ಬೆಂಗಳೂರು,ಜೂ.16:
ರಾಜಧಾನಿ ಮಹಾನಗರ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನು ಮುಂದೆ ಬೈಕ್ ಟ್ಯಾಕ್ಸಿಗಳು ಲಭ್ಯ ಇರುವುದಿಲ್ಲ. ಕ್ಷಿಪ್ರ ಮತ್ತು ಅಗ್ಗದ ಪ್ರಯಾಣದ ಹಿನ್ನೆಲೆಯಲ್ಲಿ ಬೈಕ್ ಟ್ಯಾಕ್ಸಿಗಳು ಜನಪ್ರಿಯವಾಗಿದ್ದವು.
ಇದರ ವಿರುದ್ಧ ಆಟೋ ಚಾಲಕರು ದೊಡ್ಡ ಮಟ್ಟದಲ್ಲಿ ಧ್ವನಿಯೆತ್ತಿದ್ದರು ಅಲ್ಲದೆ ಕೆಲವು ಕಡೆ ಬೈಕ್ ಟ್ಯಾಕ್ಸಿ ಸವಾರರಿಂದ ಕಾನೂನು ಉಲ್ಲಂಘನೆಯ ಪ್ರಕರಣಗಳು ವರದಿಯಾಗಿದ್ದವು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ ನಿಷೇಧಿಸಿ ಆದೇಶ ಹೊರಡಿಸಿತ್ತು.
ಈ ಆದೇಶ ಪ್ರಶ್ನಿಸಿ ರಾಪಿಡೋ ಸೇರಿದಂತೆ ಹಲವು ಬೈಕ್ ಟ್ಯಾಕ್ಸಿ ಸಂಸ್ಥೆಗಳು ಹೈಕೋರ್ಟ್ ಮೊರೆ ಹೊಕ್ಕಿದ್ದವು ಹೈಕೋರ್ಟ್ ನ ಎಕ ಸದಸ್ಯ ಪೀಠ ರಾಜ್ಯ ಸರ್ಕಾರದ ವಾದವನ್ನು ಪುರಸ್ಕರಿಸಿತ್ತು. ಇದರ ನಂತರ ಬೈಕ್ ಟ್ಯಾಕ್ಸಿ ಸಂಸ್ಥೆಗಳು ಮೇಲ್ಮನವಿ ಸಲ್ಲಿಸಿದ್ಧವು. ಇದು ಕೂಡ ವಜಾಗೊಂಡ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ ನಿಷೇಧ ಜಾರಿಗೆ ಬಂದಿದೆ.
ಈ ಮನೆಯಲ್ಲಿ ಜೂನ್ 16ರ ಸೋಮವಾರದಿಂದ ರಾಜ್ಯದಲ್ಲೆಡೆ ರಸ್ತೆಗೆಯುವ ಬೈಕ್ ಟ್ಯಾಕ್ಸಿಗಳ ವಿರುದ್ಧ ಪೊಲೀಸರು ಕ್ರಮ ಜರುಗಿಸತೊಡಗಿದ್ದಾರೆ. ಇದರ ನಡುವೆ ರಾಪಿಡೋ ಸಂಸ್ಥೆ ಬೆಂಗಳೂರು ರಾಜ್ಯದಲ್ಲಿ ನೀಡಲಾಗುತ್ತಿದ್ದ ಬೈಕ್ ಟ್ಯಾಕ್ಸಿ ಸೇವೆಯಿಂದ ಹಿಂದೆ ಸರಿಯುತ್ತಿರುವುದಾಗಿ ಪ್ರಕಟಿಸಿದೆ.
ಪ್ರಸ್ತುತ ನಡೆಯುತ್ತಿರುವ ಈ ಪ್ರಕರಣದಲ್ಲಿ ನಾವು ನೇರ ಪಕ್ಷಗಾರರಲ್ಲದಿದ್ದರೂ, ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಜವಾಬ್ದಾರಿಯುತ ಪಾಲುದಾರರಾಗಿ ನಾವು ಈ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಇದು ನಮ ಕ್ಯಾಪ್ಟನ್ಗಳಿಗೆ ಸವಾಲಿನ ಸಮಯವಾಗಿದೆ. ಅವರಲ್ಲಿ ಅನೇಕರು ಬೈಕ್ ಟ್ಯಾಕ್ಸಿಗಳನ್ನು ತಮ್ಮ ಪ್ರಮುಖ ಆದಾಯದ ಮೂಲವಾಗಿ ಅವಲಂಬಿಸಿದ್ದಾರೆ. ಕರ್ನಾಟಕದಾದ್ಯಂತ ಲಕ್ಷಾಂತರ ಪ್ರಯಾಣಿಕರಿಗೆ ಕೈಗೆಟುಕುವ, ಕೊನೆಯ ಮೈಲಿ ಸಂಪರ್ಕವನ್ನು ಒದಗಿಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದಾರೆ. ಆದರೆ ಕೋರ್ಟ್ ಆದೇಶ ಗೌರವಿಸಿ ನಾವು ಸೇವೆಯಿಂದ ಹಿಂದೆ ಸರಿಯುತ್ತಿದ್ದೇವೆ ಎಂದು ತಿಳಿಸಿದೆ.
