Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಐ.ಟಿ.ದಾಳಿಯಲ್ಲಿ ಸಿಕ್ಕ ಹಣ:ಇವರ ಕೊರಳಿಗೆ ಉರುಳು | IT Raid
    Viral

    ಐ.ಟಿ.ದಾಳಿಯಲ್ಲಿ ಸಿಕ್ಕ ಹಣ:ಇವರ ಕೊರಳಿಗೆ ಉರುಳು | IT Raid

    vartha chakraBy vartha chakraಅಕ್ಟೋಬರ್ 14, 20234 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.14- ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ದಿಢೀರ್ ದಾಳಿಯಲ್ಲಿ‌ (IT Raid) ಬಿಬಿಎಂಪಿ ಗುತ್ತಿಗೆದಾರ ಮುಖ್ಯಮಂತ್ರಿ ಆಪ್ತ ಅಂಬಿಕಾಪತಿ ನಿವಾಸದಲ್ಲಿ ಪತ್ತೆಯಾದ 42 ಕೋಟಿ ರೂಪಾಯಿ ಇದೀಗ ಹಲವರಿಗೆ ಸಂಕಷ್ಟಕ್ಕೆ ಸಿಲುಕಿಸುವ ಸಾಧ್ಯತೆಯಿದೆ.ಪ್ರಕರಣ ಹೆಚ್ಚಿನ ತನಿಖೆಗಾಗಿ ಜಾರಿ ನಿರ್ದೇಶನಾಲಯಕ್ಕೆ ವರ್ಗಾವಣೆಯಾಗುವ ನಿರೀಕ್ಷೆಯಿದೆ.
    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯೆಯ ಪತಿಯಾಗಿರುವ ಅಂಬಿಕಾಪತಿ ಹಾಗೂ ಅವರ ಮಗನ ಮನೆ ಮತ್ತು ಸಂಬಂಧಿಕರ ಮನೆಗಳಿಂದ ಅಪಾರ ಪ್ರಮಾಣದ ಚಿನ್ನಾಭರಣ ವಶ ಪಡಿಸಿಕೊಳ್ಳಲಾಗಿದೆ.

    ನಿನ್ನೆ ಇಡೀ ರಾತ್ರಿ ಅಂಬಿಕಾಪತಿ ಅವರ ನಿವಾದಲ್ಲಿ ಶೋಧ ನಡೆಸಿದ ಐಟಿ ಅಧಿಕಾರಿಗಳು ಮನೆಯಲ್ಲಿದ್ದ ಲಾಕರ್‌ನ್ನು ತೆಗೆಸಿದ್ದು, ಲಾಕರ್‌ನಲ್ಲೂ ಎರಡು ಸೂಟ್‌ಕೇಸ್‌ನಲ್ಲಿ ನಗದು ಅಪಾರ ಮೌಲ್ಯದ ಚಿನ್ನಾಭರಣ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
    ಗುತ್ತಿಗೆದಾರರ ಮನೆಯಿಂದ ವಶಪಡಿಸಿಕೊಂಡ 42 ಕೋಟಿ ರೂ.ಗಳನ್ನು ಐಟಿ ಅಧಿಕಾರಿಗಳು ಬ್ಯಾಂಕ್‌ನಲ್ಲಿ ಡೆಪಾಸಿಟ್ ಮಾಡಿದ್ದು,ಶೋಧ ಮುಂದುವರೆಸಿದ್ದಾರೆ.ಅಲ್ಲದೆ ಹಣದ ಮೂಲದ ಬಗ್ಗೆ ಹಲವರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಈ ವೇಳೆ ಅವರು ನೀಡಿರುವ ಉತ್ತರಗಳು ಗೊಂದಲಕ್ಕೆ ಕಾರಣವಾಗಿದ್ದು,ಹೆಚ್ಚಿನ ತನಿಖೆಗಾಗಿ ಪ್ರಕರಣ ಜಾರಿ ನಿರ್ದೇಶನಾಲಯಕ್ಕೆ ವರ್ಗಾವಣೆಯಾಗುವ ಸಾಧ್ಯತೆಯಿದೆ.

