ಬೆಂಗಳೂರು,ಸೆ.3-ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ-KSRTC) ಬಸ್ಗಳಲ್ಲಿ ಕಂಡಕ್ಟರ್ ಹಾಗೂ ಪ್ರಯಾಣಿಕರ ಮಧ್ಯೆ ‘ಚಿಲ್ಲರೆ’ ಜಗಳ ತಪ್ಪಿಸಲು ಯುಪಿಐ ಪೇಮೆಂಟ್ ವ್ಯವಸ್ಥೆ ಜಾರಿಗೆ ತರಲು ನಿಗಮ ನಿರ್ಧರಿಸಿದೆ.
ಚಿಲ್ಲರೆ ಸಮಸ್ಯೆ ನಿವಾರಿಸುವ ದಿಸೆಯಲ್ಲಿ ಏಕೀಕೃತ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲು ಕೆಎಸ್ಆರ್ಟಿಸಿ ನಿರ್ಧರಿಸಿರುವುದರಿಂದ ಪ್ರಯಾಣಿಕರು ಇನ್ನು ಮುಂದೆ ಪೇಟಿಎಂ, ಫೋನ್ಪೇ, ಗೂಗಲ್ ಪೇ ಮೂಲಕ ಹಣ ಪಾವತಿಸಿ, ಟಿಕೆಟ್ ಖರೀದಿಸಬಹುದಾಗಿದೆ.
ನಗದು ರಹಿತ ಪಾವತಿ ಮೂಲಕ ಗ್ರಾಹಕರು ಹಾಗೂ ಸಾರಿಗೆ ಸಿಬ್ಬಂದಿಗೆ ಅನುಕೂಲ ಕಲ್ಪಿಸುವುದು ಕೆಎಸ್ಆರ್ಟಿಸಿ ಉದ್ದೇಶವಾಗಿದೆ.
ಪ್ರಾಯೋಗಿಕವಾಗಿ ಜಾರಿ:
ಕೆಲ ಆಯ್ದ ಬಸ್ಗಳಲ್ಲಿ ಮಾತ್ರ ಪ್ರಾಯೋಗಿಕವಾಗಿ ಯುಪಿಐ ಪೇಮೆಂಟ್ ವ್ಯವಸ್ಥೆ ಜಾರಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಕೆಎಸ್ಆರ್ಟಿಸಿಯ ಎಲ್ಲ ಬಸ್ಗಳಲ್ಲಿ ಯುಪಿಐ ಮೂಲಕ ಪಾವತಿಸಿ ಟಿಕೆಟ್ ಪಡೆಯುವ ವ್ಯವಸ್ಥೆ ಜಾರಿಗೆ ಬರಲಿದೆ.
ಮೊಬೈಲ್ ಮೂಲಕ ನೇರ ಬ್ಯಾಂಕ್ ಖಾತೆಯಿಂದ ಕೆಎಸ್ಆರ್ಟಿಸಿ ಬ್ಯಾಂಕ್ ಖಾತೆಗೆ ಗ್ರಾಹಕರ ಹಣ ಪಾವತಿ ಆಗಲಿದೆ ಎಂದು ತಿಳಿದುಬಂದಿದೆ.
ಕೆಎಸ್ಆರ್ಟಿಸಿ ಬಸ್ಗಳಲ್ಲಿ ಕ್ಯೂಆರ್ ಕೋಡ್ಗಳನ್ನು ಅಳವಡಿಸಲಾಗುತ್ತದೆ. ಆಗ ಗ್ರಾಹಕರು ಫೋನ್ಪೇ, ಗೂಗಲ್ ಪೇ, ಪೇಟಿಎಂ ಸೇರಿ ಯಾವುದೇ ಆನ್ಲೈನ್ ಅಪ್ಲಿಕೇಶನ್ಗಳ ಮೂಲಕ ಹಣವನ್ನು ಪಾವತಿಸಿ, ಟಿಕೆಟ್ ಖರೀದಿಸಬಹುದಾಗಿದೆ. ಕೆಎಸ್ಆರ್ಟಿಸಿ ನಿರ್ಧಾರವನ್ನು ಕಂಡಕ್ಟರ್ಗಳು ಹಾಗೂ ಪ್ರಯಾಣಿಕರು ಸ್ವಾಗತಿಸಿದ್ದಾರೆ

1 ಟಿಪ್ಪಣಿ
Betano ti accoglie a braccia aperte con bonus enormi. Ricevi il 100% fino a €500 piГ№ 200 giri gratis subito dopo il tuo primo deposito https://betanogame.org/it/mobile-app/. Dalle slot Megaways alla roulette live, l’eccitazione non finisce mai. Inizia a vincere ora.