Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಏಳು ವರ್ಷ ಕಳೆದರೂ ಪತ್ತೆಯಾಗದ ನಟ ದರ್ಶನ್ P.A.
    Trending

    ಏಳು ವರ್ಷ ಕಳೆದರೂ ಪತ್ತೆಯಾಗದ ನಟ ದರ್ಶನ್ P.A.

    vartha chakraBy vartha chakraಜೂನ್ 14, 20241 ಟಿಪ್ಪಣಿ3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.14-
    ತಮ್ಮ ಸ್ನೇಹಿತೆಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಮಾಡಿ ಜೈಲುಪಾಲಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಮತ್ತೊಂದು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ.
    ನಟ ದರ್ಶನ್ ಅವರ ಮಾಜಿ ಅಪ್ತ ಸಹಾಯಕ ಮಲ್ಲಿಕಾರ್ಜುನ್ ಅಲಿಯಾಸ್ ಮಲ್ಲಿ ನಾಪತ್ತೆಯಾಗಿ 7 ವರ್ಷ ಕಳೆದರೂ ಪತ್ತೆಯಾಗದ ಪ್ರಕರಣ ಇದೀಗ ಮುನ್ನೆಲೆಗೆ ಬಂದಿದೆ.
    ಮಲ್ಲಿಕಾರ್ಜುನ ನಾಪತ್ತೆಯಾಗಿ ಏಳು ವರ್ಷಗಳೇ ಕಳೆದರೂ ಆತನ ಬಗ್ಗೆ ಇಲ್ಲಿಯವರೆಗೆ ಯಾವುದೇ ಸುಳಿವು ಲಭ್ಯವಾಗಿಲ್ಲ.ಈಗ ಮಲ್ಲಿಕಾರ್ಜುನ ಎಲ್ಲಿದ್ದಾನೆ? ಬದುಕಿದ್ದಾನೆಯೇ? ಅಥವಾ ರೇಣುಕಾ ಸ್ವಾಮಿ ರೀತಿಯ ಆತನದ್ದೂ ಕೊಲೆ ಆಗಿದೆಯೇ ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣದಲ್ಲಿ ಎದ್ದಿವೆ.
    ನಟ ಅರ್ಜುನ್ ಸರ್ಜಾ  ಅವರು ʻಪ್ರೇಮ ಬರಹ  ಚಿತ್ರದ ವಿತರಣೆ ಹಣದ ವಿಚಾರವಾಗಿ ಮಲ್ಲಿಕಾರ್ಜುನ್ ವಿರುದ್ಧ 1 ಕೋಟಿ ರೂ. ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದು, ಆದರೆ, ಮಲ್ಲಿ ಕಳೆದ 7 ವರ್ಷಗಳಿಂದ ನಾಪತ್ತೆಯಾಗಿದ್ದಾರೆ.
    ಶ್ರೀ ಕಾಲಕಾಲೇಶ್ವರ ಎಂಟರ್ಪ್ರೈಸಸ್ ಕಂಪನಿ ಒಡೆಯರಾಗಿದ್ದ ಮಲ್ಲಿಕಾರ್ಜುನ್, ಗಾಂಧಿನಗರದಲ್ಲಿ ಹಲವರಿಗೆ 11 ಕೋಟಿ ರೂ. ಮೋಸ ಮಾಡಿರುವುದಾಗಿ ತಿಳಿದು ಬಂದಿತ್ತು. ಮಾತ್ರವಲ್ಲ ನಟ ದರ್ಶನ್‌ಗೆ 2 ಕೋಟಿ ರೂ. ಮೋಸ ಮಾಡಿ ನಾಪತ್ತೆಯಾಗಿದ್ದಾರೆ ಎಂಬ ದೂರಿತ್ತು. ಮಲ್ಲಿಕಾರ್ಜುನ್ ವಿಚಾರವಾಗಿ ಅರ್ಜುನ್ ಸರ್ಜಾ ಅವರು ಮತ್ತು ಅವರ ಪರ ವಕೀಲರು ನ್ಯಾಯಾಲಯದ ಮೊರೆ ಹೋಗಿದ್ದರು. ಮಲ್ಲಿಕಾರ್ಜುನ್‌ ಹಾಜರಾಗದೇ ಇದ್ದರೆ ವಾರಂಟ್ ಜಾರಿ ಮಾಡಬಹುದು ಎಂದು ಕೋರ್ಟ್‌ ಆದೇಶ ನೀಡಿತ್ತು.
