Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿಂಜೋ ಅಬೆ‌ ಅಂತ್ಯಸಂಸ್ಕಾರದ ಸುತ್ತ ವಿವಾದ ಯಾಕೆ ಗೊತ್ತಾ?
    ವಿಶೇಷ ಸುದ್ದಿ

    ಶಿಂಜೋ ಅಬೆ‌ ಅಂತ್ಯಸಂಸ್ಕಾರದ ಸುತ್ತ ವಿವಾದ ಯಾಕೆ ಗೊತ್ತಾ?

    vartha chakraBy vartha chakraಸೆಪ್ಟೆಂಬರ್ 26, 2022Updated:ಸೆಪ್ಟೆಂಬರ್ 26, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಟೋಕಿಯೋ – ದುಷ್ಕರ್ಮಿಯ ಗುಂಡಿಗೆ ಬಲಿಯಾದ ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಸುದೀರ್ಘ ಅವಧಿಯ ನಂತರ ಸೆಪ್ಟೆಂಬರ್ 27 ರಂದು ನಡೆಯಲಿದೆ. ಸಕಲಬಸರ್ಕಾರಿ ಗೌರವದೊಂದಿಗೆ ಮಾಜಿ ಪ್ರಧಾನಿ ಅಂತ್ಯಸಂಸ್ಕಾರಕ್ಕೆ ತೀರ್ಮಾನಿಸಲಾಗಿದ್ದು ಇದೀಗ ಅದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.
    ಅಂತ್ಯಸಂಸ್ಕಾರದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲು ಸಾರ್ವಜನಿಕರೂ ನಿರಾಕರಿಸಿದ್ದಾರೆ.
    ಸರ್ಕಾರಿ ಅಂತ್ಯಕ್ರಿಯೆ ವಿರೋಧಿಸಿ ಟೋಕಿಯೋದ ಪ್ರಧಾನಿ ಕಚೇರಿ ಬಳಿ ವೃದ್ಧರೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರಯತ್ನ ನಡೆಸಿದೆ
    ಜಪಾನಿನಲ್ಲಿ ಸರ್ಕಾರೀ ಗೌರವಗಳೊಂದಿಗೆ ಮೃತ ಗಣ್ಯರ ಅಂತ್ಯ ಸಂಸ್ಕಾರ ನಡೆಸುವುದು ಬಹಳ ಅಪರೂಪ. ಶಿಂಜೋ ಅಬೆಯವರ ಅಂತಿಮ ವಿಧಿ ವಿಧಾನಗಳು ಹಾಗೆ ನಡೆಸಲು ನಿರ್ಧರಿಸಿದ್ದು ವಿವಾದಕ್ಕೀಡಾಗಿದೆ. ಜಪಾನಿನಲ್ಲಿ ನಡೆಸಲಾದ ಜನಮತವೊಂದರ ಪ್ರಕಾರ ಅರ್ಧಕ್ಕಿಂತ ಹೆಚ್ಚು ಜನ ಸಕಲ ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸುವುದನ್ನು ವಿರೋಧಿಸಿದ್ದಾರೆ.
    ಶಿಂಜೋ ಅಬೆ ಅವರ ಅಂತ್ಯಕ್ರಿಯೆಗೆ ಸುಮಾರು 910 ಕೋಟಿ ರೂಪಾಯಿ ವೆಚ್ಚವಾಗಲಿದೆ.ಇದು ಅಲ್ಲಿನ ನಾಗರಿಕರ ಕಣ್ಣು ಕೆಂಪಗಾಗಿಸಿದೆ. ಟೋಕಿಯೊ ಕೋರ್ಟ್‌ನಲ್ಲಿ ರಾಜ್ಯ ಗೌರವವನ್ನು ನಿಷೇಧಿಸುವಂತೆ ಒತ್ತಾಯಿಸಿ ಅರ್ಜಿ ಕೂಡ ಬಂದಿದೆ.
    ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಸೆಪ್ಟೆಂಬರ್ ಸಂಸತ್ತಿನ ಚರ್ಚೆಯಲ್ಲಿ ಶಿಂಜೋ ಅಬೆ ಅಂತ್ಯ ಸಂಸ್ಕಾರಕ್ಕೆ 910 ಕೋಟಿ ರೂಪಾಯಿಯನ್ನು ಯಾವ ಕಾರಣಕ್ಕಾಗಿ ಖರ್ಚು ಮಾಡಲಾಗುತ್ತಿದೆ ಎನ್ನುವುದನ್ನು ವಿವರಿಸಿದ್ದಾರೆ. ಇದು ಇತ್ತೀಚೆಗೆ ನಡೆದ ಇಂಗ್ಲೆಂಡ್ ರಾಣಿಯ ಅಂತ್ಯ ಸಂಸ್ಕಾರಕ್ಕೆ‌ ಮಾಡಿದ‌ ವೆಚ್ಚಕ್ಕಿಂತ ಅಧಿಕ ಎನ್ನಲಾಗಿದೆ.
    ಶಿಂಜೋ ಅಬೆ ಅವರ ಅಂತ್ಯ ಸಂಸ್ಕಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳ ಗಣ್ಯರು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ಸೇರಿದಂತೆ ಹಲವಾರು ಕಾರಣಗಳಿಂದ ಇಷ್ಟು ವೆಚ್ಚ ಮಾಡಬೇಕಾಗಿದೆ ಕಾರ್ಯಕ್ರಮದಲ್ಲಿ190 ದೇಶಗಳ 6,400 ಮಂದಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.ಎಂದು ಪ್ರಧಾನಿ ಕಿಶಿಡಾ ವಿವರಿಸಿದ್ದಾರೆ.
    ಕಳೆದ 2011ರಲ್ಲಿ ಜಪಾನ್‌ಗೆ ಸುನಾಮಿ ಅಪ್ಪಳಿಸಿತ್ತು. ಈ ವೇಳೆ ಶಿಂಜೋ ಅಬೆ ಇಡೀ ದೇಶದ ಆರ್ಥಿಕತೆಗೆ ಒಂಚೂರು ಹಾನಿಯಾಗದಂತೆ ಕಾಪಾಡಿದ್ದರು. ಈ ಸಲುವಾಗಿ ಅವರ ಅಂತ್ಯ ಸಂಸ್ಕಾರವನ್ನು ಸರ್ಕಾರಿ ವಿಧಿ ವಿಧಾನದೊಂದಿಗೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ ಈ ವಿವರಣೆ ಒಪ್ಪಲು ನಾಗರಿಕರು ತಯಾರಿಲ್ಲ.ದೇಶ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ.ಟೋಕಿಯೋ ಒಲಂಪಿಕ್ ಗೆ ಸಾಕಷ್ಟು ವೆಚ್ಚ ಮಾಡಬೇಕಾದ ಅನಿವಾರ್ಯತೆ ಇದೆ ಇಂತಹ ಸಮಯದಲ್ಲಿ ಮಾಜಿ ಪ್ರಧಾನಿ ಅಂತ್ಯ ಸಂಸ್ಕಾರಕ್ಕೆ ಇಷ್ಟೊಂದು ವೆಚ್ಚ ಮಾಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತವಾಗಿದೆ.
    ಜುಲೈ 8 ರಂದು ಅಬೆ ಹತ್ಯೆಯಾದ ನಂತರ ಕುಟುಂಬವು ಜುಲೈ 15 ರಂದು ಅಂತ್ಯಕ್ರಿಯೆಗಳನ್ನು ಮಾಡಲು ನಿರ್ಧರಿಸಲಾಗಿತ್ತು. ಆದರೆ, ಸರ್ಕಾರಿ ಅಂತ್ಯಕ್ರಿಯೆಯ ಕಾರಣ ಇದು ವಿಳಂಬವಾಗಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಮದ್ಯಪಾನ ಮಾಡಿಸಿ ಗ್ಯಾಂಗ್ ರೇಪ್
    Next Article ಅದ್ದೂರಿ ದಸರಾಗೆ ವೈಭವದ ಚಾಲನೆ
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rekonstrykciya zdanii_phea ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • Epggmg ರಲ್ಲಿ ಜೈಲಿನಲ್ಲೇ ಕೊಲೆಯಾದ ಪಾತಕಿ.
    • LarryCax ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.