Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಟಿಕೆಟ್ ವಂಚನೆಯ ಮತ್ತೊಂದು ಪ್ರಕರಣ | BJP
    Trending

    ಬಿಜೆಪಿ ಟಿಕೆಟ್ ವಂಚನೆಯ ಮತ್ತೊಂದು ಪ್ರಕರಣ | BJP

    vartha chakraBy vartha chakraಅಕ್ಟೋಬರ್ 22, 2023Updated:ಅಕ್ಟೋಬರ್ 23, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ.22- ಬಿಜೆಪಿ (BJP) ವಿಧಾನಸಭಾ ಟಿಕೆಟ್ ಕೊಡಿಸುವುದಾಗಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮಾಡಿದ ವಂಚನೆಯ ರೀತಿಯ ಮತ್ತೊಂದು ಬಿಜೆಪಿ ಟಿಕೆಟ್‌ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು,ಎಫ್‌ಐಆರ್‌ ದಾಖಲಿಸಲಾಗಿದೆ.
    ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣ ಇದಾಗಿದ್ದು, ಕೊಟ್ಟೂರು ನಿವಾಸಿ, ನಿವೃತ್ತ ಎಂಜಿನಿಯರ್‌ ಶಿವಮೂರ್ತಿ ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
    ಕಳೆದ ವಿಧಾನಸಭಾ ಚುನಾವಣೆಯಲ್ಲಿ  ಹಗರಿಬೊಮ್ಮನಹಳ್ಳಿ ಎಸ್‌ಸಿ ಮೀಸಲು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಶಿವಮೂರ್ತಿ ಅವರಿಗೆ ನಾಲ್ವರ ತಂಡವು ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವಮೂರ್ತಿ, ಪಕ್ಷದ ಚಟುವಟಿಕೆಗಾಗಿ 65 ಲಕ್ಷ ರೂಗಳನ್ನು ಖರ್ಚು ಮಾಡಿಸಲಾಗಿದೆ. ಅಲ್ಲದೆ, ಟಿಕೆಟ್‌ ಕೊಡಿಸುವುದಾಗಿ ವಂಚಕರು ತಮ್ಮ ಬಳಿ ಒಟ್ಟು 1.90 ಕೋಟಿ ರೂಗಳನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ಒಟ್ಟು 2.55 ಕೋಟಿ ರೂ. ವಂಚನೆ ಮಾಡಲಾಗಿದೆ ಎಂದು ಆರೋಪಿದ್ದಾರೆ.
    ಕೊಟ್ಟೂರಿನ ಕಟಾರಿ ಆಪ್ಟಿಕಲ್ ಮಾಲೀಕ ಮೋಹನ್ ಕಟಾರಿಯಾ, ಬಿಜೆಪಿ ಮಾಜಿ ಮುಖಂಡ, ಹಾಲಿ ಜನಾರ್ದನ ರೆಡ್ಡಿ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷ ರೇವಣಸಿದ್ದಪ್ಪ ಹಾಗೂ ಪುತ್ತೂರು ಮೂಲದ ಶೇಖರ್ ಪುರುಷೋತ್ತಮ್ ನಿರ್ಲಕಟ್ಟೆ (ರಾಜಶೇಖರ್) ಎಂಬುವವರಿಂದ ವಂಚನೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
    ಒಟ್ಟು 1.90 ಕೋಟಿ ರೂಗಳನ್ನು ಇದುವರೆಗೆ ಪಡೆಯಾಗಿದೆ. ಅದರಲ್ಲಿ 65 ಲಕ್ಷ ರೂಗಳನ್ನು ಪಕ್ಷದ ಬೇರೆ ಬೇರೆ ವಿಚಾರಕ್ಕೆ ಖರ್ಚು ಮಾಡಿಸಲಾಗಿದೆ ಎಂದು ಆರೋಪ ಮಾಡಿರುವ ಶಿವಮೂರ್ತಿ, ತಾವು ಕೊಟ್ಟಿರುವ ಎಲ್ಲ ಹಣದ ದಾಖಲೆ ಸಮೇತ ದೂರು ನೀಡಿದ್ದಾರೆ. ಅಲ್ಲದೆ, ಈಗ ಹಣವನ್ನು ವಾಪಸ್ ಕೇಳಿದ್ದಕ್ಕೆ ಧಮಕಿ ಹಾಕುತ್ತಿದ್ದಾರೆ ಎಂದು ಸಹ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಗೃಹ ಸಚಿವರಿಗೆ ಮನವಿ:
    ಹಣ ಕಳೆದುಕೊಂಡ ಶಿವಮೂರ್ತಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ಗೆ ಪತ್ರ ಬರೆದು ಮನವಿ ಮಾಡಿದ್ದರು. ತಮಗೆ ವಂಚನೆ ಮಾಡಿದವರ ಬಗ್ಗೆ ಸಂಪೂರ್ಣ ವಿವರವನ್ನು ಹಾಕಿ, ಮೋಸ ಮಾಡಿದವರ ಮೇಲೆ ಕ್ರಮ ಕೈಗೊಂಡು ತಮ್ಮ ಹಣವನ್ನು ವಾಪಸ್‌ ಕೊಡಿಸುವಂತೆ ಕೋರಿದ್ದಾರೆ.
    ಈ ವಂಚಕ ತಂಡವು ತಮಗೆ 2022ರ ಅಕ್ಟೋಬರ್ 23ಕ್ಕೆ ಪುತ್ತೂರು ಬಿಜೆಪಿ (BJP) ಮುಖಂಡ ಶೇಖರ್‌ಗೆ ಪರಿಚಯ ಮಾಡಿಸಿದೆ. ಬಳಿಕ ನಳಿನ್ ಕುಮಾರ್ ಕಟೀಲ್ ಅವರನ್ನು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಭೇಟಿ ಮಾಡಿಸಿತ್ತು. ನಳಿನ್ ಕುಮಾರ್ ಕಟೀಲ್ ಕೂಡಾ ಟಿಕೆಟ್ ವಿಚಾರ ಪುತ್ತೂರು ಬಿಜೆಪಿ ಮುಖಂಡ ಶೇಖರ್ ಎನ್.ಪಿ ಬಳಿಯೇ ಮಾತನಾಡಿ
    ಎಂದು ಹೇಳಿದ್ದರು ಎಂದು ಶಿವಮೂರ್ತಿ ಅವರು ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    2.55 ಕೋಟಿ ಮೋಸ:
    2022ರ ಅಕ್ಟೋಬರ್‌ನಿಂದ ಹಣದ ವ್ಯವಹಾರ ಶುರುವಾಗಿದೆ. ಏಪ್ರಿಲ್ 2023ರವರೆಗೆ ಒಟ್ಟು 2.55 ಕೋಟಿ ರೂಪಾಯಿ ಹಣವನ್ನು ಈ ವಂಚಕ ತಂಡ ಪಡೆದಿದೆ ಎಂದು ಶಿವಮೂರ್ತಿ ಆರೋಪಿಸಿದ್ದಾರೆ.
    ಟಿಕೆಟ್‌ ಪ್ರಕಟಣೆ ಬಳಿಕ ವರಸೆ ಬೇರೆ
    ಹಗರಿಬೊಮ್ಮನಹಳ್ಳಿ ಬಿಜೆಪಿ ಟಿಕೆಟ್ ಅನ್ನು ಬಲ್ಲಾಹುಣ್ಸಿ ರಾಮಣ್ಣ ಎಂಬುವವರಿಗೆ ಅನೌನ್ಸ್ ಆಗಿತ್ತು. ಟಿಕೆಟ್ ಘೋಷಣೆ ಆಗುತ್ತಿದ್ದಂತೆ ನಿವೃತ್ತ ಎಂಜಿನಿಯರ್ ಶಿವಮೂರ್ತಿಗೆ ತಾವು ಮೋಸ ಹೋಗಿರುವುದು ಅರಿವಿಗೆ ಬಂದಿದೆ. ಹಾಗಾಗಿ ಅವರು ವಂಚಕರಿಗೆ ಕರೆ ಮಾಡಿ ಕೇಳಿದ್ದಾರೆ. ಆದರೆ, ಹಣ ಕೊಡುವುದಿಲ್ಲ, ಏನ್ ಮಾಡುತ್ತೀಯೋ ಮಾಡು. ನಿನಗೆ ಏನು ಮಾಡಬೇಕು ಎಂಬುದು ನನಗೆ ಗೊತ್ತಿದೆ ಅಂತ ಬೆದರಿಕೆ ಹಾಕಿದ್ದಾರೆ ಎಂದು ಶಿವಮೂರ್ತಿ ಅವರು ಆರೋಪಿಸಿದ್ದಾರೆ.

    90 ಲಕ್ಷ ಚೆಕ್‌ ಬೌನ್ಸ್‌:
    ಟಿಕೆಟ್ ಸಿಗದಿದ್ದಾಗ ಹಣ ವಾಪಸ್ ಕೇಳಿದೆ. ಅದಕ್ಕೆ 90 ಲಕ್ಷ ರೂಪಾಯಿ ಚೆಕ್ ನೀಡಿದ್ದರು. ಅಕ್ಟೋಬರ್‌ 10ರ ದಿನಾಂಕವನ್ನು ಹಾಕಲಾಗಿತ್ತು. ಆದರೆ, ಚೆಕ್‌ ಬೌನ್ಸ್‌ ಆಗಿದೆ ಎಂದು ಸಹ ಶಿವಮೂರ್ತಿ ಆರೋಪ ಮಾಡಿದ್ದಾರೆ.

    BJP Congress crime Government Karnataka News Politics Trending Varthachakra ಚುನಾವಣೆ ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಮುಖ್ಯಮಂತ್ರಿ ಅಲ್ಲ, ನೀರೋ | Nero
    Next Article ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಹಿ ಸುದ್ದಿ ಕೊಟ್ಟ ಶಿವಕುಮಾರ್ | Congress
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • promokodriPl ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • evolution of nfl jerseys ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • promokodnoPl ರಲ್ಲಿ Alcoholಗೆ‌ Full‌ ಡಿಮಾಂಡ್
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe