Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್ ರೇವಣ್ಣನಿಗೆ ದೇವೇಗೌಡರ ಎಚ್ಚರಿಕೆ.
    Viral

    ಪ್ರಜ್ವಲ್ ರೇವಣ್ಣನಿಗೆ ದೇವೇಗೌಡರ ಎಚ್ಚರಿಕೆ.

    vartha chakraBy vartha chakraಮೇ 23, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.23:
    ಲೈಂಗಿಕ ಕಿರುಕುಳ ಆರೋಪದ ಪೆನ್ ಡ್ರೈವ್ ಪ್ರಕರಣಕ್ಕೆ ಸಿಲುಕಿ ವಿದೇಶಕ್ಕೆ ತೆರಳಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮಾಜಿ ಪ್ರಧಾನಿ ದೇವೇಗೌಡ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
    ಕೂಡಲೇ ಸ್ವದೇಶಕ್ಕೆ ವಾಪಸ್ ಬಂದು ವಿಶೇಷ ತನಿಖಾ ತಂಡದ ಎದುರು ವಿಚಾರಣೆಗೆ ಹಾಜರಾಗುವಂತೆ ತಾಕೀತು ಮಾಡಿದ್ದಾರೆ.
    ಈ ಬಗ್ಗೆ ಪತ್ರವೊಂದನ್ನು ಬರೆದು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಅವರು; ನನ್ನ ಮೇಲೆ ಗೌರವ ಇದ್ದರೆ ತಕ್ಷಣವೇ ವಾಪಸ್ ಮರಳಿ ಬಾ ಇದು ನನ್ನ ಎಚ್ಚರಿಕೆ ಎಂದು ತಿಳಿಸಿದ್ದಾರೆ.
    ತಮ್ಮ ಪತ್ರದಲ್ಲಿ ಎಲ್ಲಾ ಘಟನಾವಳಿಗಳನ್ನು ಉಲ್ಲೇಖಿಸಿರುವ ಅವರು,ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ದಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ ಎಂದು ಹೇಳಿದ್ದಾರೆ.
    ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಪ್ರಕರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ ಎಂದಿದ್ದಾರೆ
    ಪ್ರಜ್ವಲನ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ನಾನು ಅವರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ ಎಂದು ನಾನು ಜನರಿಗೆ ಅರ್ಥಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ ಎಂದು ವಿವರಿಸಿದ್ದಾರೆ
    ಈಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪ್ರೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪದತಲದಲ್ಲಿ ಇರಿಸಿದ್ದೇನೆ ಎಂದು ತಿಳಿಸಿದ್ದಾರೆ
    ಈ ಸಂದರ್ಭದಲ್ಲಿ ನಾನು ಈಗ ಒಂದು ಕೆಲಸವನ್ನಷ್ಟೆ ಮಾಡಬಲ್ಲೆ. ಅದೇನೆಂದರೆ, ಪ್ರಜ್ವಲನು ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು ಎಂದು ತಾಕೀತು ಮಾಡಿದ್ದಾರೆ.

    Verbattle
    Verbattle
    Verbattle
    News Politics ಕಾನೂನು ದೇವೇಗೌಡ ಪ್ರಜ್ವಲ್ ಪ್ರಜ್ವಲ್ ರೇವಣ್ಣ ರಾಜಕೀಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿದ ತೆಲುಗು ನಟಿಯರು.
    Next Article ಯುವತಿಯ ಕೊಲೆ ರಹಸ್ಯ ಕೇಳಿದರೆ ಭಯವಾಗುತ್ತದೆ.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mine_kvSa ರಲ್ಲಿ ಸುಟ್ಟು ಕರಕಲಾದ ನತದೃಷ್ಟರು | Attibele
    • Daviddek ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • Daviddek ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.