ನಮ್ಮ ಬೈಕ್ ಕ್ಯಾಪ್ಟನ್ ಗಳು ಈ ಬೆಳವಣಿಗೆಯಿಂದ ಅಧೀರಾಗುವುದು ಬೇಡ ಸದ್ಯದಲ್ಲಿಯೇ ವಾಸ ವ್ಯವಸ್ಥೆಯೊಂದಿಗೆ ನಿಮ್ಮ ಮುಂದೆ ಬರುತ್ತೇವೆ ಎಂದು ಹೇಳಿದೆ. ಮತ್ತೊಂದೆಡೆ ಬೈಕ್ ಟ್ಯಾಕ್ಸಿ ವ್ಯವಸ್ಥೆಗೆ ಅಳವಡಿಸಿಕೊಂಡಿದ್ದ ಬೈಕ್ ಸುಮಾರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಓಡಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಹಲವರು ಬೈಕ್ ಟ್ಯಾಕ್ಸಿ ಸೇವೆ ಬಳಸುತ್ತಿದ್ದಾರೆ. ವಿದ್ಯಾರ್ಥಿಗಳು, ದಿನಗೂಲಿ ನೌಕರರು ಸೇರಿದಂತೆ ಅನೇಕರು ತಮಗೆ ಉದ್ಯೋಗ ಸಿಗದಿದ್ದಾಗ ಅಥವಾ ತಮ್ಮ ಬಿಡುವಿನ ಸಮಯದಲ್ಲಿ ಬೈಕ್ ಟ್ಯಾಕ್ಸಿ ಕೆಲಸ ಮಾಡುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕ ರೋಗದ ನಂತರ ಬೈಕ್ ಟ್ಯಾಕ್ಸಿಗಳಲ್ಲಿ ಕೆಲಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇನ್ನು ಬೈಕ್ ಟ್ಯಾಕ್ಸಿ ಬಳಕೆದಾರರ ಸಂಖ್ಯೆಯೂ ಹೆಚ್ಚಾಗಿದೆ. ಬಸ್, ಆಟೋ ಸೇವೆಗಳು ವಿರಳವಾಗಿರುವ ಅನೇಕ ಸ್ಥಳಗಳಲ್ಲಿ ಬೈಕ್ ಟ್ಯಾಕ್ಸಿ ಕಂಪನಿಗಳು ಸೇವೆ ಒದಗಿಸುತ್ತಿವೆ. ಆಟೋ, ಟ್ಯಾಕ್ಸಿಗಳಲ್ಲಿ ವಿಧಿಸುವ ಶುಲ್ಕಗಳಿಗಿಂತಲೂ ತುಸು ಕಡಿಮೆ ಹಾಗೂ ತ್ವರಿತವೆಂದು ಬೈಕ್ ಟ್ಯಾಕ್ಸಿ ಸೇವೆಯನ್ನ ಆಯ್ಕೆ ಮಾಡುವವರ ಸಂಖ್ಯೆ ಅಧಿಕವಾಗಿದೆ. ಈಗ ಬೈಕ್ ಟ್ಯಾಕ್ಸಿಗಳ ಸ್ಥಗಿತದಿಂದ ಅವರೆಲ್ಲರೂ ಸಹ ಸಂಕಷ್ಟಕ್ಕೆ ಸಿಲುಕಲಿದ್ದು ಇವರ ನೆರವಿಗೆ ಧಾವಿಸಬೇಕೆಂದು ಕೋರಿದ್ದಾರೆ.
Previous ArticleBlackmail ಪೂಜಾರಿ ಪೊಲೀಸ್ ಬಲೆಗೆ.
Next Article ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !