Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪುನೀತ್ ಕೆರೆಹಳ್ಳಿ ಅರೆಸ್ಟ್ | Puneeth Kerehalli
    Viral

    ಪುನೀತ್ ಕೆರೆಹಳ್ಳಿ ಅರೆಸ್ಟ್ | Puneeth Kerehalli

    vartha chakraBy vartha chakraಆಗಷ್ಟ್ 12, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.12- ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ  ಬಂಧಿಸಿರುವ ಸಿಸಿಬಿ ಪೊಲೀಸರು ಆತನ ವಿರುದ್ಧ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಕಳೆದ ಹತ್ತು ವರ್ಷಗಳ ಸಮಾಜದಲ್ಲಿ ಸಾಮರಸ್ಯ ಕದಡುವ, ಸಮಾಜ ವಿರೋಧ ಕಾರ್ಯಗಳ, ಅಪರಾಧ ಪ್ರಕರಣಗಳನ್ನು ಆಧರಿಸಿ ಜೆಪಿ ನಗರದ‌ ಪುನೀತ್‌ ಕೆರೆಹಳ್ಳಿ(32) ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ತಿಳಿಸಿದ್ದಾರೆ.

    ಹಾಸನ ಮೂಲದ ಆರೋಪಿ ಪುನೀತ್ ಕೆರೆಹಳ್ಳಿ ರಾಷ್ಟ್ರ ರಕ್ಷಣಾ ಪಡೆ ಎಂಬ ಸಂಘಟನೆಯನ್ನು ನಡೆಸುತ್ತಿದ್ದು, ಆ ಮೂಲಕ ಜನರನ್ನು ಬೆದರಿಸುವ, ಸಮಾಜದ ಶಾಂತಿ ಕದಡುವ, ಗೋ ರಕ್ಷಣೆ ಹೆಸರಿನಲ್ಲಿ ವ್ಯಾಪಾರಿಗಳನ್ನು ಬೆದರಿಸುವ ಕಾರ್ಯಗಳಲ್ಲಿ ತೊಡಗಿದ್ದ.

    2013ರಿಂದ ಕೊಲೆ, ಕೊಲೆಯತ್ನ, ದೊಂಬಿ, ಪ್ರಾಣ ಬೆದರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪುನೀತ್ ಕೆರೆಹಳ್ಳಿ ವಿರುದ್ಧ ಡಿಜೆ ಹಳ್ಳಿ, ಬೇಗೂರು, ಕಗ್ಗಲಿಪುರ, ಹಲಸೂರು ಗೇಟ್, ಚಾಮರಾಜಪೇಟೆ, ಎಲೆಕ್ಟ್ರಾನಿಕ್ ಸಿಟಿ, ಮಳವಳ್ಳಿ ಮತ್ತು ಸಾತನೂರು ಸೇರಿ ವಿವಿಧ ಠಾಣಾ ವ್ಯಾಪ್ತಿಯಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಸಮಾಜದಲ್ಲಿ ಶಾಂತಿ‌ ಕದಡುವ ಯತ್ನ ನಡೆಸುತ್ತಿದ್ದ.

    ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿ ಪಟ್ಟಿ ತೆರೆಯಲಾಗಿದೆ. ಕೊಲೆ ಪ್ರಕರಣವೊಂದರಲ್ಲಿ ಜೈಲಿಗೆ ಹೋಗಿದ್ದ ಕೆರೆಹಳ್ಳಿ ಇತ್ತೀಚೆಗಷ್ಟೇ ಜಾಮೀನು ಮೂಲಕ ಬಿಡುಗೆಡೆಯಾಗಿದ್ದು, ಹಳೇ ಚಾಳಿ ಮುಂದುವರಿಸಿದ್ದ ಹಿನ್ನೆಲೆಯಲ್ಲಿ ಕೆರೆಹಳ್ಳಿಗೆ ನೋಟೀಸ್ ನೀಡಿದ್ದ ಚಿಕ್ಕಪೇಟೆ ಎಸಿಪಿ ಅವರು, ನಿನ್ನ ಮೇಲೆ ಯಾಕೆ ರೌಡಿಶೀಟ್ ತೆರೆಯಬಾರದು ಎಂಬುದಕ್ಕೆ ವಿವರಣೆ ನೀಡಬೇಕು. ಇಲ್ಲದಿದ್ದರೆ, ಯಾವುದೇ ವಿವರಣೆ ಇಲ್ಲ ಎಂದು ಭಾವಿಸಿ ರೌಡಿ ಪಟ್ಟಿ ತೆರೆಯುವುದಾಗಿ ಸೂಚಿಸಿದ್ದರು.

    ಈ ಹಿಂದೆ ಭಾರೀ ಸದ್ದು ಮಾಡಿದ್ದ ಹಲಾಲ್ ಕಟ್ ಸೇರಿದಂತೆ ಹಲವು ಗಲಾಟೆಗಳಲ್ಲಿ ಪುನೀತ್ ಕೆರೆಹಳ್ಳಿ ಸಕ್ರಿಯನಾಗಿದ್ದ. ವಿಧಾನಸಭೆ ಚುನಾವಣೆ ಮುಂಚೆ ಗೋ ಸಾಗಾಟಗಾರರನ್ನು ಪೊಲೀಸ್ ಒಪ್ಪಿಸುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದಾನೆಂದು ಹೇಳಲಾಗಿತ್ತು. ರಾಮನಗರ ಪೊಲೀಸರು ಈತನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಇತ್ತೀಚೆಗಷ್ಟೇ ಜಾಮೀನು ಮೇಲೆ ಪುನೀತ್ ಕೆರೆಹಳ್ಳಿ ಜೈಲಿನಿಂದ ಹೊರಗೆ ಬಂದಿದ್ದ. ಈಗ ಮತ್ತೆ ಬಂಧಿಸಲಾಗಿದೆ.

    #pune HAL puneet ಕೊಲೆ ಚುನಾವಣೆ ವ್ಯಾಪಾರ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಜಯದೇವ ಆಸ್ಪತ್ರೆಯ ಹೊಸ ಸಾಧನೆ | Jayadeva Hospital
    Next Article ಅಶ್ವಥ್ ನಾರಾಯಣ ಅಲ್ಲ, ನವರಂಗಿ ನಾರಾಯಣ | Ashwath Narayan
    vartha chakra
    • Website

    Related Posts

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಮಹಿಳೆಯರೇ‌ ಹುಷಾರ್

    ಮೇ 7, 2025

    ಲಂಚ ಪಡೆಯುವಾಗ ಸಿಕ್ಕಿ ಬಿದ್ದರು

    ಮೇ 6, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShaneJetty ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • LarrySquag ರಲ್ಲಿ ಪ್ರಧಾನಿಗೆ ಪತ್ರ ಬರೆದ ಯತ್ನಾಳ್.
    • MarvinPraft ರಲ್ಲಿ ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇತಿಹಾಸದಲ್ಲೇ ಮೊದಲಬಾರಿಗೆ ಕಗ್ಗತ್ತಲಲ್ಲಿ ಮುಳುಗಿದ ಸ್ವರ್ಣ ಮಂದಿರ#goldentemple #news #facts #historyinshorts
    Subscribe