Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಯೇಂದ್ರ ಗೆ ಹೈಕಮಾಂಡ್ ಕೊಟ್ಟ ಸೂಚನೆ ಗೊತ್ತಾ
    ರಾಜಕೀಯ

    ವಿಜಯೇಂದ್ರ ಗೆ ಹೈಕಮಾಂಡ್ ಕೊಟ್ಟ ಸೂಚನೆ ಗೊತ್ತಾ

    vartha chakraBy vartha chakraಫೆಬ್ರವರಿ 11, 202525 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.11:
    ಕಳೆದ ಕೆಲವು ದಿನಗಳಿಂದ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಾಮಾನಗಳು ನಿರ್ಣಾಯಕ ಘಟ್ಟ ತಲುಪಿವೆ. ಹಾಲಿ ಪಕ್ಷದ ರಾಜ್ಯ ಅಧ್ಯಕ್ಷರಾಗಿರುವ ವಿಜಯೇಂದ್ರ ಅವರನ್ನು ಮತ್ತೊಂದು ಅವಧಿಗೆ ಅಧ್ಯಕ್ಷರಾಗಿ ಮುಂದುವರಿಸಲು ಹಸಿರು ನಿಶಾನೆ ತೋರಿಸುವ ಹೈಕಮಾಂಡ್ ಇದಕ್ಕಾಗಿ ಕೆಲವೊಂದು ಷರತ್ತುಗಳನ್ನು ವಿಧಿಸಿದೆ.
    ಪಕ್ಷದ ರಾಜ್ಯಾಧ್ಯಕ್ಷರ ವಿಚಾರದಲ್ಲಿ ನಡೆಯುತ್ತಿರುವ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮುಂದಾಗಿರುವ ಹೈಕಮಾಂಡ್ ವಿಜಯೇಂದ್ರ ಸೇರಿದಂತೆ ಪಕ್ಷದ ಕೆಲವು ಪ್ರಮುಖ ನಾಯಕರನ್ನು ದೆಹಲಿಗೆ ಕರೆಯಿಸಿಕೊಂಡು ಮಾತುಕತೆ ನಡೆಸಿದೆ.
    ಪಕ್ಷದ ಸ್ಪಷ್ಟ ಸೂಚನೆಯ ನಂತರವೂ ನಿರಂತರವಾಗಿ ನಾಯಕತ್ವದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶೋಕಾಸ್ ನೀಡಿದ ಹೈಕಮಾಂಡ್ ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರಾಗಿ ಮುಂದುವರಿಸಲು ಒಲವು ವ್ಯಕ್ತಪಡಿಸಿದೆ.
    ದೆಹಲಿಯಲ್ಲಿ ಬಿಡು ಬಿಟ್ಟಿರುವ ವಿಜಯೇಂದ್ರ ಅವರನ್ನು ತಮ್ಮ ಕಚೇರಿಗೆ ಕರೆಸಿಕೊಂಡು ಮಾತನಾಡಿದ ಗೃಹ ಮಂತ್ರಿ ಅಮಿತ್ ಷಾ, ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ವಿಜಯೇಂದ್ರ ಅವರಿಗೆ ಕೆಲವು ಸ್ಪಷ್ಟ ಸೂಚನೆಗಳನ್ನು ರವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
    ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯಬೇಕು ರಾಜ್ಯ ಪದಾಧಿಕಾರಿಗಳ ಪಟ್ಟಿ ಸಂಪೂರ್ಣ ಬದಲಾವಣೆಯಾಗಬೇಕು ವಿಭಾಗೀಯ ಪ್ರಧಾನ ಕಾರ್ಯದರ್ಶಿಗಳ ನೇಮಕ ಮಾಡಬೇಕು ಮತ್ತು ಪ್ರಮುಖ ನಾಯಕರನ್ನೊಳಗೊಂಡ ಕೋರ್ ಕಮಿಟಿ ರಚನೆ ಮಾಡಬೇಕು ಸೂಚಿಸಿದ್ದಾರೆ.
    ಸಂಘಟನಾತ್ಮಕ ವಿಚಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ನಡೆಸುವ ಹೋರಾಟಗಳ ಬಗ್ಗೆ ಯಾವುದೇ ಕಾರಣಕ್ಕೂ ಏಕ ಪಕ್ಷಿಯ ತೀರ್ಮಾನ ಕೈಗೊಳ್ಳಬಾರದು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಿದ ನಂತರವೇ ಕಾರ್ಯಕ್ರಮಗಳು ಜಾರಿಗೆ ಬರಬೇಕು ಇವುಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಯಾವುದೇ ರೀತಿಯ ಅಪಸ್ವರಗಳು ಕೇಳಿ ಬರದಂತೆ ನೋಡಿಕೊಳ್ಳಬೇಕು ಎಂದು ಸ್ಪಷ್ಟ ಸೂಚನೆ ನೀಡಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
    ಪಕ್ಷದ ರಾಜ್ಯ ಹಿರಿಯ ನಾಯಕರನ್ನು ಎಲ್ಲಾ ಹಂತದಲ್ಲೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಬೇಕು. ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷ ನಾಯಕರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ತಾಕೀತು ಮಾಡಿರುವುದಾಗಿ ಗೊತ್ತಾಗಿದೆ.
    ಪಕ್ಷ ಸದ್ಯ ಪ್ರಕಟಿಸಿರುವ ವೇಳಾಪಟ್ಟಿಯಂತೆ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ ಈ ಸಮಯದಲ್ಲಿ ಯಾವುದೇ ರೀತಿಯ ಗೊಂದಲಕ್ಕೆ ಅವಕಾಶವಿಲ್ಲದಂತೆ ನೋಡಿಕೊಳ್ಳಬೇಕು ಎಂಬ ಸೂಚನೆ ನೀಡಿರುವುದಾಗಿ ತಿಳಿದು ಬಂದಿದೆ.

    ಚುನಾವಣೆ ಬಿಜೆಪಿ ಬೆಂಗಳೂರು ವಿದ್ಯಾ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ
    Next Article ಸರ್ಕಾರಿ ನೌಕರರೇ ಇದನ್ನು ಗಮನಿಸಿ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://intelcont.md/media/pgs/?fribet-bez-depozita-kazakhstan.html ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • DanielCix ರಲ್ಲಿ ಅಗಲಿದ “ಕಲಾ ತಪಸ್ವಿ”
    • клининговая компания магазинов ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe