Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿಸಿಎಂ ಹುದ್ದೆ ಮತ್ತೆ ಮುನ್ನಲೆಗೆ | Deputy CM of Karnataka
    Viral

    ಡಿಸಿಎಂ ಹುದ್ದೆ ಮತ್ತೆ ಮುನ್ನಲೆಗೆ | Deputy CM of Karnataka

    vartha chakraBy vartha chakraಜನವರಿ 5, 2024Updated:ಜನವರಿ 5, 20246 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.ಜ,5: ರಾಜ್ಯದಲ್ಲಿ ಮತ್ತೊಮ್ಮೆ ಮೂವರು ಮುಖ್ಯಮಂತ್ರಿಗಳ ನೇಮಕ ವಿಚಾರ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದೆ.
    ಕೆಲ ದಿನಗಳ ಕಾಲ ಈ ಕುರಿತಾದ ಚಟುವಟಿಕೆಗಳಿಗೆ ವಿರಾಮ ನೀಡಿದ್ದ ನಾಯಕರು ಇದೀಗ ಮತ್ತೊಮ್ಮೆ ಅದಕ್ಕೆ ತೀವ್ರ ಸ್ವರೂಪ ನೀಡಲು ತೀರ್ಮಾನಿಸಿದ್ದಾರೆ.
    ಮೂವರು ಉಪಮುಖ್ಯಮಂತ್ರಿಗಳ ನೇಮಕಕ್ಕೆ ಪ್ರಬಲ ನಡೆಸುತ್ತಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಕಳೆದ ರಾತ್ರಿ ಮಹತ್ವದ ಸಭೆ ನಡೆದಿದೆ.

    ಸಭೆಯಲ್ಲಿ ಗೃಹ ಸಚಿವ ಪರಮೇಶ್ವರ್ ಸಮಾಜ ಕಲ್ಯಾಣ ಸಚಿವ ಮಹಾದೇವಪ್ಪ ಸಹಕಾರ ಸಚಿವ ರಾಜಣ್ಣ ಅವರು ಪಾಲ್ಗೊಂಡು ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ.
    ಉಪ ಮುಖ್ಯಮಂತ್ರಿ ಹುದ್ದೆಯಷ್ಟೇ ಅಲ್ಲದೇ ಸದ್ಯ ಉಪ ಮುಖ್ಯಮಂತ್ರಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕಾರ್ಯವೈಖರಿ ಕುರಿತು ಚರ್ಚೆ ನಡೆದಿದೆ.
    ಈ ಸಭೆಯಲ್ಲಿ ತಮ್ಮ ಬೇಡಿಕೆ ಈಡೇರಿಸುವಂತೆ ವರಿಷ್ಠರ ಮೇಲೆ ಒತ್ತಡ ಹೇರಲು ತೀರ್ಮಾನಿಸಿದ್ದಾರೆ ಲೋಕಸಭೆ ಚುನಾವಣೆಗೆ ಮುನ್ನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಲಿಂಗಾಯತ ಸಮುದಾಯಕ್ಕೆ ಸೇರಿದ ಹಿರಿಯ ನಾಯಕರನ್ನು ಉಪಮುಖ್ಯಮಂತ್ರಿಗಳನ್ನಾಗಿ ನೇಮಕ ಮಾಡಬೇಕು ಎಂದು ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಅವರಿಗೆ ಭೇಟಿ ಮನವಿ ಸಲ್ಲಿಸಲು ತೀರ್ಮಾನಿಸಿದ್ದಾರೆ.

    ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಸುರ್ಜೇವಾಲಾ ವಿದೇಶ ಪ್ರವಾಸಕ್ಕೆ ತೆರಳಿದ್ದು ಅವರು ಸ್ವದೇಶಕ್ಕೆ ಹಿಂತಿರುಗಿತ್ತಿದ್ದಂತೆ ಈ ಎಲ್ಲರೂ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ ಎಂದು ಗೊತ್ತಾಗಿದೆ.
    ಇದರೊಂದಿಗೆ ಶಿವಕುಮಾರ್ ಅನಗತ್ಯವಾಗಿ ಬೆಳಗಾವಿ ರಾಜಕಾರಣದಲ್ಲಿ ಅಸ್ತಕ್ಷೇಪ ಮಾಡುತ್ತಿದ್ದಾರೆ ಈ ಸಂಬಂಧ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳು ಸ್ಪಷ್ಟ ಸೂಚನೆ ನೀಡಿದ ನಂತರವೂ ಶಿವಕುಮಾರ್ ಅವರು ತಮ್ಮ ಚಟುವಟಿಕೆಗಳನ್ನು ನಿಲ್ಲಿಸಿಲ್ಲ ಎಂದು ಸಭೆಯಲ್ಲಿ ಬೇಸರ ವ್ಯಕ್ತಪಡಿಸಿರುವ ಸತೀಶ್ ಜಾರಕಿಹೊಳಿ ಅವರು ಈ ವಿಷಯವನ್ನು ಹೈಕಮಾಂಡ್ ಗಮನಕ್ಕೆ ತರಲು ತೀರ್ಮಾನಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ರಾಜಕೀಯ ಚರ್ಚೆ:
    ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್,ನಿನ್ನೆ ರಾತ್ರಿ ನಡೆದ ಭೋಜನಾ ಕೂಟ ಸಭೆಯಲ್ಲಿ ಭಾಗವಹಿಸಿ ಊಟ ಮಾಡಿ ಬಂದಿದ್ದೇನೆ. ರಾಜಕಾರಣಿಗಳು ಒಂದೆಡೆ ಸೇರಿದ ಮೇಲೆ ರಾಜಕೀಯವೇ ಚರ್ಚೆಯಾಗುತ್ತದೆ. ಅಲ್ಲಿ ಏನೆಲ್ಲಾ ಮಾತುಕತೆ ನಡೆದಿದೆ ಎಂಬುದನ್ನು ಬಹಿರಂಗಪಡಿಸಲಾಗುವುದಿಲ್ಲ. ಅದು ರಹಸ್ಯ ಸಭೆ ಎಂದ ಮೇಲೆ ಎಲ್ಲವನ್ನೂ ಬಹಿರಂಗವಾಗಿ ಹೇಳಲು ಹೇಗೆ ಸಾಧ್ಯ ಎಂದರು.

