Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಗೆ ಕೈ ಕೊಡಲು ಸಜ್ಜಾದ ಜೆಡಿಎಸ್ ನಾಯಕರು | BJP-JDS
    ಪ್ರಚಲಿತ

    ಬಿಜೆಪಿಗೆ ಕೈ ಕೊಡಲು ಸಜ್ಜಾದ ಜೆಡಿಎಸ್ ನಾಯಕರು | BJP-JDS

    vartha chakraBy vartha chakraಏಪ್ರಿಲ್ 9, 20244 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.9: ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ ಬಿಜೆಪಿಗೆ ತಿರುಗೇಟು ನೀಡುವ ಮೂಲಕ ಸೋಲಿನ ಮುಯ್ಯಿ ತೀರಿಸಿಕೊಳ್ಳಲು ಕಾಂಗ್ರೆಸ್ ಕಾರ್ಯತಂತ್ರ ರೂಪಿಸುತ್ತದೆ.
    ಕಲಬುರ್ಗಿ ಕ್ಷೇತ್ರದಲ್ಲಿ ಈ ಬಾರಿ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಕಣಕ್ಕಿಳಿದಿದ್ದಾರೆ ಅವರನ್ನು ಶತಾಯಗತಾಯ ಗೆಲ್ಲಿಸುವ ಮೂಲಕ ಸಂದೇಶ ರವಾನಿಸಬೇಕು ಎಂದು ಟೊಂಕ ಕಟ್ಟಿ ನಿಂತಿರುವ ಖರ್ಗೆ ಅವರ ಪುತ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.

    ತಮ್ಮ ತಂದೆ ಅವರನ್ನು ಸೋಲಿಸಿ, ಮುಖಭಂಗ ಅನುಭವಿಸುವಂತೆ ಮಾಡಿದ ಸಂಸದ ಉಮೇಶ್ ಜಾದವ್ ಅವರನ್ನು ಸೋಲಿಸಬೇಕು ಎಂದು ಪಣತೊಟ್ಟವರಂತೆ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಪ್ರಭಾವಿ ನಾಯಕರ ಮನೆಗಳಿಗೆ ಎಡತಾಕುತ್ತಿದ್ದಾರೆ.
    ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜಾತ್ಯಾತೀತ ಜನತಾದಳ ಸಾಕಷ್ಟು ಪ್ರಭಾವ ಹೊಂದಿದೆ. ಈ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ನಂತರ ಅನೇಕ ನಾಯಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಗುರುಮಠಕಲ್ ಶಾಸಕ ಶರಣ ಗೌಡ ಕುಂದಕೂರ ಅವರು ಈ ಮೈತ್ರಿ ವಿರುದ್ಧ ಬಹಿರಂಗವಾಗಿಯೇ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಜೆಡಿಎಸ್ ಬಿಜೆಪಿ ಮೈತ್ರಿಗೆ ತಮ್ಮ ಸಹಮತವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಇದರ ಲಾಭ ಪಡೆಯಲು ಮುಂದಾಗಿರುವ ಪ್ರಿಯಾಂಕ್ ಖರ್ಗೆ ಜಿಲ್ಲೆಯ ಎಲ್ಲಾ ಪ್ರಭಾವಿ ಜೆಡಿಎಸ್ ನಾಯಕರನ್ನು ಸಂಪರ್ಕಿಸಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕೆಲಸ ಮಾಡುವಂತೆ ಮನವಿ ಮಾಡಿದ್ದಾರೆ.
    ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಕೆಲವು ಜೆಡಿಎಸ್ ನಾಯಕರನ್ನು ಸಂಪರ್ಕಿಸಿ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಕೆಲಸ ಮಾಡುವಂತೆ ಮನವಿ ಮಾಡಿದ್ದು ಜಿಲ್ಲೆಯ ರಾಜಕಾರಣದ ಚಿತ್ರಣದಲ್ಲಿ ಸಾಕಷ್ಟು ಬದಲಾವಣೆ ಉಂಟುಮಾಡುವ ಸಾಧ್ಯತೆಗಳು ಗೋಚರಿಸಿವೆ.
    ಕಾಂಗ್ರೆಸ್ ನಾಯಕರು ಮನವಿ ಮಾಡಿರುವ ಬೆನ್ನಲ್ಲೇ, ಶಾಸಕ ಶರಣಗೌಡ ಕುಂದಕೂರ ಅವರು ಜಿಲ್ಲೆಯ ಜೆಡಿಎಸ್ ನಾಯಕರ ಸಭೆ ನಡೆಸಿದರು ಈ ಸಭೆಯಲ್ಲಿ ಜೇವರ್ಗಿ ಮಾಜಿ ಶಾಸಕ ದೊಡ್ಡಪ್ಪಗೌಡ ನರಬೋಳ, ಸೇಡಂ ಜೆಡಿಎಸ್ ಪರಾಜಿತ ಅಭ್ಯರ್ಥಿ ಬಾಲರಾಜ್ ಗುತ್ತೇದಾರ್, ಅಫಜಲಪುರ ಪರಾಜಿತ ಅಭ್ಯರ್ಥಿ ಶಿವಕುಮಾರ್ ನಾಟೀಕಾರ್, ಕಲಬುರಗಿ ದಕ್ಷಿಣ ಪರಾಜಿತ ಅಭ್ಯರ್ಥಿ ಕೃಷ್ಣಾರೆಡ್ಡಿ ಭಾಗಿಯಾಗಿದ್ದರು.

    ಈ ನಾಯಕರು ಬಿಜೆಪಿ ಸಂಸದ ಉಮೇಶ್ ಜಾದವ್ ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರ ಕಾರ್ಯವ್ಯಕರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದ ಪ್ರಚಾರ ಸಭೆಗಳು ಸೇರಿದಂತೆ ಯಾವುದೇ ಸಭೆಗಳಿಗೆ ತಮ್ಮನ್ನು ಆಹ್ವಾನಿಸುತ್ತಿಲ್ಲ ಬಿಜೆಪಿ ಹಿರಿಯ ನಾಯಕರು ಬಂದರು ಕೂಡ ನಮ್ಮ ಬಗ್ಗೆ ವಿಚಾರಿಸುತ್ತಿಲ್ಲ. ಇಂತಹ ಅಪಮಾನ ಸಹಿಸಿಕೊಂಡು ತಾವು ಹೇಗೆ ಬಿಜೆಪಿ ಪರ ಕೆಲಸ ಮಾಡಬೇಕು ಎಂದು ಪ್ರಶ್ನಿಸಿದರು ಎನ್ನಲಾಗಿದೆ.
    ಮತ್ತೊಂದೆಡೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮನ್ನು ಸಂಪರ್ಕಿಸಿ ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡುವಂತೆ ಮನವಿ ಮಾಡಿದ್ದಾರೆ ಹೀಗಾಗಿ ನಾವುಗಳು ಕಾಂಗ್ರೆಸ್ ಅಭ್ಯರ್ಥಿಗಳ ಪರ ಕೆಲಸ ಮಾಡುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದು ಇದು ಬಿಜೆಪಿಗೆ ದೊಡ್ಡ ಹಿನ್ನಡೆ ಉಂಟು ಮಾಡುವ ಸಾಧ್ಯತೆ ಇದೆ.

    BJP BJP-JDS JDS ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಗೆಲುವಿಗೆ ಕೈಯಲ್ಲಿ ಕರ್ಪೂರದಾರತಿ | Hassan
    Next Article ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    vartha chakra
    • Website

    Related Posts

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. ym079 on ಜೂನ್ 6, 2025 10:51 ಅಪರಾಹ್ನ

      where can i buy clomiphene without prescription can you get cheap clomid without insurance can you buy clomid prices cost cheap clomiphene prices can i purchase generic clomid prices clomiphene bula profissional order generic clomid online

      Reply
    2. Michaelgax on ಜೂನ್ 20, 2025 1:41 ಅಪರಾಹ್ನ

      ¡Hola, seguidores de victorias !
      Casinos online extranjeros con bonos sin depГіsito – https://casinoextranjero.es/# mejores casinos online extranjeros
      ¡Que vivas instantes únicos !

      Reply
    3. x3txr on ಜೂನ್ 21, 2025 4:28 ಫೂರ್ವಾಹ್ನ

      amoxil online order – buy generic combivent where to buy combivent without a prescription

      Reply
    4. acjba on ಜೂನ್ 23, 2025 7:48 ಫೂರ್ವಾಹ್ನ

      azithromycin 500mg canada – how to buy tindamax bystolic 5mg us

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_dekl ರಲ್ಲಿ Crypto ವಂಚಕ Arrest.
    • Bobbyglupe ರಲ್ಲಿ ಎಚ್ಚರಿಕೆ ನಡೆ ಇಡುತ್ತಿರುವ ರಾಜ್ಯಪಾಲರು.
    • KennethSOYNC ರಲ್ಲಿ ಪೊಲೀಸರಿಗೆ ಮಾನವ ಹಕ್ಕು ಆಯೋಗದ ಶಾಕ್ | Human Rights
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe