Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಸಭೆ – ಕುಮಾರಸ್ವಾಮಿ ಲೆಕ್ಕಾಚಾರ ಏನು ಗೊತ್ತಾ | Rajya Sabha
    Viral

    ರಾಜ್ಯಸಭೆ – ಕುಮಾರಸ್ವಾಮಿ ಲೆಕ್ಕಾಚಾರ ಏನು ಗೊತ್ತಾ | Rajya Sabha

    vartha chakraBy vartha chakraಫೆಬ್ರವರಿ 15, 2024Updated:ಫೆಬ್ರವರಿ 15, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.15: ಅಚ್ಚರಿಯ ಹಾಗೂ ಕ್ಷೀಪ್ರ ರಾಜಕೀಯ ಬೆಳವಣಿಗೆ ಒಂದರಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ನ ಭಿನ್ನಮತದ ಲಾಭ ಪಡೆಯುವ ಲೆಕ್ಕಾಚಾರದೊಂದಿಗೆ ರಾಜ್ಯಸಭೆ (Rajya Sabha) ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಈ ಮೂಲಕ ಚುನಾವಣೆಯ ಅಖಾಡಕ್ಕೆ ಭರ್ಜರಿ ರಂಗು ಬಂದಿದೆ.
    ಫೆಬ್ರವರಿ 27ರಂದು ನಡೆಯುತ್ತಿರುವ ರಾಜ್ಯಸಭೆಯ ನಾಲ್ಕು ಸ್ಥಾನಗಳ ಚುನಾವಣೆಗೆ ಬಿಜೆಪಿ ನಾರಾಯಣ ಸಾ ಬಾಂಡಗೆ ಅವರನ್ನು ಕಣಕ್ಕಿಳಿಸಿದೆ. ಪಕ್ಷದ ಪ್ರಮುಖರೊಂದಿಗೆ ತೆರಳಿ ಅವರು ನಾಮಪತ್ರ ಸಲ್ಲಿಸಿದರು.

    ಇದಾದ ಕೆಲವೇ ಕ್ಷಣಗಳಲ್ಲಿ ಜೆಡಿಎಸ್ ಹಿರಿಯ ನಾಯಕ ಕುಪೇಂದ್ರ ರೆಡ್ಡಿ ಅವರೊಂದಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿ ನಾಯಕರೊಂದಿಗೆ ತೆರಳಿ ಕುಪೇಂದ್ರ ರೆಡ್ಡಿ ಅವರ ನಾಮಪತ್ರ ಸಲ್ಲಿಸಿದರು.
    ವಿಧಾನಸಭೆಯಲ್ಲಿ ಹೊಂದಿರುವ ಸಂಖ್ಯಾಬಲದ ಆಧಾರದಲ್ಲಿ ಕಾಂಗ್ರೆಸ್ ಮೂರು ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ಸಾಧ್ಯತೆಯಿದೆ. ಇದಕ್ಕಾಗಿ ಪಕ್ಷದ ಹಿರಿಯ ನಾಯಕ ಅಜಯ್ ಮಾಕೇನ್ ಅವರನ್ನು ಕಣಕ್ಕಿಳಿಸಿದೆ. ಸದ್ಯ ರಾಜ್ಯಸಭೆ ಸದಸ್ಯತ್ವ ದಿಂದ ನಿವೃತ್ತರಾಗುತ್ತಿರುವ ಜಿ.ಸಿ ಚಂದ್ರಶೇಖರ್ ಮತ್ತು ನಾಸಿರ್ ಹುಸೇನ್ ಅವರಿಗೆ ಮರು ಆಯ್ಕೆಯಾಗಲು ಅವಕಾಶ ನೀಡಿದೆ.
    ರಾಜ್ಯಸಭೆಯ ಸದಸ್ಯರಾಗಲು ಪ್ರತಿಯೊಬ್ಬ ಅಭ್ಯರ್ಥಿಗೆ 46 ಶಾಸಕರ ಮತಗಳ ಅಗತ್ಯವಿದೆ ಹೀಗಾಗಿ ಕಾಂಗ್ರೆಸ್ ಮೂರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ. ಬಿಜೆಪಿ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಂಡ ನಂತರ ಹೆಚ್ಚುವರಿ ಮತಗಳು ಉಳಿಯಲಿವೆ.
    ವಿಧಾನಸಭೆಯಲ್ಲಿ ಜೆಡಿಎಸ್ ಹೊಂದಿರುವ ಸಂಖ್ಯಾಬಲದಲ್ಲಿ ಯಾರನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಿಲ್ಲ ಹೀಗಾಗಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಎಂದು ಹೇಳಲಾಗಿತ್ತು ಆದರೆ ದಿಡೀರ್ ನಿಲುವು ಬದಲಾಯಿಸಿದ ಜೆಡಿಎಸ್ ನಾಯಕತ್ವ ಇದೀಗ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿದೆ.
    ಅನುದಾನ ಹಂಚಿಕೆ ಸೇರಿದಂತೆ ಹಲವಾರು ಕಾರಣಗಳಿಂದ ಕಾಂಗ್ರೆಸ್ ಒಡೆದ ಮರೆಯಾಗಿದೆ ಹಲವು ಶಾಸಕರು ನಾಯಕತ್ವದ ವಿರುದ್ಧ ತಿರುಗಿ ಬಿದ್ದರೆ ಇಂತಹ ಬಂಡಾಯದ ಲಾಭವನ್ನು ತಾವು ಪಡೆಯಬಹುದು ಹೀಗಾಗಿ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಜೆಡಿಎಸ್ ತನ್ನ ಎಲ್ಲ ಮತಗಳನ್ನು ವರ್ಗಾಯಿಸಲಿದೆ ಎಂದು ಕುಮಾರಸ್ವಾಮಿ ಬಿಜೆಪಿ ನಾಯಕರಿಗೆ ತಿಳಿಸಿದ್ದರು.

    ಕುಮಾರಸ್ವಾಮಿ ನೀಡಿದ ಆಹ್ವಾನದ ಕುರಿತಂತೆ ಬಿಜೆಪಿ ಚಿಂತಕರ ಚಾವಡಿ ಹಲವು ಸುತ್ತಿನ ಮಾತುಕತೆ ನಡೆಸಿ ಯಾವುದೇ ಕಾರಣಕ್ಕೂ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಬಾರದು ಎಂಬ ನಿಲುವಿಗೆ ಬಂದಿತು ಒಂದು ವೇಳೆ ಜೆಡಿಎಸ್ ಆಡಳಿತ ಪಕ್ಷ ಕಾಂಗ್ರೆಸ್ಸಿನಲ್ಲಿರುವ ಒಡಕಿನ ಲಾಭ ಲಾಭ ಪಡೆಯುವುದಾದರೆ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿ ಬಿಜೆಪಿಯ ಹೆಚ್ಚುವರಿ ಮತಗಳನ್ನು ಅವರಿಗೆ ವರ್ಗಾಯಿಸಬಹುದು ಎಂಬ ನಿರ್ಧಾರ ಕೈಗೊಂಡು ಕುಮಾರಸ್ವಾಮಿ ಅವರಿಗೆ ಮಾಹಿತಿ ರವಾನಿಸಲಾಯಿತು.
    ಬಿಜೆಪಿಯಿಂದ ಹೆಚ್ಚುವರಿ ಮತಗಳು ದೊರಕಲಿವೆ ಎಂಬ ಕಾತರಿ ಸಿಗುತ್ತಿದ್ದಂತೆ ರಂಗ ಪ್ರವೇಶಿಸಿದ ಕುಮಾರಸ್ವಾಮಿ. ಇದೀಗ ಕಾಂಗ್ರೆಸ್ಸಿನಲ್ಲಿರುವ ಒಡಕಿನ ಲಾಭ ಪಡೆಯುವ ಲೆಕ್ಕಾಚಾರದೊಂದಿಗೆ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿದ್ದಾರೆ.
    ಪಕ್ಷೇತರ ಶಾಸಕರಾದ ಜನಾರ್ದನ ರೆಡ್ಡಿ ಜೆಡಿಎಸ್ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ ಹಾಕುವ ಭರವಸೆ ನೀಡಿದ್ದಾರೆ ಇದರೊಂದಿಗೆ ಗೌರಿಬಿದನೂರು ಕ್ಷೇತ್ರದ ಪಕ್ಷೇತರ ಶಾಸಕ ಪುಟ್ಟಸ್ವಾಮಿ ಗೌಡ ಅವರ ಮತವನ್ನು ಜೆಡಿಎಸ್ ನಂಬಿಕೊಂಡಿದೆ ಇದನ್ನು ಹೊರತುಪಡಿಸಿ ಬೇಕಿರುವ ಇತರೆ ಮೂರು ಮತಗಳ ಕೊರತೆ ನೀಗಿಸಿಕೊಳ್ಳಲು ಕಾಂಗ್ರೆಸ್ಸಿನಲ್ಲಿರುವ ಭಿನ್ನಮತದ ಲಾಭ ಪಡೆಯಲು ಲೆಕ್ಕಾಚಾರ ಹಾಕಲಾಗಿದೆ ಆಕಾಡ ಕುತೂಹಲ ಮೂಡಿಸಿದೆ.

    BJP Congress Government Karnataka News Politics ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Article50 ರೂಪಾಯಿಗೆ Murder
    Next Article ತೆರಿಗೆ ಹೊರೆ ಇಲ್ಲದ ಬಜೆಟ್ ಗೆ ಸಿದ್ದರಾಮಯ್ಯ ಸಿದ್ದತೆ | Siddaramaiah
    vartha chakra
    • Website

    Related Posts

    ಲಂಚ ಪಡೆಯುವಾಗ ಸಿಕ್ಕಿ ಬಿದ್ದರು

    ಮೇ 6, 2025

    ಸುಹಾಸ್ ಶೆಟ್ಟಿ ಹತ್ಯೆಗೆ ಪೊಲೀಸ್ ನಂಟಿದೆಯಾ.?

    ಮೇ 6, 2025

    ಪೊಲೀಸರು ಸಸ್ಪೆಂಡ್.

    ಮೇ 2, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Floydfox ರಲ್ಲಿ ಹಾಲು ಮಾರಾಟ ದರ ಹೆಚ್ಚಳ ಮಾಡಿದ KMF.
    • Floydfox ರಲ್ಲಿ ಹೊಸ ವರ್ಷವನ್ನು ಹೀಗೆ ಆಚರಿಸಬೇಕು.
    • Floydfox ರಲ್ಲಿ ಬಂಧನ ಭೀತಿಯಲ್ಲಿ ರಾಮ್ ಗೋಪಾಲ್ ವರ್ಮ.
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Pakistan How ಈಸ್ ದ ಜೋಶ್ ! #india #pakistan #facts #war #warzone #news #modi #soldier #worldnews
    Subscribe