Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭರ್ಜರಿ ಬೇಟೆ
    ಸುದ್ದಿ

    ಭರ್ಜರಿ ಬೇಟೆ

    vartha chakraBy vartha chakraಸೆಪ್ಟೆಂಬರ್ 13, 2022Updated:ಸೆಪ್ಟೆಂಬರ್ 13, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.13- ಮಾದಕವಸ್ತು ಮಾರಾಟ ಸರಬರಾಜು ವಿರುದ್ಧ ಸಮರ ಸಾರಿರುವ ಬೆಂಗಳೂರು ಪೊಲೀಸರು ರೈಲಿನ ಮೂಲಕ ಗಾಂಜಾ ಕಳ್ಳ ಸಾಗಾಣೆ ಮಾಡುತ್ತಿದ್ದ ಜಾಲವನ್ನು ಭೇದಿಸಿ 5 ಕೋಟಿ ಮೌಲ್ಯದ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
    ಕೆಂಪೇಗೌಡ ನಗರ ಪೊಲೀಸರು ಮಹಿಳೆ ಸೇರಿ ಐವರು ಆರೋಪಿಗಳನ್ನು ಬಂಧಿಸಿ 2 ಕೋಟಿ ಮೌಲ್ಯದ 506 ಕೆಜಿ ಗಾಂಜಾ ವಶಪಡಿಸಿಕೊಂಡರೆ, ಜಯನಗರ ಪೊಲೀಸರು 3 ಕೋಟಿ ರೂ. ಮೌಲ್ಯದ 50 ಕೆಜಿ ಗಾಂಜಾ, 6 ಕೆಜಿ ಆಶಿಶ್ ಆಯಿಲ್‍ನ್ನು ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್‍ರೆಡ್ಡಿ ಅವರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
    ಕೆಂಪೇಗೌಡ ನಗರ ಪೊಲೀಸರು ರೈಲಿನಲ್ಲಿ ಗಾಂಜಾ ಸಾಗಿಸುತ್ತಿದ್ದ ನವಾಜ್‍ಪಾಶ, ನೂರ್ ಅಹ್ಮದ್, ಶ್ರೀಮತಿ ಮುಬಾರಕ್, ಇಮ್ರಾನ್‍ಪಾಷ, ಕಿರಣ್ ಅಲಿಯಾಸ್ ಬಂಗಾರಪ್ಪನನ್ನು ಬಂಧಿಸಿದ್ದಾರೆ.
    ಬಂಧಿತ ಆರೋಪಿಗಳು ಕೆಂಪಾಂಬುದಿ ಕೆರೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಕೆಂಪೇಗೌಡ ನಗರ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಆರೋಪಿಗಳು ಒರಿಸ್ಸಾದ ಮಲ್ಕಾನ್‍ಗಿರಿಯಿಂದ ಗಾಂಜಾವನ್ನು ಕಳ್ಳಸಾಗಾಣಿಕೆ ಮಾಡಿಕೊಂಡು ಬಂದು ಕೆಂಗೇರಿಯ ಮನೆಯೊಂದರಲ್ಲಿ ಶೇಖರಿಸಿಟ್ಟಿದ್ದರು.
    ಮನೆಯ ಮೇಲೆ ದಾಳಿ ನಡೆಸಿ 500 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು. ಆರೋಪಿಗಳು 10 ರಿಂದ 25 ಕೆಜಿ ತೂಕದ ಲಗೇಜ್ ಬ್ಯಾಗ್‍ನಲ್ಲಿ ಗಾಂಜಾವನ್ನು ಸುಗಂದದ್ರವ್ಯ ಬಳಸಿ, ವಾಸನೆ ಗೊತ್ತಾಗದಂತೆ ತುಂಬಿಕೊಂಡು ರೈಲಿನ ಸೀಟುಗಳಡಿ ಇಟ್ಟುಕೊಂಡು ಸಾಗಾಣೆ ಮಾಡುತ್ತಿದ್ದರು.
    ಬಂಧಿತ ಆರೋಪಿಗಳು ಹಲವು ದಿನಗಳಿಂದ ಗಾಂಜಾವನ್ನು ಭುವನೇಶ್ವರದಿಂದ ಕಳ್ಳಸಾಗಾಣಿಕೆ ಮಾಡಿಕೊಂಡು ಬಂದು ಮಾರಾಟ ಮಾಡಿರುವುದನ್ನು ಬಾಯ್ಬಿಟ್ಟಿದ್ದಾರೆ ಎಂದು ಹೇಳಿದರು.
    ಜಯನಗರ ಪೊಲೀಸರು ಅಶೀಶ್ ಅಯಿಲ ಹಾಗೂ ಗಾಂಜಾ ಮಾರಾಟಮಾಡುತ್ತಿದ್ದ ನಯಾಜ್‍ಪಾಷ, ಸಾಗರ್‍ತಾಹೊ ಹಾಗೂ ಶೇಷಗಿರಿ ಸೇರಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 20 ಲಕ್ಷ ಮೌಲ್ಯದ 50 ಕೆಜಿ ಗಾಂಜಾ, 2.80 ಲಕ್ಷ ಮೌಲ್ಯದ 6 ಕೆಜಿ ಆಶಿಶ್ ಆಯಿಲ್‍ನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
    ಗಾಂಜಾ ಪ್ರಕರಣದಲ್ಲಿ ಹಿಂದೆ ಬಂಧಿತನಾಗಿದ್ದ ಆರೋಪಿ ನಯಾಜ್‍ಪಾಷ ನೀಡಿದ ಮಾಹಿತಿಯಾಧರಿಸಿ ಆಂಧ್ರಪ್ರದೇಶದ ಶ್ರೀಕಾಕೊಳಂಗೆ ತೆರಳಿದ್ದ ಜಯನಗರ ಮಂಜುನಾತ್ ಅವರ ತಂಡ ಇನ್ನಿಬ್ಬರನ್ನು ಬಂಧಿಸಿ ಕಾರ್ಯಾಚರಣೆ ಕೈಗೊಂಡಿದೆ ಎಂದು ತಿಳಿಸಿದರು.
    ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಅವರ ನೇತೃತ್ವದಲ್ಲಿ ಜಯನಗರ ಹಾಗೂ ಕೆಂಪೇಗೌಡ ನಗರ ಪೊಲೀಸರ ವಿಶೇಷ ತಂಡಗಳು ಕಾರ್ಯಾಚರಣೆ ಕೈಗೊಂಡು ಬೃಹತ್ ಪ್ರಮಾಣದ ಮಾದಕವಸ್ತು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು.
    ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್‍ಪಾಟೀಲ್, ಡಿಸಿಪಿ ಕೃಷ್ಣಕಾಂತ್ ಅವರಿದ್ದರು

    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನಸಭೆಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ
    Next Article ಅಜ್ಜಿ ತನ್ನ ಗಂಡನ ವಿರುದ್ಧ ಕೊಟ್ಟ ದೂರು ಎನು ಗೊತ್ತಾ?
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • GerardStern ರಲ್ಲಿ Congress ಟಿಕೆಟ್ ಹಂಚಿಕೆಗೆ ಹಿರಿಯರ ಅಡ್ಡಿ
    • GerardStern ರಲ್ಲಿ ಎಸ್ಎಂ ಕೃಷ್ಣ ಆರೋಗ್ಯದಲ್ಲಿ ವ್ಯತ್ಯಾಸ-ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ.
    • 0pau1 ರಲ್ಲಿ Cricket Betting ಅಡ್ಡೆ ಮೇಲೆ ದಾಳಿ
    Latest Kannada News

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe