Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುರುಘಾಮಠಕ್ಕೆ ಕೊಟ್ಟಿರುವ ಅನುದಾನದ ವಿವರ ಕೊಡಿ
    ಸುದ್ದಿ

    ಮುರುಘಾಮಠಕ್ಕೆ ಕೊಟ್ಟಿರುವ ಅನುದಾನದ ವಿವರ ಕೊಡಿ

    vartha chakraBy vartha chakraಜನವರಿ 31, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು
    ಲೈಂಗಿಕ ಹಗರಣದ ಸುಳಿಗೆ ಸಿಲುಕಿದ ಮುರುಘಾ ಶರಣರು ಜೈಲು ಪಾಲಾಗುತ್ತಿದ್ದಂತೆ ಮುರುಘಾಮಠಕ್ಕೆ ಇನ್ನಿಲ್ಲದಂತೆ ಗ್ರಹಚಾರಗಳು ಕಾಡತೊಡಗಿವೆ. ಮಠದ ಹೆಸರಿನಲ್ಲಿ ನಡೆದಿರುವ ಹಗರಣಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಈ ನಡುವೆ ಬೃಹನ್ಮಠದ ವತಿಯಿಂದ ನಿರ್ಮಿಸಲಾಗುತ್ತಿರುವ ಅತಿ ಎತ್ತರದ ಬಸವೇಶ್ವರ ಪ್ರತಿಮೆ ಹಾಗೂ ಅಲ್ಲಮಪ್ರಭು ಸಂಶೋಧನಾ ಕೇಂದ್ರಕ್ಕೆ ರಾಜ್ಯ ಸರ್ಕಾರ ಕಾಲಕಾಲಕ್ಕೆ ನೀಡಿರುವ ಕೋಟ್ಯಂತರ ರೂಪಾಯಿಗಳ ಅನುದಾನದ ಸಂಪೂರ್ಣ ಮಾಹಿತಿ ಒದಗಿಸಬೇಕು ಮತ್ತು ಈ ಅನುದಾನ ನೀಡುವಾಗ ಏನಾದರೂ ಷರತ್ತುಗಳನ್ನು ವಿಧಿಸಲಾಗಿತ್ತೇ ಎಂಬುದನ್ನು ತಿಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

    ಮಠದ ಆಡಳಿತಾಧಿಕಾರಿಯನ್ನಾಗಿ ನಿವೃತ್ತ IAS ಅಧಿಕಾರಿ ಪಿ.ಎಸ್‌.ವಸ್ತ್ರದ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ SJM ವಿದ್ಯಾಪೀಠದ ಅಧ್ಯಕ್ಷ, ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು ಸಲ್ಲಿಸಿರುವ ರಿಟ್‌ ಅರ್ಜಿಯ ವಿಚಾರಣೆ ನಡೆಸುತ್ತಿರುವ ನ್ಯಾಯಪೀಠ ಈ ಆದೇಶವನ್ನು ಹೊರಡಿಸಿತ್ತು.
    ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್‌ ಜನರಲ್ ಪ್ರಭುಲಿಂಗ ಕೆ.ನಾವದಗಿ ಅವರು, ‘ಮುರುಘಾಮಠಕ್ಕೆ ನೂರಾರು ವರ್ಷಗಳ ವೈಭವೋಪೇತ ಇತಿಹಾಸವಿದೆ. ಆದರೆ, ದುರದೃಷ್ಟವಶಾತ್‌ ಈಗಿನ ಪೀಠಾಧಿಪತಿ ಮುರುಘಾ ಶರಣರು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಅಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಮಠಕ್ಕೆ ಸೇರಿದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಸ್ಥಿರ ಮತ್ತು ಚರಾಸ್ತಿ ಹಾಗೂ ನೂರಾರು ವಿದ್ಯಾಸಂಸ್ಥೆಗಳ ದೈನಂದಿನ ಆಡಳಿತಕ್ಕೆ ವ್ಯತ್ಯಯ ಉಂಟಾಗಬಾರದು ಎಂಬ ಏಕೈಕ ಕಾರಣಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ’ ಎಂದು ಸರ್ಕಾರದ ನಿಲುವನ್ನು ಬಲವಾಗಿ ಸಮರ್ಥಿಸಿದರು.

    ‘ಮಠದ ವತಿಯಿಂದ ನಿರ್ಮಿಸಲಾಗುತ್ತಿರುವ ಅತಿ ಎತ್ತರದ ಬಸವ ಪ್ರತಿಮೆ ಹಾಗೂ ಅಲ್ಲಮಪ್ರಭು ಸಂಶೋಧನಾ ಕೇಂದ್ರಕ್ಕೆ ಸರ್ಕಾರವು ಕಾಲಕಾಲಕ್ಕೆ ಕೋಟ್ಯಂತರ ರೂಪಾಯಿಗಳ ಬೃಹತ್‌ ಅನುದಾನ ನೀಡುತ್ತಾ ಬಂದಿದೆ. ಇದಕ್ಕೆ ತಾಜಾ ಉದಾಹರಣೆಯಾಗಿ 2022 ರ ಸೆಪ್ಟೆಂಬರ್ 15 ರಂದು ಸರ್ಕಾರ 10 ಕೋಟಿ ರೂ. ಗಳನ್ನು ನೀಡಿದೆ. ಇದಕ್ಕೂ ಮುನ್ನ ಸಾಕಷ್ಟು ಆರ್ಥಿಕ ನೆರವು ಒದಗಿಸಲಾಗಿದೆ. ಈ ಕುರಿತ ಎಲ್ಲ ದಾಖಲೆಗಳನ್ನು ಕೋರ್ಟ್‌ಗೆ ಒದಗಿಸಲಾಗುವುದು’ ಎಂದರು.
    ‘ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡುವ ನಿಟ್ಟಿನಲ್ಲಿ ಸರ್ಕಾರ ನೀಡಿರುವ ಆರ್ಥಿಕ ನೆರವಿನ ಅಂಶಗಳೂ ಅಡಗಿವೆ ಎಂಬುದನ್ನು ನ್ಯಾಯಪೀಠ ಪರಿಗಣಿಸಬೇಕು. ಅಂತೆಯೇ, ಆಡಳಿತಾಧಿಕಾರಿ ನೇಮಕಕ್ಕೂ ಮುನ್ನ ಮುಖ್ಯಮಂತ್ರಿಗಳು ಸ್ವತಃ ನೂರು ಬಾರಿ ಯೋಚಿಸಿ ಈ ನಿರ್ಧಾರ ಕೈಗೊಂಡಿದ್ದಾರೆ. ಇದರಲ್ಲಿ ಮಠದ ಆಸ್ತಿ ಸಂರಕ್ಷಣೆ ಮತ್ತು ಭಕ್ತರ ಹಿತಾಸಕ್ತಿ ಕಾಪಾಡುವ ಉದ್ದೇಶ ಅಡಗಿದೆ. ಮಠದ ಜೊತೆಗೆ ಸಂಘರ್ಷಕ್ಕಿಳಿಯುವ ಅಥವಾ ವ್ಯಾಜ್ಯ ಮಾಡುವ ಧೋರಣೆಯಿಲ್ಲ’ ಎಂದು ಸ್ಪಷ್ಟಪಡಿಸಿದರು.

    ಆಡಳಿತಾಧಿಕಾರಿ ಪರ ಹಿರಿಯ ವಕೀಲ ಗಂಗಾಧರ ಗುರುಮಠ ಅವರಿಗೆ ಫೆಬ್ರುವರಿ 2 ರಂದು ವಾದ ಮಂಡಿಸಲು ಅವಕಾಶ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.

    Verbattle
    Verbattle
    Verbattle
    m murugha matha News ಅಪರಾಧ ಸುದ್ದಿ ಕಾನೂನು ಧರ್ಮ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleನಿರ್ಣಾಯಕ ಸ್ಥಿತಿಯಲ್ಲಿದೆ ತಾರಕ ರತ್ನ ಅವರ ಆರೋಗ್ಯ
    Next Article ಚಿನ್ನದಂಗಡಿಗಳಿಗೆ IT shock!
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    3 ಪ್ರತಿಕ್ರಿಯೆಗಳು

    1. Atpwsj on ಫೆಬ್ರವರಿ 15, 2026 5:01 ಅಪರಾಹ್ನ

      mcluck РњРћ online casino McLuck mcluck Utah

      Reply
    2. Tyunhu on ಫೆಬ್ರವರಿ 18, 2026 7:44 ಅಪರಾಹ್ನ

      Unveil the secrets to big wins with expert tips and guides. In crowncoins casino, loyalty rewards multiply your earnings. Start your winning streak today!

      Reply
    3. Iknggk on ಫೆಬ್ರವರಿ 20, 2026 9:36 ಅಪರಾಹ್ನ

      Spin the reels of Sweet Bonanza and let the sweets rain down wins! Ante pragmatic play sweet bonanza bet or buy the bonus for instant thrills. Victory is deliciously close.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • винлаб промокод на скидку ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • 모임술집 ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • AnthonyWig ರಲ್ಲಿ ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.