Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » OMR ತಿದ್ದಿದವ ಅರೆಸ್ಟ್
    ಸುದ್ದಿ

    OMR ತಿದ್ದಿದವ ಅರೆಸ್ಟ್

    vartha chakraBy vartha chakraಮೇ 12, 2022Updated:ಮೇ 12, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.12- ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ‌ ಅಧಿಕಾರಿಗಳು ಓಎಂಆರ್ ಪ್ರತಿ ತಿದ್ದುಪಡಿ ಮಾಡಿದ ನೇಮಕಾತಿ ವಿಭಾಗದಲ್ಲಿದ್ದ
    ಸಶಸ್ತ್ರ ಮೀಸಲು ಪಡೆಯ ಆರ್‌ಎಸ್‌ಐ ಲೋಕೇಶಪ್ಪರನ್ನು ಬಂಧಿಸಿದ್ದಾರೆ.
    ಸ್ಟ್ರಾಂಗ್ ಕೊಠಡಿಯಲ್ಲಿದ್ದ ಒಎಂಆರ್ ಪ್ರತಿ ತಿದ್ದುಪಡಿಗೆ ಆರ್‌ಎಸ್‌ಐ ಲೋಕೇಶಪ್ಪ ಕಾರಣ ಎನ್ನುವುದು ತನಿಖೆಯಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ಬಂಧಿಸಿರುವ ಅಧಿಕಾರಿಗಳು ವಿಚಾರಣೆ ಕೈಗೊಂಡಿದ್ದಾರೆ.
    ಮತ್ತೊಂದೆಡೆ, 2017ರಲ್ಲಿ ನಡೆದ ಆರ್​ಎಸ್‌ಐ ನೇಮಕಾತಿಯಲ್ಲೂ ಅಕ್ರಮ ನಡೆದಿರುವ ಬಗ್ಗೆ ಸಿಐಡಿ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
    ನೇಮಕಾತಿ ವಿಭಾಗದ ಸ್ಟ್ರಾಂಗ್ ಕೊಠಡಿಯ ಒಎಂಆರ್ ಪ್ರತಿ ತುಂಬಿದ್ದ ಬಾಕ್ಸ್​ಗಳ ಭದ್ರತೆಗೆ ಬಂಧಿತ ಸಶಸ್ತ್ರ ಮೀಸಲು ಪಡೆಯ ಆರ್‌ಎಸ್‌ಐ ಲೋಕೇಶಪ್ಪರನ್ನು ನಿಯೋಜಿಸಲಾಗಿತ್ತು.
    ಉತ್ತರ ಕರ್ನಾಟಕ ಮೂಲದ ಲೋಕೇಶಪ್ಪ ಹತ್ತು ವರ್ಷಗಳ ಕಾಲ ನಾಗರಿಕ ಪೊಲೀಸ್ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದರು. ಬಳಿಕ 2017-18ನೇ ಸಾಲಿನಲ್ಲಿ ಆರ್‌ಎಸ್‌ಐ ನೇಮಕಾತಿಯಲ್ಲಿ ಎರಡನೇ ರ‍್ಯಾಂಕ್ ಪಡೆದು ಆಯ್ಕೆಗೊಂಡಿದ್ದು, ಮಂಗಳೂರಿನಲ್ಲಿ ಪ್ರೊಬೇಷನರಿಯಾಗಿದ್ದರು. ಬಳಿಕ ನಗರದ ಸಿಎಆರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಂತರ ಡಿವೈಎಸ್​ಪಿ ಶಾಂತಕುಮಾರ್ ಸಲಹೆ ಮೇರೆಗೆ ನೇಮಕಾತಿ ವಿಭಾಗಕ್ಕೆ ಹೆಚ್ಚುವರಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
    ಲೋಕೇಶಪ್ಪನಿಗೆ ಸ್ಟ್ರಾಂಗ್ ಕೊಠಡಿಯ ನಿರ್ವಹಣೆ ಕೊಡಲಾಗಿತ್ತು. ಶಾಂತಕುಮಾರ್ ಕಡೆಯ ಅಭ್ಯರ್ಥಿಗಳ ಒಎಂಆರ್ ಪ್ರತಿಗಳು ಯಾವ ಬಾಕ್ಸ್​ನಲ್ಲಿ ಇಡಲಾಗಿದೆ, ಅವರ ರೋಲ್ ನಂಬರ್ ಏನು? ಎಂಬುದು ಲೋಕೇಶಪ್ಪನಿಗೆ ಚೆನ್ನಾಗಿ ಗೊತ್ತಿತ್ತು. ಹೀಗಾಗಿ, ಸ್ಟ್ರಾಂಗ್ ರೂಮ್‌ನಲ್ಲಿ ಕೆಲ ಅಭ್ಯರ್ಥಿಗಳು, ಕೋಚಿಂಗ್ ಸೆಂಟರ್‌ನ ಶಿಕ್ಷಕರು ಹಾಗೂ ಮಧ್ಯವರ್ತಿಗಳ ಮೂಲಕ ಒಎಂಆರ್ ಶೀಟ್‌ಗಳ ತಿದ್ದುಪಡಿ ಮಾಡಿಸುತ್ತಿದ್ದರು.
    ಶಾಂತಕುಮಾರ್ ಸೂಚನೆ ಮೇರೆಗೆ ಲೋಕೇಶಪ್ಪ ಈ ಅವ್ಯವಹಾರ ನಡೆಸುತ್ತಿದ್ದರು ಎಂಬುದು ಗೊತ್ತಾಗಿದೆ ಎಂದು ಮೂಲಗಳು ತಿಳಿಸಿವೆ.
    ಡಿವೈಎಸ್​ಪಿ ಶಾಂತಕುಮಾರ್ ಸಶಸ್ತ್ರ ಮೀಸಲು ಪಡೆಯಿಂದ ಬಂದಿದ್ದರಿಂದ ನೇಮಕಾತಿ ವಿಭಾಗದಲ್ಲಿ ತನ್ನ ಕೆಳಗಿರುವ ಅಧಿಕಾರಿ-ಸಿಬ್ಬಂದಿಯನ್ನು ಅದೇ ವಿಭಾಗದಿಂದ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಅದೇ ರೀತಿ ಆರ್‌ಎಸ್‌ಐ ಲೋಕೇಶಪ್ಪ, ಶ್ರೀನಿವಾಸ್ ಹಾಗೂ ಮುಖ್ಯ ಪೇದೆ ಲೋಕೇಶ್ ಅವರನ್ನು ನೇಮಿಸಿಕೊಂಡಿದ್ದಾರೆ. ಅದರಲ್ಲೂ, ಲೋಕೇಶಪ್ಪನ ಮೇಲೆ ಶಾಂತಕುಮಾರ್‌ಗೆ ಅಪಾರ ನಂಬಿಕೆ. ಹೀಗಾಗಿ ಸ್ಟ್ರಾಂಗ್ ಕೊಠಡಿಯ ಭದ್ರತೆ, ನಿರ್ವಹಣೆಗೆ ಲೋಕೇಶಪ್ಪನಿಗೆ ನೀಡಲಾಗಿತ್ತು ಎಂದು ಮೂಲಗಳಿಂದು ತಿಳಿದುಬಂದಿದೆ.
    ಎರಡು ದಿನಗಳ ಹಿಂದೆ ಬಂಧನಕ್ಕೊಳಗಾದ ಎಫ್‌ಡಿಎ ಹರ್ಷ, ಆರ್‌ಎಸ್‌ಐ ಶ್ರೀನಿವಾಸ್, ಹೆಡ್‌ ಕಾನ್ಸ್​ಟೇಬಲ್ ಲೋಕೇಶ್ ಮತ್ತು ಶ್ರೀಧರ್ ಜೊತೆಗೆ ಲೋಕೇಶಪ್ಪನ ಬಂಧನಕ್ಕೆ ಖೆಡ್ಡಾ ತೋಡಲಾಗಿತ್ತು. ಆದರೆ, ಶ್ರೀನಿವಾಸ್ ಬಂಧನದ ವಿಚಾರ ತಿಳಿಯುತ್ತಿದ್ದಂತೆ ಲೋಕೇಶಪ್ಪ ಪರಾರಿಯಾಗಲು ಯತ್ನಿಸಿದ್ದ. ಆದರೂ ಸಿಐಡಿ ಪೊಲೀಸರು ತಡರಾತ್ರಿವರೆಗೂ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

    omr sheet valuator arrest
    Share. Facebook Twitter Pinterest LinkedIn Tumblr Email WhatsApp
    Previous Articleಉಡದ ಮಾಂಸ ಬೇಕಾ…!!
    Next Article ಆತ್ಮನಿರ್ಭರ – ಕರ್ನಾಟಕಕ್ಕೆ 2 ನೇ ಸ್ಥಾನ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • cx4hy ರಲ್ಲಿ
    • klining_SPb_zyst ರಲ್ಲಿ ಬೆಂಗಳೂರಿನ ಈ‌ ರಸ್ತೆಗಳಲ್ಲಿ ಸುರಂಗ ಮಾರ್ಗ ನಿರ್ಮಾಣ | Tunnel Roads
    • 7ixg3 ರಲ್ಲಿ ತನಿಖಾಧಿಕಾರಿಯೇ‌ ಸಸ್ಪೆಂಡ್.
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe