸ್‌ಎಲ್‌ಗೆ ರವಾನಿಸಲಾಗಿದೆ. ಈ ಹಿಂದೆ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿ ಪುರುಷನಲ್ಲ ಎಂದು ಅಫಿಡವಿಟ್‌ ಸಲ್ಲಿಸಿದರೆ ಮಾತ್ರ ಪರೀಕ್ಷೆಗೊಳಪಡಿಸಲಾಗುತ್ತಿತ್ತು. ನಿತ್ಯಾನಂದ ಪ್ರಕರಣದಲ್ಲಿ ಇದೇ ರೀತಿ ಅಫಿಡವಿಟ್‌ ಸಲ್ಲಿಕೆಯ ನಂತರ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು. ಅಸಾರಾಂ ಬಾಪುವನ್ನು ಕೂಡ ಪುರುಷತ್ವ ಪರೀಕ್ಷೆಗೆ ಒಳಪಡಿಸಲಾಗಿತ್ತು.
    ಆದರೆ ಇತ್ತೀಚಿನ ಪ್ರಕರಣಗಳಲ್ಲಿ, ಕಡ್ಡಾಯವಾಗಿ ಪುರುಷತ್ವ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞ ಡಾ. ಗಿರೀಶ್‌ ತಿಳಿಸಿದ್ದಾರೆ. ಇದೇ ಕಾರಣಕ್ಕಾಗಿ ಮುರುಘಾ ಶರಣರ ಪುರುಷತ್ವ ಪರೀಕ್ಷೆ ನಡೆಸಲಾಗಿದೆ.
    ಜಾಮೀನು ನಿರಾಕರಣೆ:
    ಹೇಗಾದರೂ ಮಾಡಿ ಜೈಲು ಪಾಲಾಗುವುದನ್ನು ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವ ಮುರುಘಾ ಶರಣರು ಮತ್ತೆ ಜಾಮೀನು ಅರ್ಜಿ ಸಲ್ಲಿಸಿದ್ದರು.
    ಮುರುಘಾ ಮಠದ ಆಪ್ತ ವಕೀಲ ಉಮೇಶ್ ಅವರು ಬೆಳಿಗ್ಗೆ 11 ಗಂಟೆಗೆ ಶ್ರೀಗಳ ಪರವಾಗಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು
    ಆದರೆ ಪೊಲೀಸ್‌ ಕಸ್ಟಡಿ ಮುಗಿಯುವ ವರೆಗೂ ಜಾಮೀನು ಅರ್ಜಿ ವಿಚಾರಣೆ ನಡೆಸುವುದಿಲ್ಲ ಎಂದು ನ್ಯಾಯಾಲಯ ನೇರವಾಗಿ ತಿಳಿಸಿದೆ.
    ಇದರಿಂದ ಕಾನೂನು ಹೋರಾಟದಲ್ಲಿ ಮುರುಘಾ ಶರಣರಿಗೆ ಮತ್ತೆ ಹಿನ್ನಡೆಯಾಗಿದೆ. ಸೆ.5ಕ್ಕೆ ಪೊಲೀಸ್‌ ಕಸ್ಟಡಿ ಅಂತ್ಯವಾಗಲಿದ್ದು, ಅದರ ನಂತರ ಅರ್ಜಿ ವಿಚಾರಣೆ ನಡೆಸುವುದಾಗ ನ್ಯಾಯಾಲಯ ತಿಳಿಸಿದೆ.
    ಪೊಲೀಸ್‌ ಕಸ್ಟಡಿ ಮುಗಿದ ನಂತರ ಮತ್ತಷ್ಟು ದಿನಗಳ ಕಾಲ ಕಸ್ಟಡಿಗೆ ಪೊಲೀಸರು ಮನವಿ ಮಾಡುವ ಸಾಧ್ಯತೆಯಿದೆ. ಗಂಭೀರ ಪ್ರಕರಣವಾಗಿರುವುದರಿಂದ ನ್ಯಾಯಾಲಯ ಕಸ್ಟಡಿಯನ್ನು ಮುಂದೂಡುವ ಸಾಧ್ಯತೆಯೂ ಇದೆ ಎನ್ನುತ್ತಾರೆ ಕಾನೂನು ತಜ್ಞರು.
    ಪೊಲೀಸ್ ಡ್ರಿಲ್:
    ಶ್ರೀಗಳ ವಿಚಾರಣೆ ನಡೆಸುವ ಸ್ಥಳ ಗೊತ್ತಾದರೆ ಭಕ್ತರು ಅಭಿಮಾನಿಗಳು ಧಾವಿಸಿ ಗೊಂದಲ ಉಂಟಾಗುವ ಹಿನ್ನೆಲೆಯಲ್ಲಿ ರಹಸ್ಯ ಸ್ಥಳದಲ್ಲಿ ಶ್ರೀಗಳನ್ನು ವಿಚಾರಣೆ ನಡೆಸಿ ಪೊಲೀಸರು ಪ್ರಕರಣದ ಮಾಹಿತಿಯನ್ನು ಸಂಗ್ರಹಿಸ ತೊಡಗಿದ್ದಾರೆ.
    ನಗರದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಖುದ್ದಾಗಿ‌ ನಿನ್ನೆ ಸಂಜೆ ಹಾಜರಾದ ನ್ಯಾಯಾಂಗ ಬಂಧನದಲ್ಲಿದ್ದ ಶರಣರನ್ನು ತಮ್ಮ ವಶಕ್ಕೆ ಒಪ್ಪಿಸುವಂತೆ ಪೊಲೀಸರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಕೆ. ಕೋಮಲಾ ಅವರು ಸೆ‌.5 ರವರೆಗೆ ಪೊಲೀಸ್‌ ವಶಕ್ಕೆ ನೀಡಿದ್ದರು.
    ಶ್ರೀಗಳಿಗೆ ಪ್ರಶ್ನೆ:
    ಇದೇ ವೇಳೆ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯಲು ಕಾರಾಗೃಹದ ಅಧೀಕ್ಷಕರು ಸಿದ್ಧತೆ ನಡೆಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಶ್ರೀಗಳನ್ನು ವಶಕ್ಕೆ ತೆಗೆದುಕೊಂಡು ಡಿವೈಎಸ್‌ಪಿ ಕಚೇರಿಗೆ ಕರೆದೊಯ್ದು ಅಲ್ಲಿಂದ ‌ರಹಸ್ಯ ಸ್ಥಳಕ್ಕೆ ‌ಕರೆದುಕೊಂಡು ಹೋಗಿ ವಿಚಾರಣೆ ಮುಂದುವರೆಸಲಾಗಿದೆ.

    Verbattle
    Verbattle
    Verbattle
    ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಡ್ರಗ್ಸ್ ಚಟಕ್ಕೆ ಬಿದ್ದು ಬಲಿಯಾದವರೆಷ್ಟು ಗೊತ್ತಾ?
    Next Article ಶಾಸಕರಿಗಿದೆಯಾ ಈ ಅಧಿಕಾರ?
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Glennhof ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • Glennhof ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.