Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿನ್ನದ ವ್ಯಾಪಾರಿಗೆ ಹಾಕಿದರು ಮಕ್ಮಲ್ ಟೋಪಿ
    ಅಪರಾಧ

    ಚಿನ್ನದ ವ್ಯಾಪಾರಿಗೆ ಹಾಕಿದರು ಮಕ್ಮಲ್ ಟೋಪಿ

    vartha chakraBy vartha chakraಮೇ 6, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Pic only for reference
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.5- ವಿಧಾನಸಭೆ ಚುನಾವಣೆ ಒಂದು ರೀತಿಯಲ್ಲಿ ಜಾತ್ರೆಯಂತೆ ನಡೆಯುತ್ತಿದೆ ಇಲ್ಲಿ ಉಂಡವನೇ ಜಾಣ ಎಂಬಂತಾಗಿದೆ ವಿದ್ಯಮಾನಗಳು ಮತದಾರರ ಓಲೈಕೆಗೆ ರಾಜಕೀಯ ನಾಯಕರು ಹಲವಾರು ಮಾರ್ಗ ಹಿಡಿದಿದ್ದು ಇದನ್ನೇ ಅನುಸರಿಸಿದ ಐನಾತಿ ವಂಚಕರು ಚಿನ್ನದ ವ್ಯಾಪಾರಿಯೊಬ್ಬರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ
    ಬೆಂಗಳೂರಿನ ಕೆಆರ್ ಮಾರ್ಕೆಟ್ ಬಳಿಯ ಚಿನ್ನದ ವ್ಯಾಪಾರಿಯನ್ನು ಸಂಪರ್ಕಿಸಿದ ವಂಚಕರು ಚುನಾವಣೆಯಲ್ಲಿ ಸ್ಪರ್ಧಿಸಿರುವ ಪ್ರಭಾವಿ ರಾಜಕಾರಣಿ ಒಬ್ಬರಿಗೆ ಮತದಾರರಿಗೆ ಹಂಚಲು ಚಿನ್ನದ ನಾಣ್ಯ ಮತ್ತು ಒಡವೆ ಬೇಕಿದೆ ಎಂದು ಹೇಳಿ ಆತನಿಂದ ಬರೋಬ್ಬರಿ 3 ಕೆಜಿ ಚಿನ್ನ ಮತ್ತು 80 ಲಕ್ಷ ಹಣ ವಂಚಿಸಿರುವ ಘಟನೆ ಇದಾಗಿದೆ.
    ಸಿಟಿ ಮಾರ್ಕೆಟ್ ವ್ಯಾಪ್ತಿಯಲ್ಲಿ ಚಿನ್ನದ ಅಂಗಡಿಯನ್ನು ಹೊಂದಿರುವ ವಿಶಾಲ್ ಜೈನ್ ಎಂಬ ಉದ್ಯಮಿಯನ್ನು ಸಂಪರ್ಕಿಸಿದ ವಂಚಕರಾದ ಅಭಯ್, ಕಿರಣ್, ಸಂಕೇತ್, ನವೀನ್ ಹಾಗೂ ಚರಣ್ ಎಂಬ ವ್ಯಕ್ತಿಗಳು ತಮ್ಮ ನಾಯಕರಿಗೆ ಒಂದು ಕೆಜಿ ಚಿನ್ನ ಬೇಕು ಎಂದು ಪಡೆದಿದ್ದಾರೆ.
    ಇದಾದ ಬಳಿಕ ಮತ್ತಷ್ಟು ಚಿನ್ನ ಬೇಕಿದೆ ಈ ಬಗ್ಗೆ ನಮ್ಮ ನಾಯಕರ ಜೊತೆ ಮಾತನಾಡಲು ಬನ್ನಿ ಎಂದು ವಿಶಾಲ್ ಜೈನ್ ಅವರನ್ನು ಶಾಂಗ್ರೀಲಾ ಹೋಟೆಲ್ ಗೆ ಕರೆದಿದ್ದಾರೆ ಅಲ್ಲಿ ಇವರು ವ್ಯಕ್ತಿಯೊಬ್ಬರನ್ನು ಭೇಟಿ ಮಾಡಿ ಅವರನ್ನು ತಮ್ಮ ನಾಯಕರ ಪಿಎ ಎಂದು ಪರಿಚಯಿಸಿದ್ದಾರೆ ಆನಂತರ ಅವರ ಸೂಚನೆಯ ಮೇರೆಗೆ ಮತ್ತೆ ಒಂದು ಕೆಜಿ ಚಿನ್ನವನ್ನು ವಿಶಾಲ್ ಜೈನ್ ಅವರಿಂದ ಪಡೆದಿದ್ದಾರೆ.
    ಹೀಗೆ ಹಂತ ಹಂತವಾಗಿ ಒಟ್ಟು ಮೂರು ಕೆಜಿಗೂ ಅಧಿಕ ಚಿನ್ನ ಪಡೆದಿದ್ದಾರೆ. ಕೊನೆಗೆ ಹಣ ಕೇಳಿದಾಗ, ನಮ್ಮ ಬಳಿ 8 ಕೆಜಿ ಚಿನ್ನದ ಗಟ್ಟಿ ಇದೆ. ಅದನ್ನು ತೆಗೆದುಕೊಂಡು ಉಳಿದ ಹಣ ವಾಪಸ್ಸು ಕೊಡಿ ಎಂದಿದ್ದಾರೆ.
    ಇದನ್ನು ನಂಬಿ ಎಂಟು ಕೆಜಿ ಪಡೆದು ಐವತ್ತು ಲಕ್ಷ ಹಣ ವಾಪಸ್ಸು ನೀಡಿದ್ದರು. ಬಳಿಕ ಮನೆಗೆ ಬಂದು ನೋಡಿದಾಗ ಅದು ನಕಲಿ ಚಿನ್ನ ಎನ್ನುವುದು ಗೊತ್ತಾಗಿದೆ. ಕೂಡಲೇ ಅವರನ್ನು ಸಂಪರ್ಕಿಸಿದ ಉದ್ಯಮಿ ನೀವು ಕೊಟ್ಟಿರುವುದು ಅಸಲಿ ಚಿನ್ನ ಅಲ್ಲ ಇದು ಸಂಪೂರ್ಣ ನಕಲಿ ನನಗೇಕೆ ಹೀಗೆ ಮೋಸ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಆದರೆ ಆ ಐನಾತಿಗಳು ನಾವು ನಿಮಗೆ ಕೊಟ್ಟಿದ್ದು ಅಸಲಿ ಚಿನ್ನ ಅದನ್ನು ನೀವು ಪರಿಶೀಲಿಸಿ ತೆಗೆದುಕೊಂಡು ಹೋಗಿದ್ದೀರಿ ಈಗ ಅದನ್ನು ಬದಲಾಯಿಸಿ ನಕಲಿ ಚಿನ್ನ ಕೊಟ್ಟಿದ್ದೇವೆ ಎಂದು ಆರೋಪಿಸುತ್ತಿದ್ದೀರಿ ಎಂದು ಹೇಳಿದ್ದಾರೆ.
    ಈ ವಿಷಯವಾಗಿ ಅವರ ನಡುವೆ ಮಾತಿನ ಚಕಮಕಿ ನಡೆದಿದ್ದು ಇದೀಗ ಉದ್ಯಮಿ ತಮಗಾದ ವಂಚನೆಯ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
    ಘಟನೆ ಸಂಬಂಧಿಸಿದಂತೆ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದಾರೆ.ಈ ಕುರಿತು ಪ್ರಕರಣ ದಾಖಲಿಸಿರುವ ಪೊಲೀಸರು ಅರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

    ಚಿನ್ನ ಚುನಾವಣೆ ರಾಜಕೀಯ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಚನ್ನಗಿರಿ ಕ್ಷೇತ್ರ-ಬಿಜೆಪಿಯ ಗೆಲುವಿನ ಹಾದಿಯಲ್ಲಿ ಕಂದಕವಾದ ಪಕ್ಷೇತರ | Channagiri Assembly Constituency
    Next Article ರಾಹುಲ್ ಗಾಂಧಿ-ಕುಮಾರಸ್ವಾಮಿ ಮಾಡಿದ್ದರೆ?
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    5 ಪ್ರತಿಕ್ರಿಯೆಗಳು

    1. yutwm on ಜೂನ್ 5, 2025 6:54 ಅಪರಾಹ್ನ

      can i order generic clomid without rx rx clomiphene can you get cheap clomid without insurance cost generic clomid without a prescription cost of cheap clomiphene pills get clomid prices where to get cheap clomiphene no prescription

      Reply
    2. best place buy cialis online on ಜೂನ್ 9, 2025 7:44 ಫೂರ್ವಾಹ್ನ

      This is the kind of enter I unearth helpful.

      Reply
    3. does flagyl treat sibo on ಜೂನ್ 11, 2025 1:57 ಫೂರ್ವಾಹ್ನ

      This website absolutely has all of the bumf and facts I needed there this participant and didn’t positive who to ask.

      Reply
    4. 7hecn on ಜೂನ್ 21, 2025 7:27 ಫೂರ್ವಾಹ್ನ

      order amoxil – buy generic amoxil buy cheap generic combivent

      Reply
    5. dxu7n on ಜೂನ್ 23, 2025 10:37 ಫೂರ್ವಾಹ್ನ

      buy zithromax 500mg without prescription – purchase tinidazole generic bystolic 5mg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe ರಲ್ಲಿ ದೇವಾಲಯಗಳಿಗೆ ರಾಮಲಿಂಗಾರೆಡ್ಡಿ ಕೊಡುಗೆ | Ramalinga Reddy
    • 6pw9x ರಲ್ಲಿ Congress ಆಡಳಿತದಲ್ಲಿ ಜೇಬುಗಳ್ಳರು
    • KennethSOYNC ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe