Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ವಾಪಸ್ | DK Shivakumar
    ಸುದ್ದಿ

    ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ವಾಪಸ್ | DK Shivakumar

    vartha chakraBy vartha chakraನವೆಂಬರ್ 23, 2023339 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ ನಿರ್ಧಾರವನ್ನು ವಾಪಸ್ ಪಡೆದಿದೆ.
    ಸಂಪುಟ ಸಭೆಯಲ್ಲಿ ಈ ಕುರಿತು ಸುದೀರ್ಘ ಚರ್ಚೆ ನಡೆಯಿತು. ಅಡ್ವೋಕೇಟ್ ಜನರಲ್ ಅವರ ವರದಿಯನ್ನು ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಯಿತು ಎಂದು ಸಭೆಯ ನಂತರ ಕಾನೂನು ಸಚಿವ ಎಚ್.ಕೆ.ಪಾಟೀಲ್ ಸುದ್ದಿಗಾರರಿಗೆ ತಿಳಿಸಿದರು.
    ವಿಶೇಷವೆಂದರೆ ಪ್ರಕರಣದ ತನಿಖೆ ಈಗಾಗಲೇ ಶೇಕಡಾ 90 ರಷ್ಟು ಪೂರ್ಣಗೊಂಡಿದೆ ಎನ್ನುತ್ತವೆ ಸಿಬಿಐ ಮೂಲಗಳು.

    ಅಕ್ರಮ ಆಸ್ತಿ ಗಳಿಕೆ ಆರೋಪದ ಕುರಿತಂತೆ ಶಿವಕುಮಾರ್ (DK Shivakumar) ವಿರುದ್ದ ಸಿಬಿಐ ತನಿಖೆಗೆ ಆದೇಶಿಸಿದ ಈ ಹಿಂದಿನ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ಅವಧಿಯಲ್ಲಿ ಹಲವು ತಾಂತ್ರಿಕ ಅಂಶಗಳ ಕೊರತೆ ಇದೆ. ಅಂದಿನ ಸರ್ಕಾರದ ಅಡ್ವೋಕೇಟ್ ಜನರಲ್ ಈ ಪ್ರಕರಣ ಸಿಬಿಐ ತನಿಖೆ ವಹಿಸುವ ಅಗತ್ಯವಿಲ್ಲ.ಸ್ಥಳೀಯ ಪೊಲೀಸರೇ ಇದನ್ನು ತನಿಖೆ ನಡೆಸಬಹುದಾಗಿದೆ ಎಂದು ವರದಿ ನೀಡಿದ್ದರು. ಆದರೆ ಈ ವರದಿ ಪರಿಗಣಿಸದೆ ಪ್ರಕರಣ ಸಿಬಿಐ ತನಿಖೆಗೆ ವಹಿಸುವ ನಿರ್ಧಾರ ಕೈಗೊಳ್ಳಲಾಗಿದೆ.ಈ ಆದೇಶ ಹೊರಡಿಸುವ ಪ್ರಕ್ರಿಯೆಯಲ್ಲೂ ದೋಷವಿದೆ ಎಂದು ಗೃಹ ಇಲಾಖೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
    ಇದನ್ನು ‌ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಗೆ ಮಂಡಿಸಲಾಯಿತು. ಹಿತಾಸಕ್ತಿ ಸಂಘರ್ಷದ ಹಿನ್ನೆಲೆಯಲ್ಲಿ ಈ ಸಭೆಗೆ‌ ಉಪ ಮುಖ್ಯಮಂತ್ರಿ ಶಿವಕುಮಾರ್ ಗೈರು ಹಾಜರಾಗಿದ್ದರು.

    ಅವರ ಅನುಪಸ್ಥಿತಿಯಲ್ಲಿ ಸಭೆಗೆ ಹಾಜರಾದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ‌ಪ್ರಕರಣವನ್ನು ಸಿಬಿಐಗೆ ವಹಿಸುವಲ್ಲಿ ಹಿಂದಿನ ಸರ್ಕಾರ ಕೈಗೊಂಡ ತೀರ್ಮಾನದ ಲೋಹಗಳನ್ನು ಗಮನಕ್ಕೆ ತಂದರು. ಅಲ್ಲದೆ ಈ ಪ್ರಕರಣದಲ್ಲಿ ಶಿವಕುಮಾರ್ ಅವರನ್ನು ಬಂಧಿಸುವ ಮುನ್ನ ಸಭಾಧ್ಯಕ್ಷರ ಅನುಮತಿ ಪಡೆದಿಲ್ಲ ಎಂಬ ಮಾಹಿತಿಯನ್ನು ವಿವರಿಸಿದರು.
    ಅಂತಿಮವಾಗಿ ಪ್ರಕರಣ ವಾಪಸ್ ಪಡೆಯುವ ತೀರ್ಮಾನಕ್ಕೆ ಬರಲಾಯಿತು ಎಂದು ಸಚಿವ ಎಚ್.ಕೆ.ಪಾಟೀಲ್ ವಿವರಿಸಿದರು.

    ಹಿನ್ನೆಲೆ:
    2013ರಿಂದ 2018ರ ಅವಧಿಯಲ್ಲಿ ನಿಗದಿತ ಆದಾಯಕ್ಕಿಂತಲೂ ಅಧಿಕ ಆಸ್ತಿ ಗಳಿಸಿದ ಆರೋಪ ಡಿ.ಕೆ. ಶಿವಕುಮಾರ್‌ ಮೇಲೆ ಇತ್ತು. ಈ ಪ್ರಕರಣವನ್ನು ಆಗಿನ ಸರ್ಕಾರ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ 2019ರಲ್ಲಿ ಸಿಬಿಐಗೆ ನೀಡಿತ್ತು. ಸಿಬಿಐಗೆ ಪ್ರಕರಣವನ್ನು ವಹಿಸಿದ್ದನ್ನು ಪ್ರಶ್ನೆ ಮಾಡಿದ್ದ ಡಿ.ಕೆ. ಶಿವಕುಮಾರ್‌ ಕೋರ್ಟ್‌ ಮೊರೆ ಹೋಗಿದ್ದರು. ಎಫ್ಐಆರ್ ಹಾಕದೇ ಕೇಂದ್ರೀಯ ತನಿಖಾ ತಂಡಕ್ಕೆ ನೀಡಿದ್ದು ಸರಿಯಲ್ಲ ಎಂದು ಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು.

    ಅಲ್ಲದೆ ಈ ಪ್ರಕರಣದಲ್ಲಿ ಸುಮಾರು ಐದು ತಿಂಗಳುಗಳ ಕಾಲ ಡಿ.ಕೆ. ಶಿವಕುಮಾರ್‌ ಜೈಲು ಪಾಲಾಗಿದ್ದರು. ಬಳಿಕ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿತ್ತು. ಕೊನೆಗೆ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಪಡೆಯಲಾಗಿತ್ತು. ಈ ನಡುವೆ ಹೈಕೋರ್ಟ್‌ನಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಿ ಎಂದು ಸುಪ್ರೀಂ ಕೋರ್ಟ್ ಆದೇಶವನ್ನು ಹೊರಡಿಸಿತ್ತು. ಇಲ್ಲಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್‌ನ ಏಕ ಸದಸ್ಯ ಪೀಠ ಸಿಬಿಐ ವಿಚಾರಣೆಯನ್ನು ಎತ್ತಿ ಹಿಡಿದಿತ್ತು. ಹೀಗಾಗಿ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನೆ ಮಾಡಿದ ಡಿ.ಕೆ. ಶಿವಕುಮಾರ್ ದ್ವಿಸದಸ್ಯ ಪೀಠಕ್ಕೆ ಅಪೀಲು ಹೋಗಿದ್ದಾರೆ. ಈ ಅರ್ಜಿಯ ವಿಚಾರಣೆ ಇನ್ನೂ ನಡೆಯುತ್ತಿದೆ.

    Congress dk shivakumar ED Government Karnataka m News Politics shiva Trending ಕಾನೂನು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬರ ಪರಿಹಾರ ಅನುದಾನ ಶೀಘ್ರ ಬಿಡುಗಡೆಗೆ ಮನವಿ | Drought Relief
    Next Article ನವೆಂಬರ್ 27 ಮುಖ್ಯಮಂತ್ರಿ ಜನತಾ ದರ್ಶನ | Janata Darshan
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • promokodriPl ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • evolution of nfl jerseys ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • promokodnoPl ರಲ್ಲಿ Alcoholಗೆ‌ Full‌ ಡಿಮಾಂಡ್
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe