Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿರಾತಕನಿಗೆ ನರಳುವ ಶಿಕ್ಷೆ
    ಸುದ್ದಿ

    ಕಿರಾತಕನಿಗೆ ನರಳುವ ಶಿಕ್ಷೆ

    vartha chakraBy vartha chakraಮೇ 14, 2022Updated:ಮೇ 14, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.14- ಅವನು ಅರೆಸ್ಟ್ ಆಗಿದ್ದಾನಲ್ವಾ! ಅವನಿಗೆ ನನ್ನ ಕಣ್ಣ ಮುಂದೆಯೇ ಶಿಕ್ಷೆ ಕೊಡಬೇಕು ಎಂದು ಆಸಿಡ್ ದಾಳಿಗೊಳಗಾಗಿ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಕನವರಿಸಿದ್ದಾಳೆ.
    ನಾನು ನೋವಿನಲ್ಲಿ ನರಳುವಂತೆ ಅವನು ನರಳಬೇಕು ಎಂದು ಆಸಿಡ್ ದಾಳಿಕೋರನ ವಿರುದ್ಧ ಯುವತಿ ಆಕ್ರೋಶ ಭರಿತ ಮಾತುಗಳನ್ನಾಡಿದ್ದಾಳೆ. ನಾಗೇಶ್ ನನ್ನು ಬಂಧಿಸಲಾಗಿದೆ ಎಂದು ತಿಳಿಸಿದಾಗ ನೋವಿನಲ್ಲೂ ಕಿರಾತಕನಿಗೆ ಶಿಕ್ಷೆ ಆಗಬೇಕು ಎಂದು ಯುವತಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ ಎಂದು ಕುಟುಂಬದವರು ತಿಳಿಸಿದ್ದಾರೆ.
    ಇನ್ನೂ ದಾಳಿಕೋರ ನಾಗೇಶ್ ಗೆ ಚಿತ್ರಹಿಂಸೆಯಾಗುವ ಶಿಕ್ಷೆ ಆಗಬೇಕು ಎಂದು ಸಂತ್ರಸ್ತ ಯುವತಿಯ ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಕೃತ್ಯ ನಡೆಸಿ16 ದಿನಗಳ ಬಳಿಕ ನಾಗೇಶ್ ಪೊಲೀಸರಿಗೆ ಸಿಕ್ಕಿಬಿದ್ದಿರುವುದಕ್ಕೆ ಪ್ರತಿಕ್ರಿಯಿಸಿರುವ ಕುಟುಂಬಸ್ಥರು ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದರು.
    ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗಳ ಸ್ಥಿತಿ ಕಂಡು ಕಣ್ಣೀರಲ್ಲಿ ಕೈತೊಳೆಯುತ್ತಿರುವ ಯುವತಿಯ ಕುಟುಂಬಸ್ಥರು ಆ್ಯಸಿಡ್ ನಾಗೇಶನಿಗೆ ತಕ್ಕ ಶಿಕ್ಷೆ ಆಗಬೇಕು. ‘ಅವನು ಒಂದೇ ಸಲ ಅಲ್ಲ, ನರಳಿ ನರಳಿ ಸಾಕಬೇಕು. ಅಂತಹ ಶಿಕ್ಷೆ ಕೊಡಿ’ ಎಂದು ಆಗ್ರಹಿಸಿದ್ದಾರೆ. ಯುವತಿಯ ದೊಡ್ಡಮ್ಮ ಮಾತಾಡಿ, ‘ಚಾಮುಂಡಿ ಮಹಿಷಾಸುರನ ಕೊಂದ ಹಾಗೆ ಆ್ಯಸಿಡ್ ನಾಗನನ್ನ ಕೊಲ್ಲಬೇಕು. ಒಂದೇ ಸಲ ಸಾಯಿಸಬೇಡಿ, ನಮ್ಮ ಮಗಳ ನೋವು ಅವನಿಗೂ ಗೊತ್ತಾಗಬೇಕು. ಅವನಿಗೆ ಕ್ರೂರಾತೀ ಕ್ರೂರ ಶಿಕ್ಷೆ ಕೊಡಬೇಕು’ ಎಂದು ಆಗ್ರಹಿಸಿದರು. ‘ಅವನ ಕಾಲು ಮುರಿದು ಭಿಕ್ಷೆ ಬೇಡಲು ಹಾಕ್ಬೇಕು. ನನ್ನ ಮಗಳ ಮುಖ ನೋಡಿ 15 ದಿನಗಳಾಯ್ತು’ ಅಂತ ಬೇಸರ ವ್ಯಕ್ತಪಡಿಸಿದರು. ‘ಆ ಪಾಪಿ ನಾಗೇಶ್ ಬೇರೆ ಹೆಣ್ಣು ಮಗಳನ್ನಲ್ಲ, ಅವನ ತಾಯಿ ಮುಖ ನೋಡೋದಕ್ಕೂ ಹೆದರಬೇಕು. ಅಂತಹ ಶಿಕ್ಷೆ ಅವನಿಗೆ ಆಗಬೇಕು’ ಎಂದು ಯುವತಿ ಚಿಕ್ಕಮ್ಮ ಆಗ್ರಹಿಸಿದರು.
    ಸಂತ್ರಸ್ತೆಯ ಚಿಕ್ಕಪ್ಪ ನಾಗೇಶ್ ಬಂಧಿಸಿದ ಪೊಲೀಸರಿಗೆ ಕೃತಜ್ಞತೆ ಸಲ್ಲಿಸಿ ‘ಪೊಲೀಸ್ ಇಲಾಖೆಗೆ ತುಂಬಾ ಧನ್ಯವಾದ, ಪೊಲೀಸರು ಧೈರ್ಯ ತುಂಬಿದರು ಹೇಳಿದಂತೆ ಅವನನ್ನು ಬಂಧಿಸಿದ್ದಾರೆ’ ಎಂದರೆ, ಯುವತಿಯ ಸಹೋದರಿ, ‘ನನ್ನ ತಂಗಿ ಅಲ್ಲಿ ನರಳಾಡ್ತಿದ್ದಾಳೆ. ಅವನು ನನ್ನ ತಂಗಿ ಕಣ್ಣ ಮುಂದೆಯೇ ಸಾಯಬೇಕು’ ಎಂದು ಆಕ್ರೋಶ ವ್ಯಕ್ತಪಡಿಸಿದರು
    ಯುವತಿಯ ತಂದೆ, ‘ಮಗಳಿಗೆ ಇನ್ನೂ ಊಟ ಮಾಡಲು ಆಗುತ್ತಿಲ್ಲ ಪೈಪ್ ಮೂಲಕವೇ ದ್ರವ ಆಹಾರ ಕೊಡಲಾಗುತ್ತಿದೆ’ ಎಂದು ಕಣ್ಣೀರು ಹಾಕಿದ್ದಾರೆ.

    acid nagesh caught in tamilnadu
    Share. Facebook Twitter Pinterest LinkedIn Tumblr Email WhatsApp
    Previous Articleಗಡಿಯಲ್ಲಿ ಪಾಕ್ ಡ್ರೋನ್​ ಮೇಲೆ ಗುಂಡಿನ ದಾಳಿ
    Next Article ಪ್ರಿಯಾಂಕಾ Entry!!
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • l8vp1 ರಲ್ಲಿ ರಾಮನಗರದಲ್ಲಿ ನಿಖಿಲ್ ಸ್ಪರ್ಧೆ Doubt! #jds #kumaraswamy #ramanagara
    • fnusq ರಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ರೂ.3 ಹೆಚ್ಚಳ.
    • emroo ರಲ್ಲಿ ನಿರ್ಮಲಾ ಸೀತಾರಾಮನ್ ನಾಮಫಲಕಕ್ಕೆ ಮಸಿ | Nirmala Sitharaman
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe