ಬೆಂಗಳೂರು- ರಾಜ್ಯದ ಅತ್ಯಂತ ಪ್ರತಿಷ್ಠಿತ ಹೃದ್ರೋಗ ಆಸ್ಪತ್ರೆ ಜಯದೇವ ಆಸ್ಪತ್ರೆಗೆ ಪೂರ್ಣಾವಧಿ ನಿರ್ದೇಶಕರ ನೇಮಕ ಮಾಡಲು ರಾಜ್ಯ ಸರ್ಕಾರ ಕಸರತ್ತು ನಡೆಸಿದೆ.
ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿದ್ದ ಡಾ.ಸಿ.ಎನ್. ಮಂಜುನಾಥ್ ಅವರು ನಿವೃತ್ತಿಯಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ನೂತನ ನಿರ್ದೇಶಕರ ನೇಮಕಕ್ಕೆ ಸರ್ಕಾರ ಪ್ರಕ್ರಿಯೆ ಆರಂಭಿಸಿತ್ತು.
ಇದಕ್ಕಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಸುಮಾರು 18 ಮಂದಿ ಅರ್ಹರು ಅರ್ಜಿ ಸಲ್ಲಿಸಿದ್ದರು. ಈ ಕುರಿತಂತೆ ಮುಖ್ಯಮಂತ್ರಿ ನೇತೃತ್ವದ ಉನ್ನತ ಸಮಿತಿ ಸಭೆ ಸೇರಿ ಪರಿಶೀಲನೆ ನಡೆಸಿತಾದರೂ ಒಮ್ಮತದ ತೀರ್ಮಾನ ಕೈಗೊಳ್ಳಲು ಸಾಧ್ಯವಾಗಲಿಲ್ಲ.
ಈ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ಡಾ. ಕೆಎಸ್ ರವೀಂದ್ರನಾಥ್ ಅವರನ್ನು ಪ್ರಭಾರ ನಿರ್ದೇಶಕರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಡಾ.ರವೀಂದ್ರನಾಥ್ ಅವರು ಜಯದೇವ ಆಸ್ಪತ್ರೆಯಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ರವೀಂದ್ರನಾಥ್ ಅವರು ಈ ಹಿಂದೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ.


2 ಪ್ರತಿಕ್ರಿಯೆಗಳು
Le vincite più grandi ti aspettano su Betano. Iscriviti https://betanogame.org/it/ e rivendica il 100% fino a €500 più 150 giri gratis. Goditi prelievi velocissimi e la migliore esperienza live casino online. Betano – la tua nuova destinazione preferita per ricompense epiche.
No Mostbet o bГґnus Г© insano: 144% + 220 free spins na hora do cadastro – https://mostbetpt.pro/ , No Mostbet a sorte encontra quem sabe aproveitar as melhores condiГ§Гµes .