ಬೆಂಗಳೂರು,ಫೆ.26-
ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ನ ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ವಿಶೇಷ ತನಿಖಾ ತಂಡ (ಎಸ್ ಐಟಿ) ರಾಜ್ಯಪಾಲರ ಅನುಮತಿ ಕೇಳಿದೆ.
ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕೇಸ್ನಲ್ಲಿ ಹೆಚ್ಡಿಕೆ ವಿರುದ್ಧ ಪ್ರಾಸಿಕ್ಯೂಷನ್ಗೆ ಈ ಹಿಂದೆಯೇ ಎಸ್ ಐಟಿ ಅಧಿಕಾರಿಗಳು ರಾಜ್ಯಪಾಲರ ಬಳಿ ಅನುಮತಿ ಕೇಳಿದ್ದರು.
ಈ ವೇಳೆ ರಾಜ್ಯಪಾಲರ
ದೋಷಾರೋಪ ಪಟ್ಟಿಯನ್ನು ಇಂಗ್ಲಿಷ್ಗೆ ತರ್ಜುಮೆ ಮಾಡಿ ಸಲ್ಲಿಸುವಂತೆ ಸೂಚಿಸಿದ್ದರು ಅದರಂತೆ ಇದೀಗ ದೋಷಾರೋಪ ಪಟ್ಟಿಯನ್ನು ಸಂಪೂರ್ಣವಾಗಿ ಇಂಗ್ಲಿಷ್ ಗೆ ತರ್ಜುಮೆ ಮಾಡಲಾಗಿದೆ.
ಸುಮಾರು 4,500 ಪುಟಗಳ ದೋಷಾರೋಪ ಪಟ್ಟಿ ತರ್ಜುಮೆ ಮಾಡಿರುವ ಎಸ್ಐಟಿ ಅಧಿಕಾರಿಗಳು ಅದನ್ನು ರಾಜಭವನಕ್ಕೆ ತಲುಪಿಸಿದ್ದಾರೆ. ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿದ್ದಾರೆ.


1 ಟಿಪ್ಪಣಿ
betmgm free 200 betmgm-play pa bet mgm