    ಡಿಸಿಎಂ ಹುದ್ದೆ ಬೇಕು:
    ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ ಲೋಕಸಭೆ ಚುನಾವಣೆಗೂ ಮೊದಲೇ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವುದು ಸೂಕ್ತ ಎಂದು ಹೇಳಿದರು.
    ಒಂದೇ ಪಕ್ಷದ ಸಚಿವರುಗಳು ಸಹಜವಾಗಿ ಭೋಜನ ಕೂಟಕ್ಕೆ ಸೇರಿದ್ದೇವೆ. ಅದರಲ್ಲಿ ವಿಶೇಷವೇನಿಲ್ಲ. ರಾಜಕಾರಣಿಗಳು ಸೇರಿದರೆ ರಾಜಕಾರಣ ಚರ್ಚೆಯಾಗಿಯೇ ಆಗುತ್ತದೆ ಎಂದರು.
    ನಮ್ಮ ಮುಂದೆ ಲೋಕಸಭೆ ಚುನಾವಣೆಯ ಸವಾಲಿದೆ. ಅದನ್ನು ನಿಭಾಯಿಸುವ ಬಗ್ಗೆ ಚರ್ಚೆ ನಡೆಸಿದ್ದೇವೆ. ಚುನಾವಣೆಗೂ ಮೊದಲೇ ಉಪಮುಖ್ಯಮಂತ್ರಿ ಹುದ್ದೆಯನ್ನು ಸೃಷ್ಟಿಸಿದರೆ ರಾಜಕೀಯವಾಗಿ ಪಕ್ಷಕ್ಕೆ ಲಾಭವಾಗುತ್ತದೆ ಎಂಬುದು ಎಲ್ಲರ ಅಭಿಪ್ರಾಯ. ಅದರ ಹೊರತಾಗಿ ದಲಿತ ಮುಖ್ಯಮಂತ್ರಿ ಕುರಿತು ಚರ್ಚೆಯಾಗಿಲ್ಲ ಎಂದು ಹೇಳಿದರು.
    ಇದೇ ಜನವರಿ 28 ರಂದು ಚಿತ್ರದುರ್ಗದಲ್ಲಿ ಶೋಷಿತರ ಸಮಾವೇಶ, ಫೆಬ್ರವರಿಯಲ್ಲಿ ಚಿತ್ರದುರ್ಗದಲ್ಲಿ ಎಸ್‍ಸಿ, ಎಸ್ಟಿ ಸಮಾವೇಶ ಆಯೋಜನೆ ಮಾಡುವ ಚರ್ಚೆಗಳಾಗಿವೆ ಎಂದು ತಿಳಿಸಿದರು.
    ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸಲಾಗಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವರದಿಯ ಬಗ್ಗೆ ಯಾವುದೇ ರೀತಿಯ ಚರ್ಚೆಗಳಾಗಿಲ್ಲ. ಅದು ಸರ್ಕಾರಕ್ಕೆ ಸಲ್ಲಿಕೆಯಾದ ಬಳಿಕವಷ್ಟೇ ಅದರ ಬಗ್ಗೆ ಮಾತನಾಡುತ್ತೇವೆ. ಸದ್ಯಕ್ಕೆ ಅದರ ಬಗ್ಗೆ ಒತ್ತಡ ಹೇರುವ ಸಂದರ್ಭವೂ ಇಲ್ಲ ಎಂದರು.

    Deputy CM of Karnataka Government Karnataka m News Politics ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜಭವನ ರಸ್ತೆಯ ಪ್ರತಿಷ್ಠಿತ ಹೋಟೆಲ್ ನಲ್ಲಿ ಜಿರಲೆ ಊಟ | Cockroach
    Next Article ಕೋವಿಡ್ ಟೆಸ್ಟ್ ಕಡ್ಡಾಯ | COVID Test
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    6 ಪ್ರತಿಕ್ರಿಯೆಗಳು

    1. np8v6 on ಜೂನ್ 4, 2025 6:35 ಅಪರಾಹ್ನ

      where buy cheap clomiphene without dr prescription what is clomiphene medication clomiphene prescription uk can i order cheap clomid online can i order clomiphene for sale order generic clomiphene online where can i get cheap clomid no prescription

      Reply
    2. buy cialis mastercard on ಜೂನ್ 8, 2025 10:32 ಅಪರಾಹ್ನ

      This is the stripe of glad I take advantage of reading.

      Reply
    3. oral flagyl on ಜೂನ್ 10, 2025 4:10 ಅಪರಾಹ್ನ

      More text pieces like this would create the интернет better.

      Reply
    4. 6d11v on ಜೂನ್ 12, 2025 5:09 ಅಪರಾಹ್ನ

      buy zithromax for sale – buy zithromax order generic flagyl

      Reply
    5. x9ijn on ಜೂನ್ 17, 2025 11:14 ಅಪರಾಹ್ನ

      order inderal 20mg generic – methotrexate 2.5mg oral buy methotrexate 10mg online cheap

      Reply
    6. 9drb9 on ಜೂನ್ 20, 2025 7:13 ಅಪರಾಹ್ನ

      buy amoxicillin cheap – valsartan 80mg pill combivent 100mcg cheap

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • r8n2c ರಲ್ಲಿ ರಾಹುಲ್ ಗಾಂಧಿ Disqualified
    • x236b ರಲ್ಲಿ ಜೀವನ ರಿಲೇ ಓಟದಂತೆ-ಸಹದ್ಯೋಗಿಗಳಿಗೆ‌ಪ್ರವೀಣ್ ಸೂದ್ ಪತ್ರ
    • StephenCarne ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe