ಬೆಂಗಳೂರು – ರಾಜ್ಯದ ಬರ ಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ಆರ್ಥಿಕ ನೆರವು ಬಿಡುಗಡೆ ಮಾಡುವ ವಿಷಯದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಡಾಫೆಯ ಉತ್ತರ ನೀಡಿದ್ದಾರೆ. ಇವರು ರಾಜ್ಯದಿಂದ ಆಯ್ಕೆಯಾಗಿದ್ದವರು ಎಂದು ಹೇಳುವುದು ದುರಂತವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ವಿಷಾದಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಟೀಕಿಸುವ ಮೂಲಕ ನಾಲ್ಕೂವರೆ ಕೋಟಿ ಫಲಾನುಭವಿಗಳಿಗೆ ಅಪಮಾನ ಮಾಡುತ್ತಿದ್ದಾರೆಂದು ಕಿಡಿಕಾರಿದರು.
ಶಕ್ತಿ ಯೋಜನೆ ಸೇರಿದಂತೆ ರಾಜ್ಯದ ಗ್ಯಾರಂಟಿ ಯೋಜನೆಗಳು ಕೋಟ್ಯಂತರ ಕುಟುಂಬಗಳಿಗೆ ಆಸರೆಯಾಗಿದೆ ಇಂತಹ ಯೋಜನೆಗಳನ್ನು ಟೀಕಿಸುವ ಮೂಲಕ ಬಿಜೆಪಿ ನಾಯಕರು ತಾವು ಯಾರ ಪರ ಇದ್ದೇವೆ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಟೀಕಿಸಿದರು.
ಕೇಂದ್ರ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಯಾವುದೂ ಇಲ್ಲ. ಅನುದಾನ ನೀಡುವಂತೆ ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಮುಖ್ಯಮಂತ್ರಿಯಾದಿಯಾಗಿ ಸಂಪುಟದ ಎಲ್ಲಾ ಸಚಿವರು, ಪ್ರಧಾನಿಯವರಿಗೆ ಹಾಗೂ ಕೇಂದ್ರ ಹಣಕಾಸು ಸಚಿವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ ನಮ್ಮ ಪಾಲು ನಮಗೆ ಸಿಗುತ್ತಿಲ್ಲ ಎಂದು ಆರೋಪಿಸಿದರು.
ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಪರಿಹಾರ ಕೋರಿ ಪ್ರಸ್ತಾವನೆ ಸಲ್ಲಿಸಿದ್ದೇವೆ. ಆದರೂ ಕೇಂದ್ರ ಸರ್ಕಾರ ಒಂದು ರೂಪಾಯಿ ಅನುದಾನ ಬಿಡುಗಡೆ ಮಾಡಿಲ್ಲ. ರಾಜ್ಯದಿಂದ ಆಯ್ಕೆಯಾದ 25 ಬಿಜೆಪಿ ಸಂಸದರು ಇದರ ವಿರುದ್ಧ ಧ್ವನಿ ಎತ್ತಿಲ್ಲ. ಅವರಿಗೆ ಅಕಾರ ಬೇಕು. ಕೇಂದ್ರದ ಬಿಜೆಪಿ ನಾಯಕರನ್ನು ಮೆಚ್ಚಿಸುವುದಷ್ಟೇ ಉದ್ದೇಶವಾಗಿದೆ. ರಾಜ್ಯದ ಜನರ ಹಿತರಕ್ಷಣೆ ಲೆಕ್ಕಕ್ಕಿಲ್ಲ ಎಂದು ದೂರಿದರು.
5 ಪ್ರತಿಕ್ರಿಯೆಗಳು
Релокация в Испанию Релокация в Испанию .
гадание на индийских картах онлайн бесплатно indiyskiy-pasyans-online.ru .
купить электрокарниз купить электрокарниз .
принудительный вывод из запоя ростов http://www.vyvod-iz-zapoya-rostov11.ru .
нарколог вывод из запоя vyvod-iz-zapoya-v-sankt-peterburge.ru .