Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಬ್ಬಾ ಇವರು ನೋಡಿ ಎಂಥಾ ಬ್ರಿಲಿಯಂಟ್ ವಂಚಕರು!
    ಅಪರಾಧ

    ಅಬ್ಬಾ ಇವರು ನೋಡಿ ಎಂಥಾ ಬ್ರಿಲಿಯಂಟ್ ವಂಚಕರು!

    vartha chakraBy vartha chakraಜೂನ್ 6, 20239 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.6- ಜನಸಾಮಾನ್ಯರಿಗೆ ಸಂಪರ್ಕ ಸಂವಹನ ಯಾವುದೇ ತೊಂದರೆ ಇಲ್ಲದೆ ಕ್ಷಿಪ್ರ ಗತಿಯಲ್ಲಿ ನಡೆಯಬೇಕೆಂಬ ಉದ್ದೇಶದಿಂದ ಸರ್ಕಾರದ ಮಾರ್ಗ ಸೂಚಿಗಳನ್ನು ಆಧರಿಸಿ ದೂರ ಸಂಪರ್ಕ ಸಂಸ್ಥೆಗಳು ಪ್ರೀ ಆಕ್ಟಿವೇಟೆಡ್ ಸಿಮ್ ಕಾರ್ಡ್ ವ್ಯವಸ್ಥೆಯನ್ನು ರೂಪಿಸಿವೆ.
    ಸಂಪರ್ಕ ಸಂವಹನದ ದೃಷ್ಟಿಯಿಂದ ರೂಪಿಸಲಾದ ಈ ಯೋಜನೆಯನ್ನು ದುರುಪಯೋಗಪಡಿಸಿಕೊಂಡ ಐನಾತಿ ವಂಚಕರು ವ್ಯವಸ್ಥೆಗೆ ಕನ್ನ ಹಾಕಿದ ಪ್ರಕರಣವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ
    ಆಕ್ಟಿವೇಟೆಡ್ ಸಿಮ್ ಕಾರ್ಡ್ ಗಳನ್ನು ದುರುಪಯೋಗಪಡಿಸಿಕೊಂಡು ಪ್ರತಿಷ್ಠಿತ ಕ್ಯಾಬ್ ಅಪರೇಟೀವ್ ಸಂಸ್ಥೆಗಳಿಗೆ ವಂಚನೆ ಮಾಡುತ್ತಿದ್ದ ಜಾಲವನ್ನು ಬೇಧಿಸಿರುವ ಸಿಸಿಬಿ ಪೊಲೀಸರು ಮೂವರುಆರೋಪಿಗಳನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಬಂಧಿತರನ್ನು ಮನೋಜ್,ಸಚಿನ್ ಹಾಗೂ ಶಂಕರ್ ಅಲಿಯಾಸ್ ಶಂಕ್ರಿ ಎಂದು ಗುರುತಿಸಲಾಗಿದೆ. ಈ ವಂಚಕರು ನಡೆಸಿದ ಕುಕೃತ್ಯದ ಬಗ್ಗೆ ನಗರ ಪೊಲೀಸ್ ಆಯುಕ್ತ ದಯಾನಂದ ಅವರು ವಿವರಿಸಿದರು.
    ಬಂಧಿತರಿಂದ 1055 ಪ್ರೀ ಅಕ್ಟಿವೇಟೆಡ್ ಮೊಬೈಲ್ ಸಿಮ್ ಕಾರ್ಡ್‍ಗಳು, 15 ಮೊಬೈಲ್ ಪೋನ್, 4 ಲ್ಯಾಪ್‍ಟಾಪ್, ಕಂಪ್ಯೂಟರ್ ಸಿಸ್ಟಮ್‍ಗಳ ಜಪ್ತಿ ಮಾಡಲಾಗಿದೆ ಎಂದು ಹೇಳಿದರು.
    ಆರೋಪಿಗಳು ನಗರದಲ್ಲಿ ಬಾಡಿಗೆ ವಾಹನ ಸೇವೆ ನೀಡುತ್ತಿರುವ ಉಬರ್, ರಾಪಿಡೋ ಕಂಪನಿಗಳಿಗೆ ಡ್ರೈವರ್‌ ಗಳನ್ನು ಹಾಗೂ ವಾಹನಗಳನ್ನು ನೋಂದಣಿ ಮಾಡುವ ಸಲುವಾಗಿ ವೆಂಡರ್‍ಶಿಪ್ ಪಡೆದು ಆನ್‍ಲೈನ್ ಮೂಲಕ ಡ್ರೈವರ್ ಮತ್ತು ವಾಹನಗಳನ್ನು ಅಟಾಚ್ ಮಾಡಿಸುತ್ತಿದ್ದರು.
    ಇದರಿಂದ ಅಷ್ಟೇನೂ ಲಾಭ ಬರುತ್ತಿಲ್ಲ ಎಂದು ತಿಳಿದ ಅವರು ಒಟ್ಟಾಗಿ ಕುಳಿತು ವಂಚನೆಯ ಕಾರ್ಯ ಯೋಜನೆಯನ್ನು ರೂಪಿಸಿದರು‌ ಇದಕ್ಕಾಗಿ ಅವರು ಬೇರೆಯವರ ಹೆಸರಿನಲ್ಲಿ ಸಾವಿರಾರು ಮೊಬೈಲ್ ಸಿಮ್‍ಕಾರ್ಡ್‍ಗಳನ್ನು ಖರೀದಿಸಿ ಅವುಗಳ ಮೂಲಕ ವಾಹನ ಮತ್ತು ಡ್ರೈವರ್ ಸೇವೆಯ ಗುತ್ತಿಗೆಯನ್ನು ಪಡೆದು ಶುಲ್ಕದ ರೂಪದಲ್ಲಿ ಹಣ ಪಡೆಯುತ್ತಿದ್ದರು ಆನಂತರ, ಯಾವುದೇ ಸಂಚಾರ ಸೇವೆಯನ್ನು ನೀಡದೆ ಸಾಪ್ಟ್ ವೇರ್ ದುರುಪಯೋಗ ಪಡಿಸಿಕೊಂಡು ಸಂಚಾರಿ ಸೇವೆ ನೀಡಿದಂತೆ ಮಾಡಿ ಕಂಪನಿಗಳಿಂದ ಬರುತ್ತಿದ್ದ ಸಾವಿರಾರು ರೂಗಳ ಇನ್‍ಸೆಂಟಿವ್ ಹಣವನ್ನು ಪಡೆದು ಕಂಪನಿಗಳಿಗೆ ಮೋಸ ಮಾಡುತ್ತಿದ್ದರು ಎಂದರು.
    ಆರೋಪಿ ಮನೋಜ್  ಉಬರ್ ಮತ್ತು ರೆಪಿಡೊ ಕಂಪನಿಗಳ ವೆಂಡರ್ ಶಿಪ್  ಪಡೆದು‌ ಕೆಲಸ ಮಾಡುತ್ತಿದ್ದ ಮತ್ತೊಬ್ಬ ಆರೋಪಿ ಸಚಿನ್  ಫೈನಾನ್ಸ್ ಕಂಪನಿಯಲ್ಲಿ ಸಾಲ ಕೊಡಿಸುವ ಕೆಲಸ ಮಾಡಿಕೊಂಡಿದ್ದ. ಇನ್ನೊಬ್ಬ ಆರೋಪಿ ಶಂಕ್ರಿ ವೋಡಾಪೋನ್ ಕಂಪನಿಯಲ್ಲಿ ಸಿಮ್ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡಿಕೊಂಡಿದ್ದು ಮೂವರು ಸೇರಿ ಸುಲಭವಾಗಿ ಹಣ ಮಾಡುವ ದುರುದ್ದೇಶದಿಂದ ಸಲುವಾಗಿ ಒಳಸಂಚು ರೂಪಿಸಿ ಮನೋಜ್ ಹೊಂದಿದ್ದ ಉಬರ್ ಮತ್ತು ರಾಪಿಡೋ ವೆಂಡರ್ ಶಿಪ್  ಸಹಾಯದಿಂದ ಮನೋಜ್ ಒದಗಿಸುತ್ತಿದ್ದ ದಾಖಲಾತಿಗಳನ್ನು ಬಳಸಿ ಆನ್‍ಲೈನ್‍ನಲ್ಲಿ ಅಪಲೋಡ್ ಮಾಡಿ, ಶಂಕ್ರಿ ನೀಡುತ್ತಿದ್ದ ಫ್ರೀ ಆಕ್ಟಿವೇಟೆಡ್ ಸಿಮ್ ಕಾರ್ಡ್‍ಗಳನ್ನು ಬಳಸಿಕೊಂಡು ಕಾರು / ಬೈಕುಗಳು ಓಡುವ ರೀತಿಯಲ್ಲಿ ಮೊಬೈಲ್ ಪೋನ್/ಲ್ಯಾಪ್‍ಟಾಪ್ ಗಳ ಮೂಲಕ ಸಾಪ್ಟ್‍ವೇರ್ ಬಳಸಿ ಯಾವುದೇ ವಾಹನವನ್ನು ಚಲಿಸದೇ ಇದ್ದರೂ ವಾಹನಗಳು ಚಲಿಸಿದ ರೀತಿಯಲ್ಲಿ ಡಾಟಾ ಸೃಷ್ಟಿಸಿ ಕಂಪನಿಗಳಿಂದ ವೆಂಡರ್‍ಗೆ ಬರುವ ಇನ್‍ಸೆಂಟೀವ್ ಹಣವನ್ನು ಅಕ್ರಮವಾಗಿ ಪಡೆದುಕೊಂಡು ಹಂಚಿಕೊಳ್ಳುತ್ತಿರುವುದು ತನಿಖೆಯಲ್ಲಿ ದೃಡಪಟ್ಟಿರುತ್ತದೆ.
    ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಅವರುಗಳ ವಿಚಾರಣೆ ಮಾಡಿ ಅವರು ಕೃತ್ಯಕ್ಕೆ ಉಪಯೋಗಿಸುತ್ತಿದ್ದ 1055 ಪ್ರೀ ಅಕ್ಟಿವೇಟೆಡ್ ಮೊಬೈಲ್ ಸಿಮ್‍ಗಳು, 15 ಮೊಬೈಲ್‍ಗಳು, 4 ಲ್ಯಾಪ್‍ಟಾಪ್, ಒಂದು ಕಂಪ್ಯೂಟರ್ ಸಿಸ್ಟಮ್ ಮತ್ತು ಒಂದು ಬಯೋಮೆಟ್ರಿಕ್ ಡಿವೈಸ್ ಇವುಗಳನ್ನು ವಶಪಡಿಸಿಕೊಂಡಿರುತ್ತದೆ. ಈ ಆರೋಪಿಗಳ ವಿರುದ್ದ ಐಪಿಸಿ, ಟೆಲಿಗ್ರಾಪ್ ಆಕ್ಟ್ ಹಾಗೂ ಐಟಿ ಆಕ್ಟ್, ಗಳಡಿಯಲ್ಲಿ ತನಿಖೆ ಮುಂದುವರೆಸಲಾಗಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    ಕಾರು
    Share. Facebook Twitter Pinterest LinkedIn Tumblr Email WhatsApp
    Previous ArticleUkraine ದೇಶದ Dam ಧ್ವಂಸ ಮಾಡಿದ Russia
    Next Article ಈಕೆಯ ಮನೆಗೆ ಬಾಡಿಗೆಯೇ ಬೇಡವಂತೆ!
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ

    ಫೆಬ್ರವರಿ 9, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qjfota ರಲ್ಲಿ ಸಿಎಂ ಹುದ್ದೆ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ.
    • LinwoodGah ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • LinwoodGah ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.