    ಅಂಬಿಕಾಪತಿ ಮನೆಯಲ್ಲಿ ಪತ್ತೆಯಾದ ಹಣದ ಮೂಲದ ಬಗ್ಗೆ ಅಂಬಿಕಾಪತಿ ಯಾವುದೇ ಮಾಹಿತಿಯನ್ನು ನೀಡಿಲ್ಲ. ಹಣ ಎಲ್ಲಿಂದ ಬಂದಿದೆ. ಯಾರು ತಂದುಕೊಟ್ಟರು ಎಂಬ ಬಗ್ಗೆಯೂ ಐಟಿ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.ಈ ಕುರಿತು ಸೋಮವಾರ ವಿಚಾರಣೆಗೆ ಬರುವಂತೆ ಅಂಬಿಕಾಪತಿ ಮತ್ತು ಅವರ ಸಂಬಂಧಿಕರಿಗೆ ನೋಟಿಸ್ ಜಾರಿ ಮಾಡಲಾಗಿದೆ.
    ತೆಲಂಗಾಣಕ್ಕೆ ರವಾನೆ:
    ಒಟ್ಟು 26 ಬಾಕ್ಸ್ ಗಳಲ್ಲಿ ಜೋಡಿಸಲಾಗಿದ್ದ ಈ ಹಣ ವಿಧಾನಸಭೆ ಚುನಾವಣೆ ಯಲ್ಲಿ ಸ್ಪರ್ಧಿಸಿರುವ ಕೆಲವು ಅಭ್ಯರ್ಥಿಗಳಿಗೆ ತಲುಪಿಸಲು ಸಂಗ್ರಹಿಸಲಾಗಿತ್ತು. ಮೊನ್ನೆಯೇ ಇದನ್ನು ವರ್ಗಾವಣೆ ಮಾಡಬೇಕಿತ್ತಾದರೂ ಇನ್ನೂ ಎಂಟು ಕೋಟಿ ರೂಪಾಯಿ ಬರಬೇಕಿದ್ದು,ಎಲ್ಲವನ್ನೂ ಒಟ್ಟಿಗೆ ಕೊಂಡೊಯ್ಯುವಂತೆ ಸಲಹೆ ಮಾಡಿದ ಹಿನ್ನೆಲೆಯಲ್ಲಿ ಅದಕ್ಕಾಗಿ ಕಾಯುತ್ತಿದ್ದರು ಎನ್ನಲಾಗಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತನಾಗಿರುವ ಗುತ್ತಿಗೆದಾರ ಅಂಬಿಕಾಪತಿ ರಾಜ್ಯದ ಪ್ರಮುಖ ವ್ಯಕ್ತಿಯೊಬ್ಬರ ಸೂಚನೆ ಮೇರೆಗೆ ಈ ಹಣವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಗುತ್ತಿಗೆದಬಿಜೆಪಂಗ್ರಹಿಸಲಾಗಿತ್ತು ಎನ್ನಲಾಗಿದ್ದು, ಈ ಹಣ ನೀಡಿದ ಎಲ್ಲರಿಗೂ ನೋಟೀಸ್ ನೀಡಲು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ತೀರ್ಮಾನಿಸಿದ್ದಾರೆ.ಹೀಗಾಗಿ ಈ ಬೆಳವಣಿಗೆ ಹಲವರಿಗೆ ಸಂಕಷ್ಟ ತಂದೊಡ್ಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

    ಪಿತೃ ಪಕ್ಷ
    ಐಟಿ ಅಧಿಕಾರಿಗಳು ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದರೂ ಅಂಬಿಕಾಪತಿ ಕುಟುಂಬಸ್ಥರು ಪಿತೃ ಪಕ್ಷದ ಕಾರ್ಯಕ್ಕೂ ಸಿದ್ಧತೆ ನಡೆಸಿದರು. ಈ ದಾಳಿಯಿಂದ ತಾವು ವಿಚಲಿತರಾಗಿಲ್ಲ ಎಂದು ತೋರಿಸಿಕೊಳ್ಳುವ ರೀತಿಯಲ್ಲಿ ಮನೆಯಲ್ಲಿ ತೋರಣ ಕಟ್ಟಿ ಪೂಜೆ ನಡೆಸಿದರು.

    ರಾಜಕೀಯ ಅಸ್ತ್ರ
    ಗುತ್ತಿಗೆದಾರನ ಮನೆಯಿಂದ 42 ಕೋಟಿ ರೂಪಾಯಿ ಜಪ್ತಿ ಮಾಡಿದ ಪ್ರಕರಣವನ್ನು ಬಿಜೆಪಿ ತನ್ನ ರಾಜಕೀಯ ಹೋರಾಟದ ಅಸ್ತ್ರವಾಗಿ ಬಳಸಿಕೊಳ್ಳಲು ನಿರ್ಧರಿಸಿದೆ., ಬಿಬಿಎಂಪಿ ಗುತ್ತಿಗೆದಾರನಾಗಿರುವ ಅಂಬಿಕಾಪತಿಯ ಪತ್ನಿ ಮಾಜಿ ಕಾರ್ಪೋರೇಟರ್ ಆಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸೇರಿದವರು. ಹಾಗಾಗಿ, ಈ ವಿಚಾರವನ್ನು ಮುಂದಿನ ಚುನಾವಣೆಯಲ್ಲಿ ಬಳಸಿ ಕಾಂಗ್ರೆಸ್ ನಾಯಕರಿಗೆ ಮುಜುಗರ ಉಂಟು ಮಾಡಲು ಬಿಜೆಪಿ ತಯಾರಿ ನಡೆಸಿದೆ.

    Verbattle
    Verbattle
    Verbattle
    AI crime Government IT raid Karnataka News Trending ಕಲೆ ಕಾಂಗ್ರೆಸ್ ಚಿನ್ನ ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Article65 ಜನರ ಪ್ರಾಣ ಉಳಿಸಿದ ಲಾರಿ ಚಾಲಕ | Lorry Driver
    Next Article BBMP‌ ಯಲ್ಲಿ ಲಂಚವತಾರ – ಮುಖ್ಯ ಆಯುಕ್ತರಿಗೆ ಕಪ್ಪ ಕೊಡಬೇಕಂತೆ?
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • LinwoodGah ರಲ್ಲಿ ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • Williamkendy ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.