Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಂಜಾಬ್ ಪೊಲೀಸ್ ಠಾಣೆ ಮೇಲೆ ಪಾಕ್ ಗ್ರನೇಡ್ ದಾಳಿ
    ಸುದ್ದಿ

    ಪಂಜಾಬ್ ಪೊಲೀಸ್ ಠಾಣೆ ಮೇಲೆ ಪಾಕ್ ಗ್ರನೇಡ್ ದಾಳಿ

    vartha chakraBy vartha chakraಡಿಸೆಂಬರ್ 10, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಅಮೃತಸರ(ಪಂಜಾಬ್​),ಡಿ.10-ರಾಜ್ಯದ ತರ್ನ್ ತರನ್​ನ ಗಡಿ ಪ್ರದೇಶದಲ್ಲಿ ನಿನ್ನೆ ಮಧ್ಯರಾತ್ರಿ ಪೊಲೀಸ್ ಠಾಣೆಯ ಮೇಲೆ ಶಂಕಿತ ರಾಕೆಟ್ ಗ್ರೆನೇಡ್ ದಾಳಿ ನಡೆಸಲಾಗಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
    ತರ್ನ್ ತರನ್ ಜಿಲ್ಲೆಯ ಅಮೃತಸರ- ಭಟಿಂಡಾ ಹೆದ್ದಾರಿಯಲ್ಲಿರುವ ಸರ್ಹಾಲಿ ಪೊಲೀಸ್ ಠಾಣೆಗೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಸ್ಪೋಟಕ ಅಪ್ಪಳಿಸಿತ್ತು. ಈ ದಾಳಿಯ ಹಿಂದೆ ಪಾಕಿಸ್ತಾನಿ ಉಗ್ರರ ಕೈವಾಡವಿದೆ ಎಂದು ಶಂಕಿಸಲಾಗಿದೆ.
    ಅಪರಿಚಿತ ದಾಳಿಕೋರರು ರಾಕೆಟ್ ಲಾಂಚರ್ ತರಹದ ಸಾಧನವನ್ನು ರಾಷ್ಟ್ರೀಯ ಹೆದ್ದಾರಿ 54ರಿಂದ ಸರ್ಹಾಲಿಯ ಪೊಲೀಸ್ ಠಾಣೆಗೆ ಹಾರಿಸಿದ್ದಾರೆ. ಈ ರಾಕೆಟ್ ದಾಳಿಯಿಂದಾಗಿ ಪೊಲೀಸ್ ಠಾಣೆಯ ಗೋಡೆಗಳು, ಬಾಗಿಲುಗಳ ಗ್ಲಾಸ್​ಗಳು ಒಡೆದು ಹೋಗಿವೆ. ಈ ದಾಳಿಯ ನಂತರ, ತರ್ನ್ ತರನ್​ನ ಎಸ್‌ಎಸ್‌ಪಿ ದಾಳಿ ನಡೆದ ಸ್ಥಳಕ್ಕೆ ಆಗಮಿಸಿ, ದಾಳಿಗೆ ಬಳಸಿದ ರಾಕೆಟ್ ಅನ್ನು ಪೊಲೀಸ್ ಠಾಣೆಯ ಒಳಗಿನಿಂದ ವಶಪಡಿಸಿಕೊಳ್ಳಲಾಯಿತು. ರಾಕೆಟ್ ಜೊತೆಗೆ ಪೈಪ್ ತರಹದ ವಸ್ತು ಕೂಡ ಪತ್ತೆಯಾಗಿದೆ .
    ಸರ್ಹಾಲಿಯು ಕುಖ್ಯಾತ ದರೋಡೆಕೋರ ಹರ್ವಿಂದರ್ ಸಿಂಗ್ ಅಲಿಯಾಸ್ ರಿಂಡಾನ ಊರಾಗಿದೆ. ಆತ ಕೆಲವು ದಿನಗಳ ಹಿಂದೆ ಪಾಕಿಸ್ತಾನದಲ್ಲಿ ಸಾವನ್ನಪ್ಪಿದ್ದ ಎಂದು ಶಂಕಿಸಲಾಗಿದೆ. ಹರ್ವಿಂದರ್ ಸಿಂಗ್ ರಿಂಡಾ ಮೂತ್ರಪಿಂಡ ವೈಫಲ್ಯದಿಂದ 15 ದಿನಗಳ ಕಾಲ ಲಾಹೋರ್‌ನ ಆಸ್ಪತ್ರೆಗೆ ದಾಖಲಾಗಿದ್ದ. ಅಲ್ಲಿ ಆತ ನಿಧನನಾಗಿದ್ದಾನೆ.
    ಪಾಕಿಸ್ತಾನದ ಐಎಸ್‌ಐ ಆಶ್ರಯದಲ್ಲಿ ಖಲಿಸ್ತಾನ್ ಬೆಂಬಲಿತ ಭಯೋತ್ಪಾದಕರು ಈ ದಾಳಿಯನ್ನು ನಡೆಸಿದ್ದಾರೆ ಎಂದು ಶಂಕಿಸಲಾಗಿದೆ.
    ಇದಕ್ಕೂ ಮುನ್ನ ಮೇ 9ರಂದು ಮೊಹಾಲಿಯಲ್ಲಿರುವ ಪಂಜಾಬ್ ಪೊಲೀಸ್ ಗುಪ್ತಚರ ಕೇಂದ್ರ ಕಚೇರಿ ಮೇಲೆ ರಾಕೆಟ್ ಪ್ರೊಪೆಲ್ಡ್ ಗ್ರೆನೇಡ್ (ಆರ್‌ಪಿಜಿ) ಬಳಸಿ ದಾಳಿ ನಡೆಸಲಾಗಿತ್ತು. ಮೊಹಾಲಿಯಲ್ಲಿರುವ ಪಂಜಾಬ್ ಪೊಲೀಸರ ಗುಪ್ತಚರ ಕಚೇರಿಯ 3ನೇ ಮಹಡಿಯಲ್ಲಿ ಕಳೆದ ಡಿ.5ರಂದು ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸರು 6 ಜನರನ್ನು ಬಂಧಿಸಿದ ಬೆನ್ನಲ್ಲೇ ಈ ಘಟನೆ ನಡೆದಿತ್ತು.
    ಮೊಹಾಲಿ ಸ್ಫೋಟ ಪ್ರಕರಣದಲ್ಲಿ ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಭಾಗಿಯಾಗಿರುವುದನ್ನು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ವಿಕೆ ಭಾವ್ರಾ ಬಹಿರಂಗಪಡಿಸಿದ್ದರು.
    ಪಾಕಿಸ್ತಾನಿ ಗುಪ್ತಚರ ಸಂಸ್ಥೆ ಐಎಸ್‌ಐನ ಸೂಚನೆ ಮೇರೆಗೆ ನಡೆದ ಬಾಂಬ್ ಸ್ಫೋಟದಲ್ಲಿ ಖಲಿಸ್ತಾನಿ ಭಯೋತ್ಪಾದಕ ಗುಂಪು ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್ (ಬಿಕೆಐ) ಮತ್ತು ಸ್ಥಳೀಯ ದರೋಡೆಕೋರರು ಭಾಗಿಯಾಗಿದ್ದಾರೆ ಎಂದು ಪಂಜಾಬ್ ಡಿಜಿಪಿ ಹೇಳಿದ್ದರು.
    ಎರಡು ದಿನಗಳ ಹಿಂದೆಯಷ್ಟೇ ಭಯೋತ್ಪಾದನಾ ದಾಳಿಯ ಬಗ್ಗೆ ಗುಪ್ತಚರ ಮಾಹಿತಿಯ ಹಿನ್ನೆಲೆಯಲ್ಲಿ ಪಂಜಾಬ್ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ವರದಿಗಳ ಪ್ರಕಾರ, ಪಂಜಾಬ್‌ನ ಪೊಲೀಸ್ ಠಾಣೆಗಳು ಮತ್ತು ಇತರ ಸರ್ಕಾರಿ ಕಟ್ಟಡಗಳನ್ನು ಹೈ ಅಲರ್ಟ್‌ನಲ್ಲಿ ಇರಿಸಲು ಸೂಚಿಸಲಾಗಿತ್ತು. ಇದೀಗ ಪೊಲೀಸ್ ಠಾಣೆಗಳಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
    ಸಿಪಿ ಲುಧಿಯಾನಾ ಅವರು ಎಲ್ಲಾ ಪೊಲೀಸ್ ಠಾಣೆಗಳ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಉನ್ನತ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಅಂತಹ ಪೊಲೀಸ್ ಠಾಣೆಗಳು ಅಥವಾ ಕಟ್ಟಡಗಳು ದಾಳಿ ಮತ್ತು ಪಲಾಯನ ಮಾಡಲು ಸುಲಭವಾದ ಕಾರಣ ನಗರದ ಹೊರಗೆ ಅಥವಾ ಹೆದ್ದಾರಿಗಳಲ್ಲಿ ಇರುವ ಪೊಲೀಸ್ ಠಾಣೆಗಳಲ್ಲಿ ಹೆಚ್ಚಿನ ಜಾಗರೂಕತೆಗೆ ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಉಗ್ರ ಭಯೋತ್ಪಾದಕರು
    Share. Facebook Twitter Pinterest LinkedIn Tumblr Email WhatsApp
    Previous Articleಮೂರ್ತಿ ದಂಪತಿಗಳಿಂದ 7.50 ಕೋಟಿ ರೂ ಕೊಡುಗೆ
    Next Article ಭಯದಿಂದ ತತ್ತರಿಸಿದ ಸಿದ್ದರಾಮಯ್ಯ
    vartha chakra
    • Website

    Related Posts

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 5ypi6 ರಲ್ಲಿ MSIL ಟೂರ್ ಪ್ಯಾಕೇಜ್ ಇದೆ ನೋಡಿ
    • 71afa ರಲ್ಲಿ Siddaramaiahಗಾಗಿ Rules change! | Siddaramaiah | INC
    • on57c ರಲ್ಲಿ ಸಿದ್ದರಾಮಯ್ಯ ಅವರಿಗೆ 500 ಕೋಟಿ ಕಿಕ್ ಬ್ಯಾಕ್
    Latest Kannada News

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe