Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?
    ಸುದ್ದಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    vartha chakraBy vartha chakraಆಗಷ್ಟ್ 28, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಆ.28-
    ಅಸಹಜ ಸಾವುಗಳ ಪ್ರಕರಣದಿಂದ ಸುದ್ದಿಯಾಗಿರುವ ಧರ್ಮಸ್ಥಳದಲ್ಲಿ ತನ್ನ ಮಗಳು ಅನನ್ಯಾ ಭಟ್ ಅನುಮಾನಾಸ್ಪದವಾಗಿ ಕಾಣೆಯಾಗಿದ್ದು, ಬಹುಶಃ ಅವಳು ಸಾವಿಗೀಡಾಗಿರಬಹುದು ಇದಕ್ಕೆ ನ್ಯಾಯ ಕೊಡಿಸಿ ಎಂದು ಎಂದು ಹೇಳಿಕೊಂಡು ಬಂದಿದ್ದ ಸುಜಾತಾ ಭಟ್ ಇದೀಗ ಉಲ್ಟಾ ಹೊಡೆದಿದ್ದಾರೆ
    ಇಡೀ ದಿನ ಬೆಳ್ತಂಗಡಿಯ ಎಸ್‌ಐಟಿ ಮುಂದೆ ವಿಚಾರಣೆ ಎದುರಿಸಿದ್ದು, ಅಂದು ತಾನು ಹೇಳಿದ್ದೆಲ್ಲಾ ಕಪೋಲಕಲ್ಪಿತ,ದೂರು ಸಂಪೂರ್ಣ ಸುಳ್ಳು ಎಂದು ಒಪ್ಪಿಕೊಂಡಿದ್ದಾರೆ.
    ಅಷ್ಟೇ ಅಲ್ಲ ಈಗ ನನಗೆ ತಪ್ಪಿನ ಅರಿವಾಗಿದೆ ಹೀಗಾಗಿ ನಾನು ಕೊಟ್ಟ ದೂರು ವಾಪಸ್ ಪಡೆಯಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ ಎಂದು ಎಸ್ ಐಟಿ ಮೂಲಗಳಿಂದ ತಿಳಿದುಬಂದಿದೆ.
    ಕ್ಷಣಕ್ಕೊಂದು ಮಾತನಾಡುತ್ತ, ಒಂದೊಂದು ಮೀಡಿಯಾದ ಮುಂದೆ ಒಂದೊಂದು ಕಥೆ ಕಟ್ಟುತ್ತ ಇಡೀ ರಾಜ್ಯವನ್ನೇ ಗೊಂದಲಕ್ಕೆ ಬೀಳುವಂತೆ ಮಾಡಿದ್ದ ಸುಜಾತ ಭಟ್, ಇದೀಗ ಮತ್ತೊಂದು ಯಡವಟ್ಟಿಗೆ ಸಿದ್ಧವಾಗಿದ್ದಾರೆ.
    ತನ್ನ ಮಗಳು ಅನನ್ಯಾ ಭಟ್ ನಾಪತ್ತೆಯಾಗಿದ್ದಳು ಎಂದು ಆರೋಪ ಮಾಡಿರುವ ಸುಜಾತಾ ಭಟ್ ಪ್ರಕರಣ ಸಂಬಂಧ ಎಸ್‌ಐಟಿ ತನಿಖಾಧಿಕಾರಿ ಗುಣಪಾಲ್ ಅವರಿಂದ ಸತತ ವಿಚಾರಣೆ ಎದುರಿಸುತ್ತಿದ್ದಾರೆ. ಈ ವೇಳೆ ಸುಜಾತಾ ಭಟ್ ನಾನು ಅಂದುಕೊಂಡಿದ್ದೇ ಬೇರೆ, ಆಗಿದ್ದೇ ಬೇರೆ, ಈ ಪ್ರಾಯದಲ್ಲಿ ನನಗೆ ತನಿಖೆ ಎದುರಿಸೋಕೆ ಅಸಾಧ್ಯ. ನ್ಯಾಯ ಸಿಗೋಕೆ ಇಷ್ಟು ದಿನ ಹೋರಾಟ ನಡೆಸಿದೆ. ಇನ್ನು ನನಗೆ ಎದುರಿಸಲು ಶಕ್ತಿ ಇಲ್ಲ. ಕೇಸ್ ಹಿಂಪಡೆಯೋದಕ್ಕೂ ನಾನು ಸಿದ್ದ ಎಂದು ಹೇಳಿದ್ದಾರೆ ಎನ್ನಲಾಗಿದೆ.
    ಈ ಸಂದರ್ಭದಲ್ಲಿ ತನಿಖಾಧಿಕಾರಿ ಗುಣಪಾಲ್, ಸುಳ್ಳು ಹೇಳಿದ್ದರಿಂದ ಎದುರಿಸಬೇಕಾದ ಕಾನೂನಾತ್ಮಕ ಪರಿಣಾಮಗಳ ಬಗ್ಗೆ ಬಿಡಿಸಿ ಹೇಳಿದ್ದಾರೆ ಎಂದು ಹೇಳಲಾಗಿದೆ.
    2003ರಲ್ಲಿ ಧರ್ಮಸ್ಥಳದ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಣಿಪಾಲ್‌ನ ಕಸ್ತೂರಬಾ ವೈದ್ಯಕೀಯ ಕಾಲೇಜಿನ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದ ಅನನ್ಯ ಭಟ್ ಕಾಣೆಯಾಗಿದ್ದಾಳೆ ಎಂದು ಸುಜಾತ ಭಟ್ ಆರೋಪಿಸಿದ್ದರು.
    ಜುಲೈ 15, 2025ರಂದು ಸುಜಾತ ಭಟ್ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ, ಆಗಸ್ಟ್ 19, 2025 ರಂದು ರಾಜ್ಯದ ಡಿಜಿಪಿ ಎಂ.ಎ. ಸಲೀಂ ಅವರ ಆದೇಶದಂತೆ ಈ ಪ್ರಕರಣವನ್ನು ಎಸ್‌ಐಟಿಗೆ ವರ್ಗಾಯಿಸಲಾಯಿತು.
    ತನಿಖಾಧಿಕಾರಿ ಗುಣಪಾಲ ಅವರ ನೇತೃತ್ವದಲ್ಲಿ ಇದೀಗ ಬೆಳ್ತಂಗಡಿಯ ಎಸ್‌ಐಟಿ ಕಚೇರಿಯಲ್ಲಿ ವಿಚಾರಣೆ ನಡೆಯುತ್ತಿದೆ.
    ಆಗಸ್ಟ್ 26 ಹಾಗೂ 27ರಂದು ಸುಜಾತ ಭಟ್ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಆಗಮಿಸಿ, ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಈ ವೇಳೆ ತನಿಖಾಧಿಕಾರಿ ಗುಣಪಾಲ ಜೆ. ಅವರು ಸುಜಾತ ಭಟ್‌ರಿಂದ ಅನನ್ಯ ಭಟ್ ಅಸ್ತಿತ್ವಕ್ಕೆ ಸಂಬಂಧಿಸಿದ ದಾಖಲೆಗಳಾದ ಶಾಲಾ ದಾಖಲೆಗಳು, ಜನನ ಪ್ರಮಾಣಪತ್ರ, ಮತ್ತು ಕಾಲೇಜು ದಾಖಲಾತಿಗಳನ್ನು ಸಲ್ಲಿಸುವಂತೆ ಕೋರಿದ್ದರು

    Verbattle
    Verbattle
    Verbattle
    SIT ಕಾಲೇಜು ಧರ್ಮ ನ್ಯಾಯ ವಿದ್ಯಾ ವಿದ್ಯಾರ್ಥಿ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleBBMP ಕಠಿಣ ನಿರ್ಧಾರ
    Next Article ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    1 ಟಿಪ್ಪಣಿ

    1. JoshuaAborn on ಫೆಬ್ರವರಿ 12, 2026 5:03 ಅಪರಾಹ್ನ

      Валютный учет в 1С Бухгалтерия поддерживает переоценку остатков на валютных счетах и в кассе. Курсовая разница относится на прочие доходы или расходы. Счета-фактуры в у.е. также корректно обрабатываются, хотя законодательство стремится к расчетам исключительно в рублях. Ручная корректировка требуется редко, только при технических сбоях. buhgalteriya0.wordpress.com

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ramiroacity ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Glennhof ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • LinwoodGah ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.