Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಣಕಾಸು ವಹಿವಾಟಿನ ಮೇಲೆ Election Commission ನ ಹದ್ದಿನ ಕಣ್ಣು
    ಚುನಾವಣೆ 2024

    ಹಣಕಾಸು ವಹಿವಾಟಿನ ಮೇಲೆ Election Commission ನ ಹದ್ದಿನ ಕಣ್ಣು

    vartha chakraBy vartha chakraಫೆಬ್ರವರಿ 10, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು

    ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಸಲು ಆಯೋಗ (Election Commission) ವ್ಯಾಪಕ ಸಿದ್ಧತೆ ನಡೆಸಿದೆ. ಮುಕ್ತ ಹಾಗೂ ಶಾಂತಿಯುತ ಚುನಾವಣೆಗೆ ಪಣ ತೊಟ್ಟಿರುವ ಆಯೋಗ ಅಕ್ರಮ ತಡೆಗಟ್ಟಲು ಹದ್ದಿನ ಕಣ್ಣಿರಿಸತೊಡಗಿದೆ. ವೇಳಾಪಟ್ಟಿ ಘೋಷಣೆಯಾದ ನಂತರ ಮತದಾರರನ್ನು ತಲುಪಲು ಅಭ್ಯರ್ಥಿಗಳು ಮತ್ತು ಪಕ್ಷಗಳು ನಡೆಸುವ ವಾಮಮಾರ್ಗದ ಬಗ್ಗೆ ಅರಿವಿರುವ ಆಯೋಗ ಈಗಾಗಲೇ ಹಣಕಾಸು ವಹಿವಾಟಿನ ಕುರಿತು ನಿಗಾ ವಹಿಸಿದೆ.

    ರಾಜ್ಯದ ಪ್ರತಿಯೊಂದು ಬ್ಯಾಂಕ್ ಖಾತೆದಾರರ ವಹಿವಾಟುಗಳ ಮೇಲೆ ಆಯೋಗ ಹದ್ದಿನ ಕಣ್ಣಿಟ್ಟಿದೆ. ಚುನಾವಣೆ ಸಮಯದಲ್ಲಿ ಮತದಾರರಿಗೆ ನೇರವಾಗಿ ಹಣ, ಒಡವೆ ಇಲ್ಲವೇ ಬೇರೊಂದು ರೀತಿಯಲ್ಲಿ ಹಂಚಿಕೆ ಮಾಡಿದರೆ ಕಾನೂನು ಸಂಕಷ್ಟಕ್ಕೆ ಸಿಲುಕಿಕೊಳ್ಳಬೇಕಾಗುತ್ತದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಹೀಗಾಗಿ ಇವರುಗಳು ಅನ್ಯ ಮಾರ್ಗ ಹುಡುಕಿರುವುದು‌ ಕಳೆದ ಚುನಾವಣೆ ವೇಳೆ ಪತ್ತೆಯಾಗಿತ್ತು.

    ಗ್ರಾಮೀಣ ಭಾಗಗಳಲ್ಲಿ ಹೆಚ್ಚಾಗಿ ಸ್ತ್ರೀ ಶಕ್ತಿ ಸಂಘಟನೆಗಳು, ಅಭ್ಯರ್ಥಿಗಳ ಸೋಲು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಒಂದೊಂದು ಸಂಘಟನೆಯಲ್ಲಿ 200ರಿಂದ 300 ಮತದಾರರು ಇರುತ್ತಾರೆ. ಹೀಗಾಗಿ ಅಭ್ಯರ್ಥಿಗಳು ಈಗಲೆ ಅವರೊಂದಿಗೆ ಮಾತುಕತೆ ನಡೆಸಿ, ಮತಕ್ಕೆ ಇಂತಿಷ್ಟು ಎಂದು ಹಣ ನಿಗದಿಪಡಿಸಿ ಸ್ತ್ರೀ ಶಕ್ತಿ ಸಂಘಟನೆಗಳ ಮುಖ್ಯಸ್ಥರ ಖಾತೆಗಳಿಗೆ ಹಣ ಹಾಕುತ್ತಿದ್ದಾರೆ.