    ಪ್ರೇಮ ಬರಹ ಸಿನಿಮಾ ಪ್ರಕರಣ
    ಅರ್ಜುನ್ ಸರ್ಜಾ ನಿರ್ದೇಶನ ಮತ್ತು ನಿರ್ಮಾಣದ ಚಿತ್ರ ʻಪ್ರೇಮ ಬರಹʼ ಚಿತ್ರವನ್ನು  ಮಲ್ಲಿ ರಾಜ್ಯಾದ್ಯಂತ ವಿತರಣೆ ಮಾಡಿದ್ದರು. 2018 ಫೆಬ್ರವರಿ 9ನೇ ತಾರೀಖು ರಾಜ್ಯಾದ್ಯಂತ ʻಪ್ರೇಮ ಬರಹʼ ಸಿನಿಮಾ ರಿಲೀಸ್ ಆಗಿತ್ತು. ಚಂದನ್ ಕುಮಾರ್ ಹಾಗೂ ಅರ್ಜುನ್ ಸರ್ಜಾ ಅವರ ಮೊದಲ ಪುತ್ರಿ ಐಶ್ವರ್ಯ ಅರ್ಜುನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ದಿವಂಗತ ಚಿರು ಸರ್ಜಾ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದರು. 2018ರ ಶುರುವಿನಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ ಪ್ರೇಮ ಬರಹ ಸಿನಿಮಾದ ವಿತರಣೆಯ ಹಣದ ವಿಚಾರದಲ್ಲಿ ದರ್ಶನ್ ಮಾಜಿ ಪಿ.ಎ ಮಲ್ಲಿಕಾರ್ಜುನ್ ಮತ್ತು ನಟ-ನಿರ್ಮಾಪಕ-ನಿರ್ದೇಶಕ ಅರ್ಜುನ್ ಸರ್ಜಾರಲ್ಲಿ ವೈ ಮನಸ್ಸು ಶುರುವಾಗಿತ್ತು. ಅರ್ಜುನ್ ಸರ್ಜಾ ಮತ್ತು ಮಲ್ಲಿಕಾರ್ಜುನ್ ನಡುವೆ ʻಪ್ರೇಮ ಬರಹʼ ಸಿನಿಮಾದ ವಿತರಣೆಯ ವಿಚಾರವಾಗಿ ಬರೋಬ್ಬರಿ 1 ಕೋಟಿ ರೂ. ಕೊಡುವ ಒಪ್ಪಂದ ಆಗಿತ್ತು. ಈ ವಿಚಾರವಾಗಿ ಸ್ವತಃ ಮಲ್ಲಿಕಾರ್ಜುನ್ ಅವರೇ ಅವರದ್ದೇ ಆದ ಶ್ರೀ ಕಾಲಕಾಲೇಶ್ವರ ಎಂಟರ್ಪ್ರೈಸಸ್ ಬುಕ್ಲೆಟ್‌ನಲ್ಲಿ ವಿತರಣೆಯ ಹಣದ ವಿಚಾರವನ್ನು ಬರೆದುಕೊಟ್ಟಿದ್ದರು.
    ಕಳೆದ 2018ರ ಫೆಬ್ರವರಿ ತಿಂಗಳು 9ನೇ ತಾರೀಕು ತೆರೆಕಂಡ “ಪ್ರೇಮ ಬರಹʼದ ಸಂಗ್ರಹದ ಹಣವನ್ನು  ಮಲ್ಲಿಕಾರ್ಜುನ್ ಕೊಟ್ಟಿರಲಿಲ್ಲ. 2018 ಫೆಬ್ರವರಿ ತಿಂಗಳ ನಂತರ ಮುಂದಿನ ಆರೇಳು ತಿಂಗಳು ಅರ್ಜುನ್ ಸರ್ಜಾ ಅವರು ಮಲ್ಲಿಕಾರ್ಜುನ್ ಅವರಲ್ಲಿ ವಿತರಣೆಯ ಹಣವನ್ನು ಕೊಡುವಂತೆ ಕೇಳಿಕೊಂಡಿದ್ದಾರೆ. ಇದೇ ಸಮಯದಲ್ಲಿ ಮಲ್ಲಿಕಾರ್ಜುನ್ ನಾಪತ್ತೆ ಆಗಿಬಿಟ್ಟರು. ಒಟ್ಟು ಸುಮಾರು 11 ಕೋಟಿ ರೂ. ಮೋಸ ಮಾಡಿ ಓಡಿಹೋಗಿದ್ದಾರೆ ಎಂದು ಆಗ ಗಾಂಧಿನಗರದಲ್ಲಿ ಮಾತುಗಳು ಕೇಳಿಬರುತ್ತಿತ್ತು. ಈ ವಿಚಾರವನ್ನ ನಟ ದರ್ಶನ್ ಅವರಲ್ಲಿ ಕೇಳಿದಾಗ ‘‘ನನಗೆ 2 ಕೋಟಿ ಕೊಡಬೇಕಿತ್ತು ಮಲ್ಲಿ‘. ನನ್ನ ಹೆಸರಿನಲ್ಲಿ ಅನೇಕರಿಗೆ ಮೋಸ ಮಾಡಿದ್ದಾನೆ ಎನ್ನುವ ವಿಚಾರ ಕೇಳಿದ್ದೇನೆ. ಆತ ಎಲ್ಲಿಗೆ ಹೋಗಿದ್ದಾನೆ ಎಂದು ನನಗೆ ಗೊತ್ತಿಲ್ಲ ಎಂದಿದ್ದರುʼʼ ದರ್ಶನ್.
    ಗದಗ ಜಿಲ್ಲೆಯವರಾಗಿದ್ದ ಮಲ್ಲಿಕಾರ್ಜುನ್ ಏಳು ವರ್ಷದಿಂದ ಯಾರಿಗೂ ಸಿಕ್ಕಿಲ್ಲ. 2018ರಲ್ಲಿ ಮಲ್ಲಿಕಾರ್ಜುನ್ ನಾಪತ್ತೆಯಾದಾಗ ಅರ್ಜುನ್ ಸರ್ಜಾ ಟೀಮ್ ಅವರ ಊರಿನ ಕಡೆ ಹೊರಟಿತ್ತು. ಮಲ್ಲಿ ಅವರ ಪತ್ನಿ ಕೊಪ್ಪಳ ಮೂಲದವರು. ಆಗ ಅವರ ಮನೆಗೆ ಹುಡುಕಿಕೊಂಡು ಹೋದಾಗ ಮಲ್ಲಿಕಾರ್ಜುನ್ ಪತ್ನಿ ತೇಜಸ್ವಿನಿ ”ನಮ್ಮ ಮನೆಗೂ ನನ್ನ ಪತಿ ಬಂದಿಲ್ಲ. ಇದೊಂದು ಪತ್ರ ಬರೆದು ಹೊರಟು ಹೋಗಿದ್ದಾರೆʼʼ ಎಂದು ಹೇಳಿದ್ದರು.
