Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ Expert
    ಸುದ್ದಿ

    BJP ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ Expert

    vartha chakraBy vartha chakraಫೆಬ್ರವರಿ 20, 2024Updated:ಫೆಬ್ರವರಿ 20, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ಫೆ 20: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ನೀಡಿದರು.
    ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದರು.
    ಸರ್ಕಾರದ ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ ಹಾಗೂ ಜನಪರ ಯೋಜನೆಗಳಿಗೆ ರಾಜ್ಯಪಾಲರು ಕನ್ನಡಿ ಹಿಡಿದಿದ್ದಾರೆ. ಆದರೆ ಪ್ರತಿ ಪಕ್ಷ ನಾಯಕರಾದ ಆರ್.ಅಶೋಕ್ ಅವರು ರಾಜ್ಯಪಾಲರು ಮಾತಾಡಿದ್ದನ್ನು ಬಿಟ್ಟು ಅವರು ಮಾತಾಡದ್ದನ್ನೆಲ್ಲಾ ಪ್ರಸ್ತಾಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸುಳ್ಳು ಸುಳ್ಳೇ ಆರೋಪ ಮಾಡಿದ್ದಾರೆ.

    ನಾವು ಅಧಿಕಾರಕ್ಕೆ ಬಂದ 9 ತಿಂಗಳಲ್ಲಿ ರಾಜ್ಯಕ್ಕೆ 77 ಸಾವಿರ ಕೋಟಿ ಬಂಡವಾಳ ಹರಿದು ಬಂದಿದೆ. ಬಂಡವಾಳ ಹೂಡಿಕೆಗೂ , ಕಾನೂನು ಸುವ್ಯವಸ್ಥೆಗೂ ನೇರಾ ನೇರ ಸಂಬಂಧ ಇರುತ್ತದೆ. ಸರ್ಕಾರದ ಕಡಿಮೆ ಅವಧಿಯಲ್ಲೇ ಇಷ್ಟೊಂದು ಪ್ರಮಾಣದ ಹೂಡಿಕೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ವಿವರಿಸಿದರು.
    ಉಳಿದಂತೆ ಆರ್.ಅಶೋಕ್ ಅವರ ಆರೋಪ ಮತ್ತು ಸುಳ್ಳುಗಳಿಗೆ ಗೃಹ ಸಚಿವ ಪರಮೇಶ್ವರ್ ಅವರು ಈಗಾಗಲೇ ಸ್ಪಷ್ಟ ಉತ್ತರ ನೀಡಿದ್ದಾರೆ. ಉಳಿದದ್ದಕ್ಕೂ ಉತ್ತರ ನೀಡುತ್ತಾರೆ ಎಂದರು.
    ಬಿಜೆಪಿ ಎಂದರೆ ಸುಳ್ಳು. ಸುಳ್ಳಿನ ಉತ್ಪಾದನೆಯಲ್ಲಿ ಬಿಜೆಪಿ ನಿಸ್ಸೀಮರು. ಅಭಿವೃದ್ಧಿ ಮರೆತು ಸುಳ್ಳುಗಳ ಆಸರೆ ಹೋಗಿದ್ದ ಬಿಜೆಪಿಯನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ. ಇದು ರಾಜ್ಯದ ಜನತೆ ಕೊಟ್ಟಿರುವ ಸರ್ಟಿಫಿಕೇಟ್ ಎಂದರು.
    BJP ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ: ಹಿಂಬಾಗಿಲಲ್ಲಿ ಬಂದಿದ್ದಾರೆ ಅಷ್ಟೆ. ಬಿಜೆಪಿಯಿಂದ ಯಡಿಯೂರಪ್ಪ, ಬೊಮ್ಮಾಯಿ, ಶೆಟ್ಟರ್, ಸದಾನಂದ ಗೌಡ ಮುಖ್ಯಮಂತ್ರಿ ಆದರು. ಇವರ್ಯಾರೂ ಸ್ಪಷ್ಟ ಬಹುಮತ ಪಡೆದು ಮುಖ್ಯಮಂತ್ರಿ ಆದವರಲ್ಲ. ಆಪರೇಷನ್ ಕಮಲ ಮತ್ತು ಹಿಂಬಾಗಿಲ ಮೂಲಕ ಆಮಿಷವೊಡ್ಡಿ ನಮ್ಮ ಶಾಸಕರನ್ನು ಸೆಳೆದು ಅಧಿಕಾರಕ್ಕೇರಿದರು ಎಂದು ಟೀಕಿಸಿ, ಇವತ್ತಿನವರೆಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರ ನಡೆಸಿದ ಉದಾಹರಣೆ ಇದೆಯೇ , ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.

    ನಾವು 2013 ರಲ್ಲಿ 2023 ರಲ್ಲಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದ್ದೇವೆ. ಜನ ನಮ್ಮನ್ನು ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದಾಗಲೂ ತಲೆಬಾಗಿ ಜನರ ತೀರ್ಮಾನವನ್ನು ಒಪ್ಪಿಕೊಂಡು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ. ನಾವು ಸುಳ್ಳುಗಳ ಆಸರೆಗೆ ಹೋಗಲಿಲ್ಲ ಎಂದರು.
    ರಾಜ್ಯಪಾಲರ ಭಾಷಣ ಮತ್ತು ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಕೂಲ ಕುರಿತಂತೆ ರಾಜ್ಯ ಮಟ್ಟದ ಕನ್ನಡ ಮತ್ತು ಇಂಗ್ಲಿಷ್ ಪತ್ರಿಕೆಗಳು ಹಾಗೂ ಇತರೆ ಮಾಧ್ಯಮಗಳು ಶ್ಲಾಘಿಸಿ ಬರೆದಿರುವುದನ್ನು ಮತ್ತು ಮೆಚ್ಚುಗೆ ಸೂಚಿಸಿರುವುದನ್ನು ಪ್ರಸ್ತಾಪಿಸಿದರು. ಬಳಿಕ ವಿರೋಧ ಪಕ್ಷಗಳು ನಾಡಿನ ಪತ್ರಿಕೆಗಳ ಅಭಿಪ್ರಾಯ ಮತ್ತು ವಿಶ್ಲೇಷಣೆಗಳನ್ನಾದರೂ ಓದುವುದನ್ನು ರೂಢಿಸಿಕೊಳ್ಳಬೇಕು, ಏನನ್ನೂ ತಿಳಿದುಕೊಳ್ಳದೆ ಸುಳ್ಳುಗಳನ್ನು ಹೇಳಬಾರದು ಎಂದರು.

    Verbattle
    Verbattle
    Verbattle
    BJP Congress Government Karnataka News ಕಾಂಗ್ರೆಸ್ ಕಾನೂನು ಬೊಮ್ಮಾಯಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕೇರಳದಲ್ಲಿ ಮೃತರಾದವರ ಕುಟುಂಬಕ್ಕೆ ಕರ್ನಾಟಕ ಪರಿಹಾರ | Kerala
    Next Article ಕೊಡವರು ನಿರಾಳ-ವನ್ಯಜೀವಿ ಕಾಯಿದೆಗೆ ಹೈಕೋರ್ಟ್ ತಡೆ | Karnataka High Court
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • StellaHewly ರಲ್ಲಿ ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್
    • Glennhof ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.