Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಧಾಮ್ ದಾಸ್ ಬೇಡವೇ ಬೇಡ | Sudham Das
    ಪ್ರಚಲಿತ

    ಸುಧಾಮ್ ದಾಸ್ ಬೇಡವೇ ಬೇಡ | Sudham Das

    vartha chakraBy vartha chakraಆಗಷ್ಟ್ 18, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.18 – ವಿಧಾನಪರಿಷತ್ ನಲ್ಲಿ ತೆರವಾಗಿರುವ ಮೂವರು ಸದಸ್ಯರ ನಾಮಕರಣ ವಿಚಾರ ಇದೀಗ ಕಾಂಗ್ರೆಸ್ ನಲ್ಲಿ ಹೊಸ ಸಂಘರ್ಷಕ್ಕೆ ಕಾರಣವಾಗಿದೆ.
    ತೆರವಾದ ಮೂರು ಸ್ಥಾನಗಳ ನೇಮಕಾತಿಗೆ ಪ್ರಕ್ರಿಯೆ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಹೈಕಮಾಂಡ್ ಮತ್ತು ರಾಜ್ಯದ ನಾಯಕರ ಜೊತೆ ಸಮಾಲೋಚನೆ ನಡೆಸಿ, ಮಾಜಿ ಮಂತ್ರಿಗಳಾದ ಉಮಾಶ್ರೀ, ಎಂ.ಆರ್.ಸೀತಾರಾಂ ಮತ್ತು ಜಾರಿ ನಿರ್ದೇಶನಾಲಯದ ನಿವೃತ್ತ ಅಧಿಕಾರಿ ಸುಧಾಮ್ ದಾಸ್ ಅವರನ್ನು ಸದಸ್ಯರಾಗಿ ನೇಮಿಸಲು ತೀರ್ಮಾನಿಸಿದರು.
    ಈ ಕುರಿತಾದ ಕಡತ ಅನುಮೋದನೆಗಾಗಿ ರಾಜಭವನ ತಲುಪುತ್ತಿದ್ದಂತೆ,ಸರ್ಕಾರದಲ್ಲಿ ಅಪಸ್ವರ ಕೇಳಿಬಂದಿದೆ.
    ಅದರಲ್ಲೂ ನಿವೃತ್ತ ಅಧಿಕಾರಿ ಸುಧಾಮ್ ದಾಸ್ ಅವರನ್ನು ವಿಧಾನಪರಿಷತ್‍ಗೆ ನಾಮನಿರ್ದೇಶನ ಮಾಡುವಂತೆ ಶಿಫಾರಸ್ಸು ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿರ್ಧಾರವನ್ನು ವಿರೋಧಿಸಿರುವ ದಲಿತ ಸಮುದಾಯದ ಸಚಿವರು ಈ ಪಟ್ಟಿ ತಡೆ ಹಿಡಿಯಲು ಮುಖ್ಯಮಂತ್ರಿಗೆ ಸೂಚಿಸಲು ಕೋರಿ ಹೈಕಮಾಂಡ್‍ಗೆ ಪತ್ರ ಬರೆದಿದ್ದಾರೆ.

    ಗೃಹ ಸಚಿವ ಡಾ.ಜಿ.ಪರಮೇಶ್ವರ್,ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಮತ್ತು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ಅವರು ಪತ್ರ ಮುಖೇನ ತಮ್ಮ ಅಸಮಧಾನ ಹೊರ ಹಾಕಿದ್ದಾರೆ.
    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಬರೆದಿರುವ ಪತ್ರದಲ್ಲಿ ಸುಧಾಮ್ ದಾಸ್ ಅವರನ್ನು ವಿಧಾನಪರಿಷತ್‍ಗೆ ನಾಮನಿರ್ದೇಶನ ಮಾಡಲು ತಮ್ಮ ಗಮನಕ್ಕೆ ತರದೆ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ.
    ಏಕಪಕ್ಷೀಯವಾಗಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ದಲಿತರಿಗೆ ಪ್ರಾತಿನಿಧ್ಯದ ಹೆಸರಲ್ಲಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ.ಕೇಂದ್ರ ಸರ್ಕಾರದ ಉನ್ನತ ಹುದ್ದೆಯಲ್ಲಿದ್ದ ಸುಧಾಮ್ ದಾಸ್ ಅವರು ಅನಿರೀಕ್ಷಿತವಾಗಿ ತಮ್ಮ ಹುದ್ದೆಗೆ ರಾಜೀನಾಮೆ ಕೊಡುತ್ತಾರೆ. ನಂತರ ಅವರನ್ನು ರಾಜ್ಯ ಮಾಹಿತಿ ಹಕ್ಕು ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಲಾಗುತ್ತದೆ.

    ಕಳೆದ ಮಾರ್ಚ್ ನಲ್ಲಿ ಈ ಹುದ್ದೆಗೂ ರಾಜೀನಾಮೆ ನೀಡಿದ ಅವರು ನಂತರ ಕಾಂಗ್ರೆಸ್ ಸೇರ್ಪಡೆಯಾದರು. ಇದೀಗ ಅವರನ್ನು ವಿಧಾನಪರಿಷತ್ ಸದಸ್ಯರಾಗಿ ನಾಮಕರಣ ಮಾಡಲು ತೀರ್ಮಾನಿಸಲಾಗಿದೆ.ಇದು ದಲಿತ ಸಮುದಾಯದ ಹೆಸರಲ್ಲಿ ದಲಿತರಿಗೆ ಮಾಡಿದ ಅನ್ಯಾಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
    ಇಂತಹ ನಾಮಕರಣ ಸಮಯದಲ್ಲಿ ಸಾಮಾಜಿಕ ನ್ಯಾಯ ಪಾಲನೆಯ ಜೊತೆಗೆ ಪ್ರಾದೇಶಿಕ ಅಸಮತೋಲನ ನಿವಾರಣೆಗೂ ಗಮನ ಹರಿಸಬೇಕು ಆದರೆ ಇಲ್ಲಿ ಈ ಯಾವುದೇ ಪ್ರಕ್ರಿಯೆಗಳಿಗೆ ಅವಕಾಶ ಸಿಕ್ಕಿಲ್ಲ.

     

    ಹೀಗಾಗಿ ತಕ್ಷಣವೇ ಈ ನೇಮಕಾತಿ ಪ್ರಸ್ತಾಪ ತಡೆ ಹಿಡಿಯಲು ಸೂಚನೆ ನೀಡಬೇಕೆಂದು ಕೋರಿರುವುದಾಗಿ ಗೊತ್ತಾಗಿದೆ ಪತ್ರ ನಿಜ:
    ಈ ನಡುವೆ ಎಲ್ಲಾ ಬೆಳವಣಿಗೆಗಳ ಕುರಿತು ಪ್ರತಿಕ್ರಿಯೆ ನೀಡಿದ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಾವು ಹೈಕಮಾಂಡ್ ಗೆ ಪತ್ರ ಬರೆದಿರುವುದು ನಿಜ.ಅದರೆ ಸುಧಾಮ್ ದಾಸ್ ಆಯ್ಕೆಗೆ ವಿರೋಧಿಸಿಲ್ಲ ಬದಲಿಗೆ ನಿಷ್ಠಾವಂತರಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
    ಸುಧಾಮ್ ದಾಸ್ ಅವರು ಕೇವಲಮೂರು ತಿಂಗಳ ಹಿಂದೆ ಪಕ್ಷಕ್ಕೆ ಬಂದಿದ್ದಾರೆ. ಅವರು ಇನ್ನಷ್ಟು ದಿನ ಪಕ್ಷದ ಕೆಲಸ ಮಾಡಲಿ ನಂತರ ಅವರಿಗೆ ಅವಕಾಶ ಕೊಡಲಿ ಎಂದು ಹೇಳಿದ್ದೇವೆ,ಮೂವತ್ತು ವರ್ಷಗಳಿಗೂ ಅಧಿಕ ಕಾಲದಿಂದ ಪಕ್ಷಕ್ಕೆ ಕೆಲಸ ಮಾಡಿದವರು ಸಾಕಷ್ಟು ಜನ ಇದ್ದಾರೆ ಅವರಿಗೆ ಅವಕಾಶ ಕೊಡಿ ಎಂದು ಮನವಿ ಮಾಡಿರುವುದಾಗಿ ತಿಳಿಸಿದರು.

    Congress m mansoor khan MLC Sudham Das umashree ಕಾಂಗ್ರೆಸ್ ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಚಿಕನ್ ಖಾದ್ಯದಲ್ಲಿ ಸತ್ತ ಇಲಿ ಮರಿ | FDA
    Next Article ರೌಡಿ ಕೊಚ್ಚಿ ಕೊಂದವರು Surrender… | Siddapur Mahesha
    vartha chakra
    • Website

    Related Posts

    ಆಪರೇಷನ್ ಸಿಂಧೂರ

    ಮೇ 7, 2025

    ಜನಾರ್ದನ ರೆಡ್ಡಿ ಮತ್ತೆ ಜೈಲು ಪಾಲು

    ಮೇ 6, 2025

    ಬೆಚ್ಚಿ ಬಿದ್ದ ಮಂಗಳೂರು

    ಮೇ 2, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarrySquag ರಲ್ಲಿ ಶಿವಕುಮಾರ್ ಅವರಿಗೆ ಕಿರುಕುಳ? | DK Shivakumar
    • Martinboorn ರಲ್ಲಿ ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    • LarrySquag ರಲ್ಲಿ ರಾಮನಗರದಲ್ಲಿ ನಿಖಿಲ್ ಸ್ಪರ್ಧೆ Doubt! #jds #kumaraswamy #ramanagara
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇತಿಹಾಸದಲ್ಲೇ ಮೊದಲಬಾರಿಗೆ ಕಗ್ಗತ್ತಲಲ್ಲಿ ಮುಳುಗಿದ ಸ್ವರ್ಣ ಮಂದಿರ#goldentemple #news #facts #historyinshorts
    Subscribe