ಬೆಂಗಳೂರು,ಜು.27- ಶಾಲೆಗೆ ಬರುವಾಗ ನೀಟಾಗಿ ಎರಡು ಜಡೆ ಹಾಕಿಕೊಂಡು ಬಂದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಶಿಕ್ಷಕರು ವಿದ್ಯಾರ್ಥಿನಿಯ ಕೂದಲು ಕತ್ತರಿಸಿದ ಘಟನೆ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಸರ್ಕಾರಿ ಶಾಲೆಯಲ್ಲಿ ನಿನ್ನೆ ನಡೆದಿದೆ.
ಜಡೆ ಹಾಕಿ ಶಾಲೆ ಬಾರದ್ದಕ್ಕೆ ಎಂಟನೆ ತರಗತಿಯಲ್ಲಿ ಓದುತ್ತಿರುವ ಅಮೂಲ್ಯ, ಅನುಷಾ, ಭಾವನ ಕೂದಲು ಕಟ್ ಮಾಡಿಸಿಕೊಂಡು ಶಿಕ್ಷಕರಿಂದ ಶಿಕ್ಷೆ ಅನುಭವಿಸಿದ್ದಾರೆ.
ಶಾಲೆಯ ಮುಖ್ಯ ಶಿಕ್ಷಕ ಶಿವಕುಮಾರ್ ಹೇಳಿದಂತೆ ಶಿಕ್ಷಕಿ ಪವಿತ್ರಾ ವಿದ್ಯಾರ್ಥಿನಿಯರ ಜಡೆ ಕಟ್ ಮಾಡಿದ್ದು,ವಿದ್ಯಾರ್ಥಿನಿಯರು ಶಾಲೆಯಿಂದ ಮನೆಗೆ ಹೋದಾಗ ಕೂದಲು ಕತ್ತರಿಸುವುದು ಪೋಷಕರು ಗಮನಿಸಿದ್ದಾರೆ. ವಿದ್ಯಾರ್ಥಿನಿಯರನ್ನು ವಿಚಾರಿಸಿದಾಗ ಶಾಲೆಯಲ್ಲಿ ನಡೆದ ಘಟನೆ ಬಗ್ಗೆ ತಿಳಿಸಿರುವ ವಿದ್ಯಾರ್ಥಿನಿಯರು. ಇದರಿಂದ ಆಕ್ರೋಶಗೊಂಡ ಪೋಷಕರು ಶಾಲೆಗೆ ಬಂದು ಗಲಾಟೆ ಮಾಡಿದ್ದಾರೆ.ಗಲಾಟೆ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Previous ArticlePOP ಗಣೇಶ ತಡೆಗೆ ಮಾರ್ಷಲ್ ಗಳ ನೇಮಕ.
Next Article ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.


1 ಟಿಪ್ಪಣಿ
Where the house edge is just clickbait – https://gntopama.com/buffalo-slots-online/ , The night is young and the jackpots are calling .