Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಂದೆಯ ಬಳಿಗೆ ಮಗನನ್ನು ಬಿಡಲಿಚ್ಚಿಸದ ತಾಯಿ ಮಾಡಿದ್ದೇನು | Suchana Seth
    Trending

    ತಂದೆಯ ಬಳಿಗೆ ಮಗನನ್ನು ಬಿಡಲಿಚ್ಚಿಸದ ತಾಯಿ ಮಾಡಿದ್ದೇನು | Suchana Seth

    vartha chakraBy vartha chakraಜನವರಿ 9, 20244 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Suchana Seth
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.9: ವಯಕ್ತಿಕ ಪ್ರತಿಷ್ಠೆಗಾಗಿ ಪತಿ-ಪತ್ನಿಯರ ನಡುವೆ ನಡೆದ ಸಂಘರ್ಷದಲ್ಲಿ ಸಿಲುಕಿದ ನಾಲ್ಕು ವರ್ಷದ ಹಾಲುಗಲ್ಲದ ಹಸುಳೆಯೊಂದು ಬಲಿಯಾಗಿದೆ.ತನ್ನ ಗಂಡನ ಬಳಿ ಮಗು ಹೋಗಲು ಬಯಸದ ತಾಯಿ ತಾನು ಹೆತ್ತ ಮಗುವನ್ನೇ ಕೊಲೆ ಮಾಡಿ ಪೊಲೀಸರ ಅತಿಥಿಯಾಗಿದ್ದಾರೆ.
    ಬಂಧಿತ ಮಹಿಳೆಯನ್ನು ಬೆಂಗಳೂರಿನ ಪ್ರತಿಷ್ಠಿತ ಕೃತಕ ಬುದ್ಧಿಮತ್ತೆಯ ಸ್ಟಾರ್ಟ್ ಅಪ್ ಕಂಪನಿಯ ಸಿಇಒ ಸುಚನಾ ಸೇಠ್‌ ಎಂದು ಗುರುತಿಸಲಾಗಿದೆ.
    ಉತ್ತರ ಗೋವಾದ ಕಲ್ಲಂಗೂಟ್ ಠಾಣೆಯ ಪೊಲೀಸರ ನಿರ್ದೇಶನದ ಮೇರೆಗೆ ಚಿತ್ರದುರ್ಗದ ಪೊಲೀಸರು ಬಂಧಿಸಿದರು.
    ತನ್ನ ಮಗನೊಂದಿಗೆ ಪ್ರವಾಸಕ್ಕೆಂದುಗೋವಾಕ್ಕೆ ತೆರಳಿ ತನ್ನ ನಾಲ್ಕು ವರ್ಷದ ಮಗನನ್ನು ಕೊಂದು‌ ಆತನ ಶವವನ್ನು ಬ್ಯಾಗ್‌ನಲ್ಲಿ ತುಂಬಿ ಟ್ಯಾಕ್ಸಿಯಲ್ಲಿ ಕರ್ನಾಟಕಕ್ಕೆ ಪ್ರಯಾಣಿಸುತ್ತಿರುವಾಗ ಸಿಕ್ಕಿಬಿದ್ದಿದ್ದಾರೆ.