    ಪತ್ರದಲ್ಲಿ ಏನಿತ್ತು:
    ಪ್ರೀತಿಯ ತೇಜಸ್ವಿನಿಗೆ, ಮೊದಲನೆದಾಗಿ ದಯವಿಟ್ಟು ನನ್ನನ್ನು ಕ್ಷಮಿಸು. ನಾನು ನನ್ನ ವೈಯಕ್ತಿಕ ವ್ಯವಹಾರಕ್ಕಾಗಿ ತುಂಬಾ ಸಾಲ ಮಾಡಿಕೊಂಡು ಅದನ್ನು ತೀರಿಸಲಾಗದ ಪರಿಸ್ಥಿತಿಗೆ ಬಂದು ತಲುಪಿದ್ದೇನೆ. ನನ್ನ ಈ ಕೆಲಸದಿಂದ ನಾನು ಯಾರಿಗೂ ಮುಖ ತೋರಿಸಲಾಗದ ಪರಿಸ್ಥಿತಿಯಲ್ಲಿದ್ದೇನೆ. ಆದ ಕಾರಣ ನಾನು ಎಲ್ಲೋ ಕಷ್ಟಪಟ್ಟು ದುಡಿದು ವಾಪಸ್ಸು ಬಂದು ಸಾಲ ತೀರಿಸಿ, ನನಗಂಟಿರುವ ಕಳಂಕ ಹೋಗಲಾಡಿಸಿ ಮತ್ತೆ ಧೈರ್ಯವಾಗಿ ತಲೆಯತ್ತಿ ಎಲ್ಲರ ಮುಂದೆ ಜೀವನ ನಡೆಸಬೇಕೆಂದುಕೊಂಡಿದ್ದೇನೆ. ಅಲ್ಲಿಯವರಿಗೆ ನಿಮ್ಮ ಎದುರಿಗೆ ಬರುವ ಶಕ್ತಿ ನನಗಿಲ್ಲ. ನನ್ನನ್ನು ಯಾವುದೇ ಕಾರಣಕ್ಕೂ ಹುಡುಕುವ ಪ್ರಯತ್ನ ಮಾಡಬೇಡಿ. ನನ್ನ ಸಮಸ್ಯೆಯಿಂದ ನಿನ್ನನ್ನು, ಮಗನನ್ನು ಹಾಗೂ ಮನೆಯವರನ್ನೂ ಬಿಟ್ಟು ಹೋಗುವ ಪರಿಸ್ಥಿತಿ ಬಂದೊದಗಿದೆ. ದಯವಿಟ್ಟು ನನ್ನನ್ನು ಕ್ಷಮಿಸುʼʼ ಎಂದು ಬರೆದಿದ್ದರು.
    ರೇಣುಕಾ ಸ್ವಾಮಿ ಪ್ರಕರಣ ಹೊರಬಂದ ಬಳಿಕ ಮಲ್ಲಿ ಕುರಿತು ಸಹ ಪ್ರಶ್ನೆಗಳು ಎದ್ದಿವೆ. ಮಲ್ಲಿ ಎಲ್ಲಿದ್ದಾನೆ? ಬದುಕಿದ್ದಾನೆಯೇ? ಅಥವಾ ರೇಣುಕಾ ಸ್ವಾಮಿ ರೀತಿಯ ಆತನದ್ದೂ ಕೊಲೆ ಆಗಿವೆಯೇ? ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣದಲ್ಲಿ ಎದ್ದಿವೆ.2018ರ ಬಳಿಕ ಮಲ್ಲಿ ಅಚಾನಕ್ಕಾಗಿ ಕಾಣೆಯಾದರು. ಅಂದಿನಿಂದ ಈ ವರೆಗೆ ಮಲ್ಲಿ ಎಲ್ಲಿದ್ದಾರೆಂಬುದು ಯಾರಿಗೂ ಗೊತ್ತಿಲ್ಲ

    Verbattle
    Verbattle
    Verbattle
    Bangalore crime Government Karnataka News Politics Trending Varthachakra ಕಾನೂನು ಕೊಲೆ ಚಂದನ್ ಚಿತ್ರದುರ್ಗ ದರ್ಶನ್ ನ್ಯಾಯ ರಾಜಕೀಯ ವ್ಯವಹಾರ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಕೇಂದ್ರ ಮಂತ್ರಿ ಸೋಮಣ್ಣ ಮಗನ ವಿರುದ್ಧ FIR.
    Next Article ದರ್ಶನ್ ಕೊಟ್ಟಿದ್ದ ಹಣ ಜಪ್ತಿ.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Dvlqrt on ಫೆಬ್ರವರಿ 13, 2026 1:08 ಅಪರಾಹ್ನ

      betmgm California betmgm-play betmgm RI

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • LeonardReawn ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    • LinwoodGah ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.