Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅರಣ್ಯಾಧಿಕಾರಿಗಳಿಗೆ ಸಚಿವ ಖಂಡ್ರೆ ಕೊಟ್ಟ ಸೂಚನೆ | Eshwar Khandre
    Viral

    ಅರಣ್ಯಾಧಿಕಾರಿಗಳಿಗೆ ಸಚಿವ ಖಂಡ್ರೆ ಕೊಟ್ಟ ಸೂಚನೆ | Eshwar Khandre

    vartha chakraBy vartha chakraಜನವರಿ 24, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಾಮರಾಜನಗರ, ಜ.24: ರಕ್ಷಿತಾರಣ್ಯ ಸೇರಿದಂತೆ ಕಾಡು ಪ್ರಾಣಿಗಳು ಹೆಚ್ಚಾಗಿ ಸಂಚರಿಸುವ ಅರಣ್ಯ ಪ್ರದೇಶಗಳಲ್ಲಿನ ಪ್ರಮುಖ ನೀರುಗುಂಡಿ (ವಾಟರ್ ಹೋಲ್)ಗಳಿಗೆ ‌ನೀರು ಹಾಯಿಸುವ ಮೂಲಕ ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ (Eshwar Khandre) ಸೂಚಿಸಿದ್ದಾರೆ.
    ಅರಣ್ಯ ಪ್ರದೇಶ ಹಾಗೂ ಅದಕ್ಕೆ ಹೊಂದಿಕೊಂಡ ಪ್ರದೇಶಗಳಲ್ಲಿನ ಕೊಳವೆ ಬಾವಿಗೆ ಅಳವಡಿಸಿದ ಸೌರ ಪಂಪ್ ಸೆಟ್ ಗಳ ಮೂಲಕ ನೀರು ಹಾಯಿಸಿ, ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲು ಸಲಹೆ ಮಾಡಿದ್ದಾರೆ.

    ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಫಾರಿ ವಾಹನದಲ್ಲಿ ಅರಣ್ಯ ಪ್ರದೇಶ ವೀಕ್ಷಿಸಿದ ಸಚಿವರು, ಈ ಬಾರಿ ಮಳೆಯ ಕೊರತೆಯಿಂದಾಗಿ ಕಾಡಿನಲ್ಲಿರುವ ನೀರುಗುಂಡಿಗಳಲ್ಲಿ ಜಲ ಸಂಗ್ರಹ ಕಡಿಮೆಯಾಗಿದ್ದು, ಅಗತ್ಯ ಇರುವ ಕಡೆ ಕೊಳವೆ ಬಾವಿ ಕೊರೆಸಿ, ಸೌರ ಪಂಪ್ ಸೆಟ್ ಮೂಲಕ ನೀರು ಹರಿಸಲು ತುರ್ತು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
    ಸೌರ ಫಲಕಗಳ ಸುತ್ತ ಆನೆಗಳು ದಾಳಿ ಮಾಡದ ರೀತಿಯಲ್ಲಿ ರೈಲ್ವೆ ಬ್ಯಾರಿಕೇಡ್ ಹಾಕುವಂತೆ ಸೂಚಿಸಿದ ಸಚಿವರು, ನಿಯಮಿತವಾಗಿ ಜಲಗುಂಡಿಗಳಲ್ಲಿನ ಜಲ ಸಂಗ್ರಹದ ಸ್ಥಿತಿಯ ಬಗ್ಗೆ ನಿಗಾ ಇಡಲು ತಿಳಿಸಿದರು.

    ಕಾಳ್ಗಿಚ್ಚು ನಿಗ್ರಹಕ್ಕೆ ಸೂಚನೆ:
    ಸಾಮಾನ್ಯವಾಗಿ ಜನವರಿ ಅಂತ್ಯದಿಂದ ಏಪ್ರಿಲ್ ಮಧ್ಯಭಾಗದವರೆಗೆ ಕಾಡ್ಗಿಚ್ಚಿನ ಭೀತಿ ಇರುತ್ತದೆ, ಈ ಹಿನ್ನೆಲೆಯಲ್ಲಿ ಕಾಡಿನಲ್ಲಿ ಕಟ್ಟೆಚ್ಚರ ವಹಿಸುವಂತೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾಡ್ಗಿಚ್ಚು ವೀಕ್ಷಕರನ್ನು ನಿಯೋಜಿಸುವಂತೆ ಸೂಚಿಸಿದ ಈಶ್ವರ ಖಂಡ್ರೆ, ಕಾಡಿನಲ್ಲಿ ಸಣ್ಣ ಕಿಡಿ ಕಾಣಿಸಿಕೊಂಡರೂ ತಕ್ಷಣವೇ ಅದನ್ನು ನಂದಿಸಲು ಕ್ರಮ ವಹಿಸಲು ತಿಳಿಸಿದರು.
    ಆದಿವಾಸಿಗಳು ಸಾಂಪ್ರದಾಯಿಕವಾಗಿ ಕಾಡ್ಗಿಚ್ಚು ನಿಯಂತ್ರಿಸುವಲ್ಲಿ ಪರಿಣಿತರಾಗಿದ್ದು, ಅವರ ಸೇವೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಹಾಗೂ ಯಾರೇ ಉದ್ದೇಶಪೂರ್ವಕವಾಗಿ ಕಾಡಿನಲ್ಲಿ ಬೆಂಕಿ ಹಚ್ಚುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆಯೂ ಸೂಚಿಸಿದರು.

    ಫೈರ್ ಲೈನ್ ವೀಕ್ಷಣೆ: ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ಅರಣ್ಯದೊಳಗೆ ಇರುವ ರಾಜ್ಯ ಹೆದ್ದಾರಿಗಳಲ್ಲಿ ಸಾಗುವರಿಂದ ಅಕಸ್ಮಾತ್ ಬೆಂಕಿ ದುರಂತ ಸಂಭವಿದರೂ ಅದು ಕಾಡಿಗೆ ವ್ಯಾಪಿಸದಂತೆ ಇಲಾಖೆ ಮಾಡುತ್ತಿರುವ ಅಗ್ನಿ ನಿಯಂತ್ರಣ ರೇಖೆ (ಫೈರ್ ಲೈನ್)ಯನ್ನು ವೀಕ್ಷಿಸಿದರು.
    ಕಳ್ಳಬೇಟೆ ತಡೆ ಶಿಬಿರಕ್ಕೆ ಭೇಟಿ: ಅರಣ್ಯದಲ್ಲಿನ ಬೆಲೆ ಬಾಳುವ ಮರಗಳ ಕಳವು ತಡೆಯಲು ಮತ್ತು ವನ್ಯಜೀವಿಗಳ ಕಳ್ಳಬೇಟೆ ತಡೆಯಲು ಅರಣ್ಯದೊಳಗೆ ನಿರ್ಮಿಸಲಾಗಿರುವ ಕಳ್ಳಬೇಟೆ ತಡೆ ಶಿಬಿರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವರು, ಅಲ್ಲಿ ದಿನವಿಡೀ ಅರಣ್ಯ ಕಾವಲು ಕಾಯುವ ಸಿಬ್ಬಂದಿಯ ಕಷ್ಟಸುಖ ವಿಚಾರಿಸಿದರು. ಅವರ ಅಡುಗೆ ಕೋಣೆಗೂ ಭೇಟಿ ನೀಡಿ ಪರಿಶೀಲಿಸಿ, ಸಿಬ್ಬಂದಿ ಮಾಡಿಕೊಟ್ಟ ನಿಂಬೆಹುಲ್ಲಿನ ಚಹಾ ಸವಿದರು.

    ಲಾಂಟನಾ ಸಮಸ್ಯೆಗೆ ಹೆಚ್ಚಿನ ಹಣ: ಕಾಡಿನಲ್ಲಿ ಹುಲ್ಲೂ ಬೆಳೆಯದಂತೆ ವ್ಯಾಪಿಸುತ್ತಿರುವ ಲಾಂಟನಾ ಕಳೆಯ ಸಮಸ್ಯೆಯನ್ನು ನಿವಾರಿಸಿ ಅರಣ್ಯ ಉಳಿಸಲು ಆದಿವಾಸಿ ಸಮುದಾಯದ ಸ್ಥಳೀಯರ ನೆರವು ಪಡೆದು, ಮಹಾತ್ಮಾಗಾಂಧೀ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ನೆರವು ಪಡೆದು ಸಮಸ್ಯೆಗೆ ಪರಿಹಾರ ಒದಗಿಸಲು ಸೂಚಿಸಿದರು. ಬಂಡಿಪುರ, ಕಬಿನಿ ಮತ್ತು ಬಿಆರ್.ಟಿ.ಯಲ್ಲಿ ಲಾಂಟನಾ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಹಣವನ್ನು ಹುಲಿ ಸಂರಕ್ಷಣಾ ಪ್ರತಿಷ್ಠಾನದ ಕ್ರಿಯಾ ಯೋಜನೆಯಲ್ಲಿ ಹೆಚ್ಚಿನ ಹಣ ಒದಗಿಸುವಂತೆಯೂ ಸೂಚಿಸಿದರು.

    Verbattle
    Verbattle
    Verbattle
    Eshwar Khandre Karnataka News Politics Trending war
    Share. Facebook Twitter Pinterest LinkedIn Tumblr Email WhatsApp
    Previous Articleಮಾಸಾಂತ್ಯಕ್ಕೆ ಸಲ್ಲಿಕೆಯಾಗಲಿದೆ ಜಾತಿಗಣತಿ ವರದಿ | Caste Census
    Next Article ನಿವೃತ್ತ ನೌಕರರಿಗೆ ಸಿಕ್ಕ ಸಿಹಿ ಸುದ್ದಿ ಗೊತ್ತಾ | Karnataka
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಸಫಾರಿಗೆ ಹಸಿರು ನಿಶಾನೆ. ಆದರೆ, ಈ ಷರತ್ತು ಪಾಲಿಸಲೇಬೇಕು

    ಫೆಬ್ರವರಿ 21, 2026

    ಬೆಂಗಳೂರು ಕೆರೆಗಳಲ್ಲಿ ಬೋಟಿಂಗ್

    ಫೆಬ್ರವರಿ 20, 2026

    2 ಪ್ರತಿಕ್ರಿಯೆಗಳು

    1. Tkeeyg on ಫೆಬ್ರವರಿ 11, 2026 3:47 ಅಪರಾಹ್ನ

      betmgm first bet promo betmgm Alaska mgm sportsbook

      Reply
    2. Vpghmy on ಫೆಬ್ರವರಿ 19, 2026 5:42 ಫೂರ್ವಾಹ್ನ

      Experience the fusion of tradition and innovation in gaming. In crown coins login, blockchain tech secures your funds. Innovate your way to wealth!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Njdtyv ರಲ್ಲಿ ಬದಲಾದ ದೇಶಪಾಂಡೆ.
    • Sytlpv ರಲ್ಲಿ ಜಿಗಣಿಯಲ್ಲಿ ಸಿಕ್ಕಿ ಬಿದ್ದ ಪಾಕ್ ಪ್ರಜೆ.
    • Sytlpv ರಲ್ಲಿ ಜಿಗಣಿಯಲ್ಲಿ ಸಿಕ್ಕಿ ಬಿದ್ದ ಪಾಕ್ ಪ್ರಜೆ.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.