ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಮೇಶ್ ಜಾರಕಿಹೊಳಿಗೆ ಲಗಾಮು ಹಾಕಿ! | Ramesh Jarkiholi
    ರಾಜಕೀಯ

    ರಮೇಶ್ ಜಾರಕಿಹೊಳಿಗೆ ಲಗಾಮು ಹಾಕಿ! | Ramesh Jarkiholi

    vartha chakraBy vartha chakraಆಗಷ್ಟ್ 12, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ವಿಧಾನಮಂಡಲದ ಪ್ರತಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ನೇಮಕದ ಬಿಕ್ಕಟ್ಟಿನಿಂದ ತತ್ತರಿಸಿರುವ ರಾಜ್ಯ ಬಿಜೆಪಿಯಲ್ಲಿ‌ ಭಿನ್ನಮತದ ಧಗೆ ಆವರಿಸಿದೆ. ಅದರಲ್ಲೂ ಬೆಳಗಾವಿ ಬಿಜೆಪಿಯ ಬಿಕ್ಕಟ್ಟು ವರಿಷ್ಠರಿಗೆ ಹೊಸ ತಲೆ ನೋವು ತಂದಿದೆ.
    ಬೆಳಗಾವಿ ಬಿಜೆಪಿಯ ಬಹುತೇಕ ನಾಯಕರು ಮಾಜಿ ಮಂತ್ರಿ ರಮೇಶ್‌ ಜಾರಕಿಹೊಳಿ ವಿರುದ್ಧ ಸಮರ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ,ಗೃಹ ಮಂತ್ರಿ ಅಮಿತ್ ಶಾ,ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ಪತ್ರ ಬರೆದಿರುವ ಜಿಲ್ಲೆಯ ಬಿಜೆಪಿ ನಾಯಕರು ರಮೇಶ್ ಜಾರಕಿಹೊಳಿ ಅವರಿಗೆ ನೀಡುತ್ತಿರುವ ಪ್ರಾತಿನಿಧ್ಯ ಕಡಿಮೆ‌ ಮಾಡಿ ಎಂದು ಮನವಿ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಬಿಜೆಪಿಯ ಅನಭಿಷಕ್ತ ದೊರೆಯಂತೆ ವರ್ತಿಸುತ್ತಿದ್ದಾರೆ.ಯಾವ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ,ಕಾರ್ಯಕರ್ತರ ಅಭಿಪ್ರಾಯಗಳಿಗೆ ಮಾನ್ಯತೆ ನೀಡುವುದಿಲ್ಲ.ತಾವು ಹೇಳಿದ್ದೇ ಆಗಬೇಕು ಎಂಬಂತೆ ವರ್ತಿಸುತ್ತಿದ್ದಾರೆ. ತಮ್ಮ ಆಪ್ತ ವಲಯದಲ್ಲಿರುವರನ್ನು ಬಿಟ್ಟರೆ ಉಳಿದ ಯಾವ ನಾಯಕರನ್ನು ಲೆಕ್ಕಕ್ಕೆ ತೆಗೆದುಕೊಳ್ಳುತ್ತಿಲ್ಲ. ಇದು ಪಕ್ಷ ಸಂಘಟನೆಯ ಮೇಲೆ ಗಂಭೀರ ಸ್ವರೂಪದ ಪರಿಣಾಮ ಬೀರುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ಗೊತ್ತಾಗಿದೆ.

    ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ರಮೇಶ ಜಾರಕಿಹೊಳಿ ಖುದ್ದಾಗಿ ಮುಂದೆ ಬಂದು ನಾಯಕತ್ವ ವಹಿಸಿಕೊಂಡರು. ಅವರ ಧೋರಣೆ ಜಿಲ್ಲೆಯ ಇತರ ನಾಯಕರು ಹಾಗೂ ಒಂದು ದೊಡ್ಡ ಸಮುದಾಯದ ಮುಖಂಡರಿಗೆ ಇಷ್ಟವಾಗಲಿಲ್ಲ. ಕಾರ್ಯಕರ್ತರಲ್ಲೂ ಗೊಂದಲಗಳು ಮೂಡಿದವು. ಹೀಗಾಗಿ, ಜಿಲ್ಲೆಯ 18 ಕ್ಷೇತ್ರಗಳ ಪೈಕಿ 11ರಲ್ಲಿ ಬಿಜೆಪಿಗೆ ಸೋಲಾಗಿದೆ. 13ರಷ್ಟಿದ್ದ ಬಿಜೆಪಿ ಶಾಸಕರ ಸಂಖ್ಯೆ ಈಗ 7ಕ್ಕೆ ಇಳಿದಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ ಇವರ ಚಟುವಟಿಕೆಗಳಿಗೆ ಈಗಲೇ ಕಡಿವಾಣ ಹಾಕಬೇಕು, ಅವರನ್ನು ಗೋಕಾಕ್ ವಿಧಾನಸಭೆ ಕ್ಷೇತ್ರಕ್ಕೆ ಸೀಮಿತಗೊಳಿಸಬೇಕು.ಜಿಲ್ಲೆಯ ಇತರೆ ಕ್ಷೇತ್ರಗಳಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡಲು ಬಿಡಬಾರದು ಎಂದು ಮನವಿ ಮಾಡಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
    ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಮೇಶ ಜಾರಕಿಹೊಳಿ ಅವರೇ ನಾಯಕತ್ವ ವಹಿಸಿಕೊಳ್ಳುವ ಇರಾದೆ ಇದೆ. ಇದಕ್ಕೆ ಅವಕಾಶ ನೀಡಬಾರದು ಎಂದೂ ದೂರಿನಲ್ಲಿ ತಿಳಿಸಲಾಗಿದೆ. ಸಾಮೂಹಿಕ ನಾಯಕತ್ವದ ಮೇಲೆ ನಂಬಿಕೆ ಇಟ್ಟ ಬಿಜೆಪಿಯಲ್ಲಿ, ರಮೇಶ ಜಾರಕಿಹೊಳಿ ಏಕಮಾತ್ರ ನಾಯಕ ಎಂಬಂತೆ ಬಿಂಬಿಸಿಕೊಂಡರು. ಇದನ್ನು ಕಾರ್ಯಕರ್ತರು ಒಪ್ಪಿಕೊಳ್ಳಲಿಲ್ಲ. ಮುಂದೆಯೂ ಲೋಕಸಭೆ ಚುನಾವಣೆ ಕಾಲಕ್ಕೆ ಇದೇ ರೀತಿಯ ಭಾವನೆ ಮೂಡಬಾರದು’ ಎಂದು ಕೆಲವರು ಹೈಕಮಾಂಡ್‌ ಮುಂದೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

    ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ, ಅಥಣಿ, ಕಾಗವಾಡ, ಯಮಕನಮರಡಿ, ರಾಮದುರ್ಗ ಕ್ಷೇತ್ರಗಳಲ್ಲಿ ರಮೇಶ ಜಾರಕಿಹೊಳಿ ತಮ್ಮ ಬೆಂಬಲಿಗರನ್ನೇ ಕಣಕ್ಕಿಳಿಸಿದರು. ಅವರು ಟಿಕೆಟ್‌ ಕೊಡಿಸಿದ ಯಾವ ಅಭ್ಯರ್ಥಿಯೂ ಗೆಲ್ಲಲಿಲ್ಲ. ಅಲ್ಲದೇ, ಉಳಿದ ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳಿಗೇ ಅಡ್ಡಗಾಲು ಹಾಕಿದರು ಎಂದು ಪತ್ರದಲ್ಲಿ ವಿವರಿಸಿರುವುದಾಗಿ ತಿಳಿದು ಬಂದಿದೆ ಸೋಲಿನಿಂದ ಕಂಗೆಟ್ಟು ಪ್ರತಿಪಕ್ಷ ನಾಯಕನ ಆಯ್ಕೆಗೆ ಒಮ್ಮತ ಮೂಡಿಸಲು ಪ್ರಯತ್ನ ನಡೆಸಿರುವ ಪಕ್ಷದಲ್ಲಿ ಜಾರಕಿಹೊಳಿ ಅವರ ಕುರಿತು ಉಂಟಾಗಿರುವ ವಿದ್ಯಮಾನ ಹೊಸ ಸಮಸ್ಯೆ ಹುಟ್ಟು ಹಾಕಿದೆ.

    Verbattle
    Verbattle
    Verbattle
    Congress Karnataka m News Politics Ramesh Jarkiholi ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಕಮೀಷನ್ ಕೇಳಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ | DK Shivakumar
    Next Article ಗುತ್ತಿಗೆದಾರರ ಕಮೀಷನ್ – ಬಿಜೆಪಿ ಕೃಪಾಪೋಷಿತ ನಾಟಕ | BJP
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    1 ಟಿಪ್ಪಣಿ

    1. Stesho on ಮಾರ್ಚ್ 21, 2026 1:17 ಫೂರ್ವಾಹ್ನ

      Betano Casino https://betanogame.org/ is your lucky charm. Grab 100% up to €500 bonus and dive into live gaming action. Start spinning and winning immediately.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.