    ಗೋವಾ (Goa) ಪೊಲೀಸರ ಮಾಹಿತಿ ಮೇರೆಗೆ ಐಮಂಗಲ ಠಾಣೆಯ ಪೊಲೀಸರು ಸೋಮವಾರ ಸಂಜೆ ಕಾರೊಂದನ್ನು ತಪಾಸಣೆ ಮಾಡಿದ್ದರು. ಕಾರಿನ ಲಗೇಜ್ ಬ್ಯಾಗಿನಲ್ಲಿ ನಾಲ್ಕು ವರ್ಷದ ಬಾಲಕನ ಮೃತದೇಹ ಪತ್ತೆಯಾಯಿತು. ತಕ್ಷಣ ಮಹಿಳೆಯನ್ನು ವಶಕ್ಕೆ ಪಡೆಯಲಾಯಿತು’ ಎಂದು ಮಾಹಿತಿ ನೀಡಿದ್ದಾರೆ.
    ‘ಚಿತ್ರದುರ್ಗಕ್ಕೆ ಧಾವಿಸಿದ ಗೋವಾ ಪೊಲೀಸರು ಹೆಚ್ಚಿನ ತನಿಖೆಗೆ ಆಕೆಯನ್ನು ತಮ್ಮೊಂದಿಗೆ ಕರೆದೊಯ್ದಿದ್ದಾರೆ. ಬಾಲಕನ ಶವವನ್ನು ಹಿರಿಯೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ’
    ಕೋಲ್ಕತ್ತದ ಸುಚನಾ ಸೇಠ್ 2008ರಲ್ಲಿ ಬೆಂಗಳೂರಿಗೆ ಬಂದಿದ್ದಳು. ತಮಿಳುನಾಡಿನ ವೆಂಕಟರಮಣ ಪರಿಚಯವಾಗಿದ್ದು, 2010ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 2019ರಲ್ಲಿ ಮಗ ಚಿನ್ಮಯ್ ಜನಿಸಿದ ಬಳಿಕ ಸೇಠ್ ದಾಂಪತ್ಯದಲ್ಲಿ ಬಿರುಕು ಮೂಡಿತ್ತು. ದಂಪತಿಗಳಿಬ್ಬರು‌ ಪರಸ್ಪರ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು.
    ವಿಚ್ಚೇದನ ನೀಡಿದ ಕೋರ್ಟ್ ಪ್ರತಿ ಭಾನುವಾರ ಮಗುವನ್ನು ತನ್ನ ತಂದೆಯ ಬಳಿ ಬೀಡಲು ಆದೇಶಿಸಿತ್ತು.ಇದು ಸುಚನಾ ಅವರಿಗೆ ಇಷ್ಟವಿರಲಿಲ್ಲ.

    ಸುಚನಾ ಪತಿಯು ಮಗನನ್ನು ಭೇಟಿಯಾದರೆ, ಅವರು ಮಗುವನ್ನು ತಮ್ಮ ಬಳಿಯೇ ಇರಿಸಿಕೊಳ್ಳಬಹುದು ಎಂದು ಆತಂಕಗೊಂಡಿದ್ದರು ಎನ್ನಲಾಗಿದೆ.
    ಸುಚನಾ ಸೇಠ್ ಕಳೆದ ಜ.6ರಂದು ತನ್ನ ಮಗನೊಂದಿಗೆ ಉತ್ತರ ಗೋವಾದ ಕ್ಯಾಂಡೋಲಿಮ್‌ನಲ್ಲಿರುವ ಸೋಲ್ ಬನಿಯನ್ ಗ್ರಾಂಡೆಗೆ ಭೇಟಿ ನೀಡಿದ್ದು ನಿನ್ನೆ ಆಕೆ ಕೊಠಡಿಯಿಂದ ಒಬ್ಬಂಟಿಯಾಗಿ ಚೆಕ್‌ ಔಟ್‌ ಮಾಡಿದ್ದಳು. ಬೆಂಗಳೂರಿಗೆ ಟ್ಯಾಕ್ಸಿ ಕಾಯ್ದಿರಿಸುವಂತೆ ಹೋಟೆಲ್ ಸಿಬ್ಬಂದಿಗೆ ಕೇಳಿದ್ದಳು. ವಿಮಾನದಲ್ಲಿ ತೆರಳಲು ಸಿಬ್ಬಂದಿ ಸಲಹೆ ನೀಡಿದರೂ ಅದಕ್ಕೆ ಒಪ್ಪದೆ, ಟ್ಯಾಕ್ಸಿ ಬುಕ್‌ ಮಾಡುವಂತೆ ಒತ್ತಾಯಿಸಿದ್ದಳು.

    ಜೊತೆಗೆ ಬಂದ ಮಗು:
    ಜೊತೆಗೆ ಬಂದ ಮಗು ಚೆಕ್‌ ಔಟ್‌ ಮಾಡುವಾಗ ಇಲ್ಲದಿರುವುದನ್ನು ಗಮನಿಸಿದ ಸಿಬ್ಬಂದಿ, ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದರು. ಆಕೆ ಹೋದ ಬಳಿಕ ಕ್ಲೀನಿಂಗ್‌ ಸಿಬ್ಬಂದಿ ಆಕೆಯ ಅಪಾರ್ಟ್‌ಮೆಂಟ್ ನಲ್ಲಿ ರಕ್ತದ ಕಲೆಗಳನ್ನು ಗಮನಿಸಿದ್ದರು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಟ್ಯಾಕ್ಸಿ ಚಾಲಕನಿಗೆ ಕರೆ ಮಾಡಿ ಸುಚನಾ ಸೇಠ್ ಅವರೊಂದಿಗೆ ಮಾತನಾಡಿದ್ದರು. ಆಕೆಯ ಮಗನ ಬಗ್ಗೆ ಕೇಳಿದಾಗ, ಅವನು ಸ್ನೇಹಿತನೊಂದಿಗೆ ಇದ್ದಾನೆ ಎಂದು ಹೇಳಿ ಒಂದು ವಿಳಾಸ ನೀಡಿದ್ದಳು. ಅದು ನಕಲಿ ಎಂದು ತಿಳಿದುಬಂದಿತ್ತು.

    ಚಾಲಕನಿಗೆ ಕರೆ:
    ನಂತರ ಪೊಲೀಸರು ಮತ್ತೆ ಚಾಲಕನಿಗೆ ಕರೆ ಮಾಡಿದ್ದರು. ಸುಚನಾಗೆ ಅರ್ಥವಾಗದಂತೆ ಕೊಂಕಣಿ ಭಾಷೆಯಲ್ಲಿ ಆತನೊಂದಿಗೆ ಮಾತನಾಡಿ, ಕ್ಯಾಬ್ ಅನ್ನು ಚಿತ್ರದುರ್ಗದ ಪೊಲೀಸ್ ಠಾಣೆ ಕಡೆಗೆ ತಿರುಗಿಸಲು ಆದೇಶಿಸಿದ್ದರು. ಕಾರು ಅಲ್ಲಿಗೆ ಬಂದ ಬಳಿಕ ಸುಚನಾಳನ್ನು ಬಂಧಿಸಿದ್ದರು.

    crime News Politics Trending Varthachakra ಕಲೆ ಕಾರು ಕೊಲೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleDCM ರೇಸ್ ಗೆ ಮುನಿಯಪ್ಪ, ಶರಣ ಪ್ರಕಾಶ್ ಪಾಟೀಲ್ Entry | Muniappa
    Next Article ಮಂತ್ರಿಗಳು ಲೋಕಸಭಾ ಅಖಾಡಕ್ಕೆ ಧುಮುಕಲಿದ್ದಾರೆ | Lok Sabha Elections
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    4 ಪ್ರತಿಕ್ರಿಯೆಗಳು

    1. sdc93 on ಜೂನ್ 7, 2025 12:34 ಅಪರಾಹ್ನ

      how to buy clomid without dr prescription can i get generic clomiphene without insurance generic clomid walmart can i purchase generic clomiphene pills clomiphene tablets cost of generic clomiphene prices where can i buy cheap clomid no prescription

      Reply
    2. how to buy cialis online in australia on ಜೂನ್ 8, 2025 9:39 ಅಪರಾಹ್ನ

      More posts like this would prosper the blogosphere more useful.

      Reply
    3. o9a43 on ಜೂನ್ 12, 2025 4:22 ಅಪರಾಹ್ನ

      zithromax order – buy ciprofloxacin 500 mg buy metronidazole paypal

      Reply
    4. lhery on ಜೂನ್ 25, 2025 1:16 ಫೂರ್ವಾಹ್ನ

      buy clavulanate generic – https://atbioinfo.com/ acillin price

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Waltertig ರಲ್ಲಿ ಎಲ್ಲರೂ Save Nandini ಎನ್ನಿರಿ
    • vegue ರಲ್ಲಿ ಭಾರತದ ಬಂದರುಗಳಲ್ಲಿ ಪಾಕಿಸ್ತಾನದ ಹಡಗುಗಳಿಗೆ ನಿಷೇಧ
    • lhery ರಲ್ಲಿ ತಂದೆಯ ಬಳಿಗೆ ಮಗನನ್ನು ಬಿಡಲಿಚ್ಚಿಸದ ತಾಯಿ ಮಾಡಿದ್ದೇನು | Suchana Seth
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe