Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಪಾಲರಿಗೆ ಸಿಎಂ ಬಹುಪರಾಕ್ | Karnataka Governor
    ರಾಜಕೀಯ

    ರಾಜ್ಯಪಾಲರಿಗೆ ಸಿಎಂ ಬಹುಪರಾಕ್ | Karnataka Governor

    vartha chakraBy vartha chakraಫೆಬ್ರವರಿ 20, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.20- ಬಿಜೆಪಿಯೇತರ ಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ (Karnataka Governor) ನಡುವಿನ ಸಂಘರ್ಷ ದೇಶಾದ್ಯಂತ ಸುದ್ದಿ ಮಾಡಿದೆ. ಆದರೆ ಕರ್ನಾಟಕದಲ್ಲಿ ಇದಕ್ಕೆ ವಿಭಿನ್ನ.ಇಲ್ಲಿನ
    ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರದ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರವನ್ನು ಟೀಕಿಸುವುದರಲ್ಲೂ ಹಿಂದೆ ಮುಂದೆ ನೋಡುವುದಿಲ್ಲ.ಇದಕ್ಕಾಗಿ ರಾಜ್ಯಪಾಲರನ್ನು ಅಭಿನಂದಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಕರಾರು ಮಾಡುವುದಿಲ್ಲ.

    ವಿಧಾನಮಂಡಲದ ಜಂಟಿ‌ ಅಧಿವೇಶನ ಉದ್ದೇಶಿಸಿ. ರಾಜ್ಯಪಾಲರು ಮಾಡಿದ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರನ್ನು ಹಾಡಿ ಹೊಗಳಿದರು.
    ಕೇರಳ ಮತ್ತು ತಮಿಳುನಾಡಿನಲ್ಲಿ ಅಲ್ಲಿನ ರಾಜ್ಯಪಾಲರು ಸರ್ಕಾರದ ಭಾಷಣವನ್ನು ಓದದೇ ತಮ್ಮದೇ ಅಭಿಪ್ರಾಯವನ್ನು ಮಂಡಿಸಿದ್ದಾರೆ ಅಥವಾ ಭಾಷಣ ಮಾಡದೇ ಹೊರನಡೆದಿದ್ದಾರೆ. ಆದರೆ ನಮ್ಮ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಆ ರೀತಿ ಮಾಡಿಲ್ಲ. ಸರ್ಕಾರದ ನಿಲುವು, ನೀತಿ, ಮುನ್ನೋಟ ಕಾರ್ಯಕ್ರಮವನ್ನು ಸ್ಪಷ್ಟವಾಗಿ ಸದನದ ಮುಂದಿಟ್ಟಿದ್ದಾರೆ ಎಂದು ಹೇಳಿ ಪ್ರಶಂಸಿದರು.
    ವಿಧಾನಮಂಡಲದ ಜಂಟಿ‌ ಅಧಿವೇಶನದಲ್ಲಿ ಸರ್ಕಾರದ ಭಾಷಣ ಓದುವ ಮೂಲಕ ರಾಜ್ಯಪಾಲರು ತಮ್ಮ ಸ್ಥಾನದ ಗೌರವವನ್ನು ಉಳಿಸಿಕೊಂಡಿರುವುದಲ್ಲದೆ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದರು
    ತಮ್ಮ ಸರ್ಕಾರ ಆಡಳಿತಕ್ಕೆ ಬಂದು ಇಂದಿಗೆ 9 ತಿಂಗಳಾಗಿವೆ. ರಾಜ್ಯಪಾಲರು ಸರ್ಕಾರದ ನಿಲುವು, ಮುನ್ನೋಟ, ನೀತಿಯನ್ನು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿಸಿದರು.

    ಕೇಂದ್ರದ ವಿರುದ್ಧ ಕಿಡಿ:
    ರಾಜ್ಯದಲ್ಲಿ ಬರಪರಿಸ್ಥಿತಿ ಇದೆ. ಪರಿಹಾರ ನೀಡಿ ಎಂದು ನಾನು ಖುದ್ದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್‍ಷಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ರಾಜ್ಯಸರ್ಕಾರದಿಂದ 17 ಬಾರಿ ಪತ್ರ ಬರೆದಿದ್ದೇವೆ. ಒಂದು ಬಾರಿ ಮಾತ್ರ ಅಮಿತ್ ಷಾ ನಿಮ್ಮ ಪತ್ರ ತಲುಪಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಉಳಿದ 16 ಪತ್ರಗಳನ್ನು ಕಡೆಗಣಿಸಿದ್ದಾರೆ. ಇದನ್ನು ಒಕ್ಕೂಟ ವ್ಯವಸ್ಥೆ ಎಂದು ಕರೆಯಬೇಕೆ ಎಂದು ಪ್ರಶ್ನಿಸಿದರು.
    ಸಚಿವರು ಐದು ಬಾರಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಉದ್ಯೋಗ ಖಾತ್ರಿ ಯೋಜನೆಯಡಿ ಮಾನವ ದಿನಗಳ ಪ್ರಮಾಣವನ್ನು 100 ರಿಂದ 150 ಕ್ಕೆ ಹೆಚ್ಚಿಸುವಂತೆ ಮನವಿ ಕೊಟ್ಟಿದ್ದಾರೆ. ಕಂದಾಯ ಸಚಿವರೂ ಹಲವು ಬಾರಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ. ಆದರೆ ಯಾವುದಕ್ಕೂ ಕೇಂದ್ರ ಸ್ಪಂದಿಸಿಲ್ಲ ಎಂದು ದೂರಿದರು.

    ಮೊದಲ ಬಾರಿಗೆ 2023 ರ ಅಕ್ಟೋಬರ್ 20 ರಂದು ಬರ ನಿರ್ವಹಣೆಗೆ ನೆರವು ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಾಲ್ಕು ತಿಂಗಳು ಕಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಬಳಿಕ ನವೆಂಬರ್ 16 ರಂದು ಎರಡನೇ ಬಾರಿ ಪ್ರಸ್ತಾವನೆ ಸಲ್ಲಿಸಿದ್ದೇವೆ. ಈಗಲೂ ಕೇಂದ್ರದಿಂದ ಉತ್ತರ ಇಲ್ಲ. ಈ ಅನ್ಯಾಯವನ್ನು ಬಿಜೆಪಿಯವರಂತೂ ಕೇಳುತ್ತಿಲ್ಲ. ನಾವೂ ಕೇಳಬಾರದೆ ಎಂದು ಪ್ರಶ್ನಿಸಿದರು. ಜೆಡಿಎಸ್‍ನ ಎಚ್.ಡಿ.ಕುಮಾರಸ್ವಾಮಿಯವರು ಕೇಂದ್ರ ಸರ್ಕಾರದಿಂದ ಸಂಘರ್ಷ ಮಾಡಿಕೊಳ್ಳಬಾರದು ಎಂದು ಹೇಳಿದ್ದಾರೆ. ಇಡೀ ಸದನ ಒಟ್ಟಾಗಿ ನ್ಯಾಯ ಕೇಳಬೇಕಿದೆ. ನಾವು ಯಾರ ಜೊತೆಯೂ ಸಂಘರ್ಷ ಮಾಡುತ್ತಿಲ್ಲ. ನಮಗೆ ದೊರೆಯಬೇಕಾದ ಪಾಲಿನ ಬಗ್ಗೆ ಮಾತನಾಡುತ್ತಿದ್ದೇವೆ ಎಂದು ತಿರುಗೇಟು ನೀಡಿದರು.
    ಕೇಂದ್ರದಿಂದಾಗುತ್ತಿರುವ ಆರ್ಥಿಕ ತಾರತಮ್ಯದ ವಿರುದ್ಧ ಧ್ವನಿ ಎತ್ತದೇ ಇರುವುದು ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಮಾಡಿದ ಅನ್ಯಾಯ ಎಂದು ಹೇಳಿದರು.

    Verbattle
    Verbattle
    Verbattle
    Governor Karnataka ನರೇಂದ್ರ ಮೋದಿ ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕುಖ್ಯಾತ ರೌಡಿ ನಸ್ರು ಅರೆಸ್ಟ್ | Rowdy Sheeter
    Next Article ಪಕ್ಷೇತರರ ಶಾಸಕರಿಗೆ ಬೆದರಿಕೆ ಹಾಕಿದರಾ…? | BJP
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    1 ಟಿಪ್ಪಣಿ

    1. Skgkyr on ಫೆಬ್ರವರಿ 13, 2026 4:37 ಫೂರ್ವಾಹ್ನ

      betmgm UT betmgm-play online mgm casino

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lozcry ರಲ್ಲಿ ಧಾರ್ಮಿಕ ಸಂಸ್ಥೆಯ ಆಡಳಿತ ಮಂಡಳಿಯಾದ ಕೇಂದ್ರ ಸರ್ಕಾರ | HC Mahadevappa
    • Ramiroacity ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah ರಲ್ಲಿ ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.