ಬೆಂಗಳೂರು, ಜ.16- ತಮ್ಮದು ಅತ್ಯಂತ ಸ್ವಚ್ಚ ರಾಜಕಾರಣ ಇದರಲ್ಲಿ ನಾನು ಬದ್ಧತೆ ಹೊಂದಿದ್ದು, ಸಮಾಜದ್ರೋಹಿಗಳೂ ಮತ್ತು ಪೀಡಕರಿಂದ ಅಕ್ರಮವಾಗಿ ಹಣ ಗಳಿಸಬೇಕಾದ ಸಂದರ್ಭ ಬಂದರೆ ಬದುಕಲು ಇಚ್ಛಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬೆಂಗಳೂರಿನ ಮಲೆನಾಡು ಮಿತ್ರ ವೃಂದ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ಯಾಂಟ್ರೊ ರವಿಯಂಥ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗಾಗುವಂಥ ಪ್ರಸಂಗ ಬಂದರೆ ಸಾವನ್ನು ಬಯಸುತ್ತೇನೆ ಎಂದರು.
ನನ್ನ ಗುಜರಾತ್ ಪ್ರವಾಸಕ್ಕೂ, ಸ್ಯಾಂಟ್ರೋ ರವಿ ಬಂಧನಕ್ಕೂ ಥಳುಕು ಹಾಕಿ ಮಾತನಾಡಲಾಗುತ್ತಿದೆ ಗುಜರಾತ್ ಪ್ರವಾಸ ಬಹಳ ಹಿಂದೆಯೇ ನಿಗದಿಯಾಗಿತ್ತು ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗದ ನೇತೃತ್ವ ವಹಿಸಿದ್ದ ನನ್ನ ಗುಜರಾತ್ ಭೇಟಿ ಹಾಗೂ ಕಾರ್ಯಕ್ರಮಗಳು ಪಾರದರ್ಶಕವಾಗಿವೆ ಎಂದರು.
ಗುಜರಾತ್ ಪ್ರವಾಸದ ಸಂದರ್ಭದಲ್ಲಿ ರಾಜ್ಯದಲ್ಲಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವ ವಿದ್ಯಾಲಯದ ಉಪ ಕುಲಪತಿಗಳು ಹಾಗೂ ಇತರ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಇದರ ಮುಂದುವರಿದ ಭಾಗವಾಗಿ ಶೀಘ್ರದಲ್ಲಿಯೇ ವಿಶ್ವ ವಿದ್ಯಾಲಯದ ಶಂಕು ಸ್ಥಾಪನೆ ಕಾರ್ಯಕ್ರಮವೂ ನಡೆಯಲಿದೆ ಎಂದು ತಿಳಿಸಿದರು.
ಒಂದು ವೇಳೆ ಸ್ಯಾಂಟ್ರೋ ರವಿಯಂತಹ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗಾಗುವಂತಹ ಪರಿಸ್ಥಿತಿ ಬಂದರೆ ಆತ್ಮಹತ್ಯೆ ದಾರಿ ತುಳಿಯುತ್ತೇನೆ ಎಂದು ಅವರು ಭಾವುಕರಾಗಿ ನುಡಿದರು.
ಸಂಗ್ರಹಗಳು
- ಏಪ್ರಿಲ್ 2026
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