    ಇದಲ್ಲದೆ ಹಾಲು ಉತ್ಪಾದಕರ ಸಂಘ, ಮಹಿಳಾ ಸಂಘಗಳು, ಯುವಕರ ಸಂಘ ಹೀಗೆ ನಾನಾ ರೀತಿಯಲ್ಲಿ ಮತದಾರರ ಖಾತೆಗಳಿಗೆ ಹಣವನ್ನು ಹಾಕಲಾಗುತ್ತದೆ. ಚುನಾವಣೆ ವೇಳಾಪಟ್ಟಿಗೂ ಮೊದಲೆ ಹಣ ಸಂದಾಯವಾಗುತ್ತಿದ್ದು, ಮತದಾನದ ದಿನ ಸಮೀಪಿಸುವಾಗ ಈ ಹಣವನ್ನು ಮತದಾರರಿಗೆ ತಲುಪಿಸುವ ವ್ಯವಸ್ಥೆಯನ್ನು ರಾಜಕೀಯ ನಾಯಕರು ಮಾಡಿಕೊಂಡಿದ್ದಾರೆ. ಇದರ ಬಗ್ಗೆ ಮಾಹಿತಿ ಪಡೆದಿರುವ ಆಯೋಗ ಇಂತಹ ವಹಿವಾಟುಗಳ ಮೇಲೆ ನಿಗಾ ವಹಿಸಿದೆ.

    ಇದೀಗ ಇಂತಹ ಬ್ಯಾಂಕ್ ಖಾತೆಗಳ ಮೇಲೆ ಕಣ್ಣಿಟ್ಟಿರುವ ಚುನಾವಣಾ ಆಯೋಗ, ಯಾವ ಖಾತೆಗೆ ಹೆಚ್ಚು ಹಣ ಸಂದಾಯವಾಗುತ್ತದೆ ಎಂಬುದನ್ನು ಕುರಿತು ತಕ್ಷಣವೇ ಮಾಹಿತಿ ನೀಡಬೇಕೆಂದು ಬ್ಯಾಂಕ್ ಅಧಿಕಾರಿಗಳಿಗೆ ಮನವಿ ಮಾಡಿದೆ. ಯಾವುದೇ ವ್ಯಕ್ತಿಯ ಖಾತೆಗೆ ಏಕಾಏಕಿ ಲಕ್ಷಗಟ್ಟಲೇ ಹಣ ಸಂದಾಯವಾದರೆ ಕೂಡಲೇ ಆಯೋಗದ ಗಮನಕ್ಕೆ ತರಬೇಕು. ಚುನಾವಣೆ ವೇಳೆ ನಡೆಯುವ ಅಕ್ರಮ ಮತ್ತು ಭ್ರಷ್ಟಾಚಾರವನ್ನು ತಡೆಗಟ್ಟುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿರುವ ಆಯೋಗ ರಾಜ್ಯದ ಎಲ್ಲಾ ಬ್ಯಾಂಕ್ ಗಳ ಮುಖ್ಯಸ್ಥರಿಗೆ ಪತ್ರ ಬರೆದಿದೆ.

    Bangalore Election election commission Elections 2023 m mi Politics ಕಾನೂನು ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleMahalakshmi Layout ನಲ್ಲಿ ಸೇವೆ ಆರಂಭಿಸಿದ ನಮ್ಮ ಕ್ಲಿನಿಕ್ ಗಳು
    Next Article ರಾಜ್ಯ ಸರ್ಕಾರದ ಸಾಧನೆಗೆ ರಾಜ್ಯಪಾಲರ ಜೈ ಜೈಕಾರ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಜಾತಿ ಸಮೀಕ್ಷೆಯಲ್ಲಿ ಡಿಸಿಎಂ ಕೊಟ್ಟ ವಿವರ ಗೊತ್ತಾ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WayneseinA ರಲ್ಲಿ ಯತ್ನಾಳ್, ಸೋಮಣ್ಣನಿಗೆ ಹೈಕಮಾಂಡ್ ಬುಲಾವ್ | Yatnal
    • Rogertyday ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • StephenRat ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe