Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುತ್ತಿಕೊಳ್ಳುತ್ತಿದೆ ಮುಡಾ ಹಗರಣದ ಉರುಳು.
    ಸುದ್ದಿ

    ಸುತ್ತಿಕೊಳ್ಳುತ್ತಿದೆ ಮುಡಾ ಹಗರಣದ ಉರುಳು.

    vartha chakraBy vartha chakraಸೆಪ್ಟೆಂಬರ್ 17, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.17-
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ಸಂಬಂಧ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬಂಧಿಸಿ ತೀವ್ರ ವಿಚಾರಣೆ ಕೈಗೊಂಡಿದ್ದಾರೆ. ಈ ವೇಳೆ ದಿನೇಶ್ ಕುಮಾರ್ ಅವರು ಹಲವಾರು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ.
    ಇಡಿ ಅಧಿಕಾರಿಗಳು ವಿಚಾರಣೆಯ ಸಮಯದಲ್ಲಿ ದಿನೇಶ್ ಕುಮಾರ್ ಅವರು ಆಯುಕ್ತರಾಗಿದ್ದ ಸಮಯದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ ಈ ದಾಖಲೆಗಳ ಮೂಲಕ ಸೈಟ್ ಗಳನ್ನು ಮರುಹಂಚಿಕೆ ಮಾಡಿರುವ ದಾಖಲೆಗಳನ್ನು ಮುಂದಿಟ್ಟಿದ್ದಾರೆ.
    ಈ ದಾಖಲೆಗಳನ್ನು ನೋಡುತ್ತಿದ್ದಂತೆ ಸುಸ್ತಾಗಿ ಕುಸಿದು ಕುಳಿತ ದಿನೇಶ್ ಕುಮಾರ್ ಅವರು ಕೆಲವು ನಿಮಿಷಗಳ ಕಾಲ ಏನನ್ನು ಮಾತನಾಡದೆ ಮೌನವಹಿಸಿದರು ಎಂದು ಇಡಿ ಮೂಲಗಳು ತಿಳಿಸಿವೆ.
    ನಂತರ ಸಾವರಿಸಿಕೊಂಡ ಅವರು, ಎಲ್ಲಾ ದಾಖಲೆಗಳನ್ನು ಮತ್ತೊಮ್ಮೆ ಓದಿ ಪರಿಶೀಲಿಸಿದರು. ಈ ರೀತಿಯ ದಾಖಲೆಗಳನ್ನು ಸೃಷ್ಟಿಸಲು ಉಂಟಾದ ಅನಿವಾರ್ಯತೆ ಮತ್ತು ಆದರ ಹಿಂದಿರುವ ಕೆಲವು ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಇದರಲ್ಲಿ ತಾವು ಯಾವುದೇ ತಪ್ಪು ಮಾಡಿಲ್ಲ ಉನ್ನತ ಮಟ್ಟದಲ್ಲಿರುವ ವ್ಯಕ್ತಿಗಳು ಒತ್ತಡ ತಂದ ಪರಿಣಾಮವಾಗಿ ಈ ರೀತಿಯ ನಿರ್ಧಾರ ಕೈಗೊಳ್ಳಬೇಕಾಯಿತು ಎಂದು ವಿವರಣೆ ನೀಡಿರುವುದಾಗಿ ಗೊತ್ತಾಗಿದೆ.
    ತಾವು ನಕಲಿ ದಾಖಲೆಗಳನ್ನು ಸೃಷ್ಟಿಸಿ ಮರುಹಂಚಿಕೆ ಆದೇಶ ಹೊರಡಿಸಲು ಅನಿವಾರ್ಯವಾದ ಕೆಲವು ವಿದ್ಯಮಾನಗಳ ಬಗ್ಗೆ ವಿವರಣೆ ಮಾತ್ರವಲ್ಲದೆ ಅದಕ್ಕೆ ಸಂಬಂಧಪಟ್ಟ ಕೆಲವು ದಾಖಲೆಗಳ ಕುರಿತಂತೆಯೂ ದಿನೇಶ್ ಕುಮಾರ್ ತನಿಖಾ ತಂಡಕ್ಕೆ ಮಾಹಿತಿ ನೀಡಿರುವುದಾಗಿ ತಿಳಿದು ಬಂದಿದೆ.
    ತಾವು ಪ್ರಾಧಿಕಾರದ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ದಿನದಿಂದ ಹಿಡಿದು ಆ ಹುದ್ದೆಯಿಂದ ನಿರ್ಗಮಿಸುವವರೆಗೆ ಯಾವ ರೀತಿಯ ಒತ್ತಡವನ್ನು ಎದುರಿಸಬೇಕಾಗಿತ್ತು. ಯಾರಲ್ಲ ತಮಗೆ ಕರೆ ಮಾಡಿ ಕೆಲಸ ಮಾಡುವಂತೆ ಹೇಳಿದರು ಎಂಬ ಕುರಿತು ಇಡೀ ಅಧಿಕಾರಿಗಳ ಮುಂದೆ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.
    ದಿನೇಶ್ ಕುಮಾರ್ ನೀಡಿರುವ ಎಲ್ಲ ಹೇಳಿಕೆಗಳನ್ನು ವಿಡಿಯೋ ಚಿತ್ರಣ ಮಾಡಿಕೊಂಡಿರುವ ಅಧಿಕಾರಿಗಳು ಅದರ ಆಧಾರದಲ್ಲಿ ಇನ್ನಷ್ಟು ದಾಖಲೆಗಳಿಗಾಗಿ ಹುಡುಕಾಟ ನಡೆಸಲು ತೀರ್ಮಾನಿಸಿದ್ದಾರೆ ಇದಕ್ಕಾಗಿ ಪ್ರತ್ಯೇಕ ತಂಡ ನಿಯೋಜಿಸುವ ತೀರ್ಮಾನ ಕೈಗೊಂಡಿದ್ದಾರೆ ಎಂದು ಇಡೀ ಮೂಲಗಳು ತಿಳಿಸಿವೆ.
    2022ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ.ದಿನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದರು. ದಿನೇಶ್ ಕುಮಾರ್ ವಿರುದ್ಧ ಮುಡಾದಲ್ಲಿ 50:50 ಅನುಪಾತದಡಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆ ಸರ್ಕಾರ ಅವರನ್ನು ವರ್ಗಾವಣೆ ಮಾಡಿತ್ತು. ಯಾವುದೇ ಸ್ಥಳ ತೋರಿಸದೇ ದಿನೇಶ್ ಕುಮಾರ್‌ ಅವರನ್ನು ವರ್ಗಾವಣೆ ಮಾಡಿದ್ದ ಸರ್ಕಾರ ನಂತರ ಹಾವೇರಿ ವಿವಿಯ ಕುಲಸಚಿವ ಹುದ್ದೆಯನ್ನು ನೀಡಿತ್ತು. ಕುಲಸಚಿವ ಹುದ್ದೆಯನ್ನು ನೀಡಿದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಸರ್ಕಾರ ಕೊನೆಗೆ ಆ ಆದೇಶವನ್ನೇ ರದ್ದು ಮಾಡಿತ್ತು.
    ಪರ್ಯಾಯ ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿದೆ ಎಂದು ಆರೋಪಿಸಲಾದ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಇಡಿ ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ದಿನೇಶ್ ಕುಮಾರ್ ಅವರಿಗೆ ಸೂಚನೆ ನೀಡಿತ್ತು.
    ಹಗರಣದ ಸಂಬಂಧ ವಿಚಾರಣೆಗೆ ಹಾಜರಾದ ದಿನೇಶ್‌ ಕುಮಾರ್‌ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
    ದಿನೇಶ್ ಅಕ್ರಮ ಹಣ ವರ್ಗಾವಣೆ ಮಾಡಿರುವ ಹಿನ್ನಲೆಯಲ್ಲಿ ಇಡಿ ವಿಚಾರಣೆಗೆ ಹಾಜರಾಗಲು  ನೋಟೀಸ್ ಜಾರಿಗೊಳಿಸಿತ್ತು.
    ನಕಲಿ ದಾಖಲೆಗಳನ್ನು ದಿನೇಶ್ ಸೃಷ್ಟಿ ಮಾಡಿ ಈ ದಾಖಲೆಗಳ ಮೂಲಕ ಸೈಟ್ ಗಳನ್ನು ಮರುಹಂಚಿಕೆ ಮಾಡಿ ಲಾಭ ಮಾಡಿದ್ದಾರೆ. ಹಣ ಪಡೆದು ಆಸ್ತಿ ಗಳಿಕೆ ಮಾಡಿರುವುದಕ್ಕೆ ದಾಖಲೆ ಪತ್ತೆಯಾಗಿದೆ ಎಂದು ಇಡಿ ಹೇಳಿದೆ.

    Bangalore Congress crime Government Karnataka News Politics Trending Varthachakra ಇಡಿ ಕಾಂಗ್ರೆಸ್ ಕಾನೂನು ಬೆಂಗಳೂರು ಮೈ ಮೈಸೂರು ರಾಜಕೀಯ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleದಿನೇಶ್ ಗುಂಡೂರಾವ್ ಗೆ ಲೋಕಾಯುಕ್ತ ನೋಟಿಸ್.
    Next Article ಸದಾನಂದ ಗೌಡರಿಗೆ ಸೈಬರ್ ವಂಚಕರ ಕಾಟ.
    vartha chakra
    • Website

    Related Posts

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಸೆಪ್ಟೆಂಬರ್ 18, 2025

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಕಾಮುಕ ಯೋಗಗುರು ಅರೆಸ್ಟ್.

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಇವರಿಗೆ ಬೆಂಗಳೂರು ಬೇಡವಂತೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prague-drugs-4 ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • prague-drugs-829 ರಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಈಶ್ವರಪ್ಪ.
    • prague-drugs-517 ರಲ್ಲಿ ಅಪರೂಪದ ಆಮೆ ರಕ್ಷಣೆಗೆ ಸಚಿವ ಖಂಡ್ರೆ ಸೂಚನೆ | Olivey Ridley Turtle
    Latest Kannada News

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಸೆಪ್ಟೆಂಬರ್ 18, 2025

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    9ನೇ ಕ್ಲಾಸ್ ವಿದ್ಯಾರ್ಥಿ ಬ್ಯಾಗಿನಲ್ಲಿ ಕಾಂಡೊಮ್, ಸಿಗರೇಟ್, ಆಲ್ಕೋಹಾಲ್ #varthachakra#medicalcheckup #parents
    Subscribe