Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂಧನ ಮಂತ್ರಿ ಕೆ.ಜೆ ಜಾರ್ಜ್ ಈಗ ನಿರಾಳ.
    ಕಾನೂನು

    ಇಂಧನ ಮಂತ್ರಿ ಕೆ.ಜೆ ಜಾರ್ಜ್ ಈಗ ನಿರಾಳ.

    vartha chakraBy vartha chakraಡಿಸೆಂಬರ್ 2, 2025Updated:ಡಿಸೆಂಬರ್ 2, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಸ್ಮಾರ್ಟ್ ಮೀಟರ್ ಯೋಜನೆಯೆಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ವಿಚಾರವಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಹೈಕೋರ್ಟ್ ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಯೋಜನೆಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿದೆ ಈ ಬಗ್ಗೆ ಲೋಕಾಯುಕ್ತ ತನಿಖೆಗೆ ಆದೇಶಿಸುವಂತೆ ಕೋರಿ ಬಿಜೆಪಿ ನಾಯಕರು ಸಲ್ಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದು ಪಡಿಸಿದೆ. ಅಷ್ಟೇ ಅಲ್ಲ ಖಾಸಗಿ ದೂರಿನ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ನೀಡಿದ ಆದೇಶವನ್ನು ಕೂಡ ವಜಾಗೊಳಿಸಿದೆ.

    ಸ್ಮಾರ್ಟ್ ಮೀಟರ್ ಯೋಜನೆಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿದೆ ಎಂದು ಆರೋಪಿಸಿದ ಬಿಜೆಪಿ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ ಶಾಸಕರಾದ ಎಸ್ ಆರ್ ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಅವರು ಖಾಸಗಿ ದೂರು ಸಲ್ಲಿಸಿದ್ದರು. ಸ್ಮಾರ್ಟ್ ಮೀಟರ್ ಟೆಂಡರ್ ಸುಮಾರ್ 10 ಸಾವಿರ ಕೋಟಿ ರೂಪಾಯಿ ಮೊತ್ತದ್ದಾಗಿರುವ ಕಾರಣ ಜಾಗತಿಕ ಟೆಂಡರ್ ಕರೆಯಬೇಕಿತ್ತು. ಆದರೆ ಕೇವಲ 354 ಕೋಟಿ ರೂ. ವ್ಯವಹಾರ ನಡೆಸುವ ರಾಜಶ್ರೀ ಎಲೆಕ್ಟ್ರಿಕಲ್ಸ್​​ಗೆ ಟೆಂಡರ್ ನೀಡಲಾಗಿದೆ. 10 ವರ್ಷಕ್ಕೆ 5296 ಕೋಟಿ ರೂಪಾಯಿಗೆ ನೀಡಲಾಗಿರುವ ಟೆಂಡರ್ ಅನ್ನು ಬೇಕೆಂದೇ 997 ಕೋಟಿ ರೂ. ಟೆಂಡರ್ ಎಂಬಂತೆ ಬಿಂಬಿಸಲಾಗಿದೆ.

    ಬೆಸ್ಕಾಂ ವ್ಯಾಪ್ತಿಗೆ ಮಾತ್ರ ಈ ಟೆಂಡರ್ ಅನ್ವಯವಾದರೂ ಇತರೆ ಎಸ್ಕಾಂಗಳಿಗೂ ಇದೇ ಸ್ಮಾರ್ಟ್ ಮೀಟರ್ ಖರೀದಿಸಿರುವಂತೆ ಸೂಚಿಸಲಾಗಿದೆ. ಇದು ಸಂಪೂರ್ಣ ಕಾನೂನು ಬಾಹಿರ. ಕೇಂದ್ರದ ಆರ್‌ಡಿಎಸ್‌ಎಸ್‌ ಯೋಜನೆಯಡಿ 900 ರೂ.ಗೆ ಸಿಗುವ ಮೀಟರ್ ಅನ್ನು 5 ಸಾವಿರದಿಂದ 8,800 ರೂಪಾಯಿಗಳಿಗೆ ಗ್ರಾಹಕರು ಖರೀದಿಸಬೇಕಾಗಿದೆ. ಇದಕ್ಕೆ ಇದಕ್ಕೆಲ್ಲಾ ಬೆಸ್ಕಾಂ ಅಧ್ಯಕ್ಷ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರೆ ಅಧಿಕಾರಿಗಳೇ ಹೊಣೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದರು.

    ಈ ಸಂಬಂಧ ಇವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆರೋಪದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರಿಗೆ ಸೂಚನೆ ನೀಡಿತ್ತು. ಇದನ್ನು ಪ್ರಶ್ನಿಸಿ ಕೆಜೆ ಜಾರ್ಜ್ ಅವರು ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು ಎಂಐ ಅರುಣ್ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶವನ್ನು ವಜಾಗೊಳಿಸಿದ್ದಾರೆ.

    ಕಾನೂನು ನ್ಯಾಯ ಬಿಜೆಪಿ ಬೆಂಗಳೂರು ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಶವವನ್ನೇ ಮದುವೆಯಾದ ಯುವತಿ; ಮಹಾರಾಷ್ಟ್ರದಲ್ಲೊಂದು ಮನಕಲಕುವ ಘಟನೆ
    Next Article ಸುಪ್ರೀಂ ಕೋರ್ಟ್ ನಲ್ಲಿ ಯಡಿಯೂರಪ್ಪ ಅವರಿಗೆ ರಿಲೀಫ್.
    vartha chakra
    • Website

    Related Posts

    ಡಿಸಿಎಂ ಸದಾಶಿವ ನಗರ ನಿವಾಸದಲ್ಲಿ ಸಿಎಂ – ಡಿಸಿಎಂ ಉಪಾಹಾರ ಸಭೆ

    ಡಿಸೆಂಬರ್ 2, 2025

    ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ.

    ಡಿಸೆಂಬರ್ 2, 2025

    ಸ್ಮಾರ್ಟ್‌ ಫೋನ್‌ಗಳಿಗೆ ಸಂಚಾರ್ ಸಾಥಿ ಆ್ಯಪ್ ಕಡ್ಡಾಯ!

    ಡಿಸೆಂಬರ್ 2, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನ ಸುಮ್ಮನಿದ್ದಾಗ ಏನಾದ್ರೂ ಮಾಡಬೇಕು ಅಂದ್ರೆ ಏನ್ ಮಾಡ್ತಾರೆ?

    ಡಿಸಿಎಂ ಸದಾಶಿವ ನಗರ ನಿವಾಸದಲ್ಲಿ ಸಿಎಂ – ಡಿಸಿಎಂ ಉಪಾಹಾರ ಸಭೆ

    ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ.

    ಸ್ಮಾರ್ಟ್‌ ಫೋನ್‌ಗಳಿಗೆ ಸಂಚಾರ್ ಸಾಥಿ ಆ್ಯಪ್ ಕಡ್ಡಾಯ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • filler kypit_arMa ರಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು.
    • filler kypit_lzMa ರಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು.
    • filler kypit_dnMa ರಲ್ಲಿ ಶಾಸಕರ ಹೆಸರಲ್ಲಿ ಪೋರ್ಜರಿ ಸಹಿ.
    Latest Kannada News

    ಜನ ಸುಮ್ಮನಿದ್ದಾಗ ಏನಾದ್ರೂ ಮಾಡಬೇಕು ಅಂದ್ರೆ ಏನ್ ಮಾಡ್ತಾರೆ?

    ಡಿಸೆಂಬರ್ 2, 2025

    ಡಿಸಿಎಂ ಸದಾಶಿವ ನಗರ ನಿವಾಸದಲ್ಲಿ ಸಿಎಂ – ಡಿಸಿಎಂ ಉಪಾಹಾರ ಸಭೆ

    ಡಿಸೆಂಬರ್ 2, 2025

    ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ.

    ಡಿಸೆಂಬರ್ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಲಾಟರಿ ಗೆದ್ದು 5 ಮದ್ವೆ ಆದ 'ಲೇಡಿ' ಕಣ್ಣೀರ ಕಥೆ!
    Subscribe