ಬೆಂಗಳೂರು ಜುಲೈ 23 ಮೋದಿ ಸರಕಾರದ ಬಜೆಟ್ ರಾಜ್ಯದ ಅದರಲ್ಲೂ ಕಲ್ಯಾಣ ಕರ್ನಾಟಕದ ನಿರೀಕ್ಷೆಗಳಿಗೆ ತಣ್ಣೀರು ಎರಚಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಪ್ರತಿಕ್ರಿಯಿಸಿದ್ದಾರೆ.
ಕೇವಲ ತಮ್ಮ ಮಿತ್ರ ಪಕ್ಷಗಳ ಹಿತಾಸಕ್ತಿಯನ್ನ ಕಾಪಾಡಿಕೊಂಡಿರುವ ಬಜೆಟ್ ಇದಾಗಿದ್ದು, ಕರ್ನಾಟಕ ರಾಜ್ಯ ನಿರೀಕ್ಷಿಸಿದ್ದ ನೀರಾವರಿ ಯೋಜನೆಗಳ ಬಗ್ಗೆಯೂ ಯಾವುದೇ ಪ್ರಸ್ತಾಪ ಮಾಡದೇ ಇರುವ ಮೂಲಕ ಮತ್ತೊಮ್ಮೆ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. ಕಲ್ಯಾಣ ಕರ್ನಾಟಕದ ಪ್ರಮುಖ ಜಿಲ್ಲೆಯಾದ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ಕಳೆದ 700 ಕ್ಕೂ ಹೆಚ್ಚು ದಿನಗಳಿಂದ ರಾಯಚೂರಿನಲ್ಲಿ ಧರಣಿ ಸತ್ಯಾಗ್ರಹ ಮಾಡಲಾಗುತ್ತಿದೆ. ಸ್ವತಃ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ತಾವೇ ಹಲವಾರು ಬಾರಿ ಈ ಬಗ್ಗೆ ಮನವಿ ಪತ್ರವನ್ನ ಸಲ್ಲಿಸಿದ್ದಾರೆ. ಅಲ್ಲದೇ, ಹಲವಾರು ಬಾರಿ ಆ ಭಾಗದ ಜನಪ್ರತಿನಿಧಿಗಳು ತಮ್ಮ ಮನವಿಯನ್ನು ಕೇಂದ್ರ ಸಚಿವರಿಗೆ ಸಲ್ಲಿಸಿದ್ದಾರೆ. ಆದರೂ ಯಾವುದೇ ಕರುಣೆ ತೋರಿಸದೇ ರಾಜ್ಯಕ್ಕೆ ಅದರಲ್ಲೂ ಕಲ್ಯಾಣ ಕರ್ನಾಟಕದ ನಿರೀಕ್ಷೆಗೆ ತಣ್ಣೀರು ಎರಚುವ ಕಾರ್ಯವನ್ನು ಕೇಂದ್ರ ವಿತ್ತ ಸಚಿವರು ಮಾಡಿದ್ದಾರೆ ಎಂದು ಹೇಳಿದ್ದಾರೆ.
ಕೇಂದ್ರ ಬಜೆಟ್ ಮೇಲೆ ಜನಸಾಮಾನ್ಯರು ಬಹಳಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ಹಿಂದುಳಿದ ವರ್ಗಗಳಿಗೆ, ರೈತರ ಅಭ್ಯುದಯಕ್ಕೆ, ಮಧ್ಯಮ ವರ್ಗದ ನಿರೀಕ್ಷೆಗಳಿಗೆ ಇಂಬು ನೀಡಿದೇ ಇರುವಂತಹ ಬಜೆಟನ್ನ ಮಂಡಿಸಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.
5 ಪ್ರತಿಕ್ರಿಯೆಗಳು
where buy cheap clomiphene tablets can you get cheap clomid for sale how to buy clomid tablets clomiphene cost clomid bula profissional can i order clomiphene pills clomid order
I am in point of fact thrilled to gleam at this blog posts which consists of tons of of use facts, thanks for providing such data.
This website really has all of the low-down and facts I needed adjacent to this subject and didn’t know who to ask.
inderal 10mg for sale – generic inderal 10mg how to buy methotrexate
where can i buy amoxicillin – valsartan 160mg tablet order ipratropium 100 mcg pills