Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಾಯುಕ್ತಕ್ಕೆ ಏನಾಗಿದೆ.?
    Trending

    ಲೋಕಾಯುಕ್ತಕ್ಕೆ ಏನಾಗಿದೆ.?

    vartha chakraBy vartha chakraಸೆಪ್ಟೆಂಬರ್ 19, 202425 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.20-
    ತಮ್ಮ ನಿಗಧಿತ ಆದಾಯ ಮೂರಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿಪಾಸ್ತಿ ಹೊಂದಿರುವ
    ಭ್ರಷ್ಟ ಸರ್ಕಾರಿ ಅಧಿಕಾರಿಗಳ ವಿರುದ್ಧ ಕಾರ್ಯಾಚರಣೆ ಕೈಗೊಳ್ಳುವ ಮೂಲಕ ರಾಜ್ಯ ಲೋಕಾಯುಕ್ತ ದೊಡ್ಡ ಪ್ರಮಾಣದಲ್ಲಿ ಸುದ್ದಿ ಮಾಡುತ್ತಿದೆ.
    ಈ ಮೂಲಕ ಭ್ರಷ್ಟ ಅಧಿಕಾರಿಗಳ ಪಾಲಿಗೆ ಲೋಕಾಯುಕ್ತ ಸಿಂಹ ಸ್ವಪ್ನವಾಗಿದೆ.ಅದರಲ್ಲೂ ಲೋಕಾಯುಕ್ತ ಮುಖ್ಯಸ್ಥರಾಗಿ ನ್ಯಾಯಮೂರ್ತಿ ಸಂತೋಷ್ ಹೆಗಡೆ ಮತ್ತು ದಿವಂಗತ ವೆಂಕಟಾಚಲ ಅವರು ಮಾಡಿದ ಕೆಲಸವನ್ನು ಇಡೀ ದೇಶವೇ ನಿಬ್ಬೆರಗಾಗಿ ನೋಡಿತು.ಈ ಮೂಲಕ ಕರ್ನಾಟಕ ಲೋಕಾಯುಕ್ತ ದೇಶಕ್ಕೆ ಮಾದರಿಯಾಯಿತು.
    ಆದರೆ ಇತ್ತೀಚಿನ ದಿನಗಳಲ್ಲಿ ಹಲವಾರು ಕಾರಣಗಳಿಂದಾಗಿ ಲೋಕಾಯುಕ್ತ ಹಿಂದಿನ ಮೊನಚು ಕಳೆದುಕೊಂಡಿದೆಯಾದರೂ ಆಗಿಂದಾಗ್ಗೆ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ಸುದ್ದಿ ಮಾಡುತ್ತಿದೆ.ಇದು ಕೇವಲ ಸುದ್ದಿಗೆ ಸೀಮಿತವಾಗುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣ ಲೋಕಾಯುಕ್ತದಲ್ಲಿ ಬಾಕಿ ಉಳಿದಿರುವ ಪ್ರಕರಣಗಳು.
    ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸುವ ಲೋಕಾಯುಕ್ತ ಅಧಿಕಾರಿಗಳು ಆನಂತರ ಈ ಪ್ರಕರಣಗಳ ವಿಲೇವಾರಿಗೆ ಕೊಡಬೇಕಾದಷ್ಟು ಪ್ರಾತಿನಿಧ್ಯ ಕೊಡದ ಪರಿಣಾಮ ಹಾಗೂ ತನಿಖೆಗೆ ಬೇಕಾದ ವಿವಿಧ ಅನುಮತಿಗಳು ದೊರಕುವುದು ವಿಳಂಬವಾದ ಹಿನ್ನೆಲೆಯಲ್ಲಿ ಲೋಕಾಯುಕ್ತದಲ್ಲಿ ವಿಲೇವಾರಿಯಾಗದೇ ಸಾವಿರಾರು ಕೇಸ್‌ಗಳು ಬಾಕಿ ಉಳಿದಿವೆ.
    ಲೋಕಾಯುಕ್ತದಲ್ಲಿ 18 ಸಾವಿರಕ್ಕೂ ಹೆಚ್ಚು ಕೇಸ್‌ಗಳು ವಿಚಾರಣೆ ಆಗದೇ, ಕಡತಗಳು ಮೂಲೆ ಸೇರಿವೆ.
    ಕಳೆದ ಜುಲೈ ತಿಂಗಳ ಅಂತ್ಯದವರೆಗೆ 18 ಸಾವಿರ ಕೇಸ್‌ಗಳು ಲೋಕಾಯುಕ್ತದದಲ್ಲಿ ಬಾಕಿಯಿವೆ ಎಂದು ಪ್ರಕರಣ ವಿವರಗಳಿಂದ ತಿಳಿದುಬಂದಿದೆ.
    ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರದ್ದಾದ ಬಳಿಕ ಎಲ್ಲಾ ಕೇಸ್‌ಗಳು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿತ್ತು. ಹಾಗಾಗಿ ಎಸಿಬಿ ಮತ್ತು ಲೋಕಾಯುಕ್ತದಲ್ಲಿ ದಾಖಲಾದ ಕೇಸ್‌ಗಳ ಪೈಕಿ ಸುಮಾರು 18 ಸಾವಿರ ಕೇಸ್‌ಗಳು ವಿಚಾರಣೆಯಾಗದೇ ಬಾಕಿ ಉಳಿದಿದೆ. ದೂರು ದಾಖಲಾಗಿದ್ದರೂ ಕೆಲವು ಕಾರಣಗಳಿಂದ ವಿಚಾರಣೆ ಬಾಕಿ ಉಳಿದಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
    ಬಾಕಿ ಕೇಸ್ ವಿವರ:
    ಲೋಕಾಯುಕ್ತ- 5495 ಕೇಸ್
    ಉಪ ಲೋಕಾಯುಕ್ತ 1- 7028 ಕೇಸ್
    ಉಪ ಲೋಕಾಯುಕ್ತ 2- 6363 ಕೇಸ್
    ಒಟ್ಟು 18,886 ಕೇಸ್‌ ಬಾಕಿ

    Verbattle
    Verbattle
    Verbattle
    Bangalore Government Karnataka Trending ಅಪರಾಧ ಸುದ್ದಿ ಕಾನೂನು ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಜಾನಿ ಮಾಸ್ಟರ್ ಅರೆಸ್ಟ್.
    Next Article ಸಿದ್ದರಾಮಯ್ಯ ಹಿಟ್ಲರ್ ಅಂತೆ.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidFunny ರಲ್ಲಿ CCB ಹೆಸರಲ್ಲಿ ಪೊಲೀಸ್ ಪೇದೆ ಸುಲಿಗೆ.
    • mostbet_bfEa ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • alpha66_dwKr ರಲ್ಲಿ ರಾಜ್ಯ ಸರ್ಕಾರದ ಗೆಜೆಟ್ ಸೃಷ್ಟಿಸಿದ ವಂಚಕರು
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.