Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಂಜಲಿ ಹಂತಕ ಹೇಗೆ ಸಿಕ್ಕಿಬಿದ್ದ ನೋಡಿ.
    ಅಪರಾಧ

    ಅಂಜಲಿ ಹಂತಕ ಹೇಗೆ ಸಿಕ್ಕಿಬಿದ್ದ ನೋಡಿ.

    vartha chakraBy vartha chakraಮೇ 18, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ .17-
    ರಾಜ್ಯದಲ್ಲಿ ತೀವ್ರ ಕೋಲಾಹಲ ಮತ್ತು ಆಕ್ರೋಶ ಸೃಷ್ಟಿಸಿರುವ ಹುಬ್ಬಳ್ಳಿಯ ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಪೊಲೀಸರ ಬಲೆಗೆ ಬಿದ್ದಿದ್ದಾನೆ.
    ಹತ್ಯೆ ನಡೆದ ನಂತರ ಪರಾರಿಯಾಗಿದ್ದ ಪಾತಕೆ ಗಿರೀಶ್ ಪೊಲೀಸ್ ಬಲೆಗೆ ಬಿದ್ದಿರುವ  ರೀತಿ ರೋಚಕವಾಗಿದೆ.
    ಅಂಜಲಿ ಅಂಬಿಗೇರ ಹತ್ಯೆ ಮಾಡಿದ ಬಳಿಕ ಆ ಸ್ಥಳದಿಂದ ಪರಾರಿಯಾಗಿದ್ದ ಆರೋಪಿ ಗಿರೀಶ್, ವಿಶ್ವ
    ವಿಶ್ವಮಾನವ ಎಕ್ಸ್ಪ್ರೆಸ್ ರೈಲಿನಲ್ಲಿ ಸಂಚರಿಸುತ್ತಿದ್ದಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.
    ಅದು ಹೇಗಂದರೆ, ರೈಲಿನಲ್ಲಿ ಪ್ರಯಾಣಿಸುತ್ತಿದ್ದ ತುಮಕೂರು ಮೂಲದ ಮಹಿಳೆಯೊಬ್ಬರ ಜತೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ್ದಾನೆ.ಈ ವೇಳೆ ತಾಳ್ಮೆ ಕಳೆದುಕೊಂಡು ಆ ಮಹಿಳೆಗೆ ಚಾಕು ತೊರಿಸಿದ್ದಾನೆ. ಇದರಿಂದ ರೈಲಿನಲ್ಲಿದ್ದ ಸಹ ಪ್ರಯಾಣಿಕರು ರೊಚ್ಚಿಗೆದ್ದು,ಆತನನ್ನು ಹಿಡಿದು ಥಳಿಸಿದ್ದರು.
    ನಂತರ ಆತ ದಾವಣಗೆರೆ ತಾಲೂಕಿನ ಮಾಯಕೊಂಡ ರೈಲು ನಿಲ್ದಾಣದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ರೈಲಿನಿಂದ ಜಿಗಿದು ತಪ್ಪಿಸಿಕೊಳ್ಳುವುದಕ್ಕೆ ಯತ್ನಿಸಿದ್ದ. ಈ ವೇಳೆ, ಸಹ ಪ್ರಯಾಣಿಕರು ಸಂಶಯ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
    ನಂತರ ಪರಿಶೀಲನೆ ನಡೆಸಿದ ರೈಲ್ವೆ ಪೊಲೀಸರು, ಈತನನ್ನು ಅಂಜಲಿ ಹತ್ಯೆ ಆರೋಪಿ  ಎಂದು ಗುರುತು ಹಿಡಿದು ಹುಬ್ಬಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮಾಯಕೊಂಡಕ್ಕೆ ಬಂದ ಹುಬ್ಬಳ್ಳಿ ಪೊಲೀಸರು ತಡ‌ರಾತ್ರಿ ಆರೋಪಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ.
    ಮೈಸೂರಿನಲ್ಲಿದ್ದ ಆರೋಪಿ:
    ಆರೋಪಿ ಗಿರೀಶ್ ಮೈಸೂರಿನ ಮಹಾರಾಜ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ.ಯುವತಿ ಅಂಜಲಿ ಮತ್ತು ಆರೋಪಿ ಪರಸ್ಪರ ಪ್ರೀತಿಸುತ್ತಿದ್ದರು.15 ದಿನಗಳ ಹಿಂದೆ ದೇವಸ್ಥಾನದಲ್ಲಿ ಮದುವೆಯಾಗಿದ್ದಾಗಿಯೂ ಕೆಲವು ಮೂಲಗಳು ಮಾಹಿತಿ ನೀಡಿವೆ. ವಾರದ ಮುಂಚೆ ಯುವತಿ 2 ಸಾವಿರ ರೂ ಹಣ ಕೇಳಿದ್ದಳು. ಗಿರೀಶ್ ಒಂದು ಸಾವಿರ ರೂಪಾಯಿ ಪೋನ್ ಪೇ ಮಾಡಿದ್ದ. ಆ ನಂತರ ನಿನ್ನ ಜೊತೆ ಯಾವುದೇ ಸಂಬಂಧ ಬೇಡ ಎಂದು ಹೇಳಿ ಆಕೆ ಗಿರೀಶನ ನಂಬರ್ ಅನ್ನು ಅಂಜಲಿ ಬ್ಲಾಕ್ ಲಿಸ್ಟ್ ಮಾಡಿದ್ದರು ಎನ್ನಲಾಗಿದೆ.
    ಆ ಬಳಿಕ ಯಾವುದೇ ಫೋನ್ ಕರೆ ಕೂಡ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಆರೋಪಿ ಸಿಟ್ಟಿಗೆದ್ದು ಮೈಸೂರಿ‌ನಿಂದ ಹುಬ್ಬಳ್ಳಿ ಗೆ ಬಂದು ಕೊಲೆ ಮಾಡಿದ್ದಾನೆ. ಅಲ್ಲಿಂದ ಹುಬ್ಬಳ್ಳಿ ಹೊಸ ಬಸ್ ನಿಲ್ದಾಣಕ್ಕೆ ಬಂದು ಹಾವೇರಿಗೆ ತಲುಪಿದ್ದ. ಹಾವೇರಿಯಿಂದ ಮೈಸೂರಿಗೆ ಹೋಗಿ ಮಹಾರಾಜ್ ಹೋಟೆಲ್ಲಿನಲ್ಲಿ ಮಲಗಿದ್ದ.
    ಇದಾದ ಬಳಿಕ ಆತ ಮೈಸೂರಿನಿಂದ ಹುಬ್ಬಳ್ಳಿಗೆ ವಾಪಸ್ ಆಗಲು ಬರುತ್ತಿದ್ದಾಗ ಗೊಂದಲ ಮಾಡಿಕೊಂಡು ರೈಲ್ವೆ ಪೊಲೀಸರ ವಶಕ್ಕೆ ಬಿದ್ದಿದ್ದಾನೆ.
    ಈ ನಡುವೆ ಮಾಧ್ಯಮಗಳ ಜೊತೆ ಮಾತನಾಡಿದ ಹುಬ್ಬಳ್ಳಿ ಪೋಲೀಸ್ ಕಮಿಷನರ್ ರೇಣುಕಾ ಸುಕುಮಾರ್
    ಅವರು ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣದ  ಹಿನ್ನಲೆಯಲ್ಲಿ ಆರೋಪಿ ಪತ್ತೆಗಾಗಿ ಎಂಟು ತಂಡವನ್ನು ರಚನೆ ಮಾಡಿದ್ದೆವು. ನಿನ್ನೆ ರೈಲ್ವೆ ಪೋಲಿಸರ ಸಹಾಯದಿಂದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಗಿರೀಶ್ ತಲೆ ಮತ್ತು ಬೆನ್ನಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಕೋಮಾ ಸ್ಥಿತಿಯಲ್ಲಿದ್ದಾನೆ. ರೈಲಿನಿಂದ ಏಕೆ ಕೆಳಗೆ ಬಿದ್ದ ಎಂಬುದನ್ನು ಆತನ ಹೇಳಿಕೆಯ ನಂತರವಷ್ಟೇ ತಿಳಿಯಬಹುದು ಎಂದು ತಿಳಿಸಿದರು.

    Verbattle
    Verbattle
    Verbattle
    ಕೊಲೆ ತುಮಕೂರು ಮದುವೆ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಅಧಿಕಾರಿಗಳ ಕಿವಿ ಹಿಂಡಿದ ಸಿಎಂ ಮತ್ತು ಡಿಸಿಎಂ.
    Next Article ಚೆಕ್ ಇನ್ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದಾಗ ಆಗಿದ್ದೇನು.?
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    1 ಟಿಪ್ಪಣಿ

    1. Ufhxvm on ಫೆಬ್ರವರಿ 12, 2026 12:03 ಫೂರ್ವಾಹ್ನ

      mgm 200 free bet online casino betmgm play betmgm Colorado

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • Zppvte ರಲ್ಲಿ ಬೆಂಗಳೂರು ನಾಗರಿಕರೇ ಎಚ್ಚರ
    • LarryCax ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.