Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಣವೀರ್ ಸಿಂಗ್ ವಿರುದ್ಧ ಎಫ್ಐಆರ್
    ಮನರಂಜನೆ

    ರಣವೀರ್ ಸಿಂಗ್ ವಿರುದ್ಧ ಎಫ್ಐಆರ್

    vartha chakraBy vartha chakraಜನವರಿ 29, 2026Updated:ಜನವರಿ 29, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಾಲಿವುಡ್ ನಟ ರಣವೀರ್‌ ಸಿಂಗ್‌ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
    ಇತ್ತೀಚೆಗೆ ಗೋವಾದಲ್ಲಿ ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ರಿಷಬ್‌ ಶೆಟ್ಟಿ ಅವರ ಸೂಪರ್ ಹಿಟ್ ಸಿನಿಮಾ ಕಾಂತಾರ-1 ಚಿತ್ರದ ದೈವ ಆಚರಣೆಯ ಅನುಕರಣೆ ಮೂಲಕ ಅವಹೇಳನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ರಣವೀರ್‌ ಸಿಂಗ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.
    ನಟ ರಣವೀರ್‌ ಸಿಂಗ್‌ ತಮ್ಮ ಆರಾಧ್ಯ ದೈವದ ಅನುಕರಣೆ ಮಾಡಿ ಅಪಮಾನ ಮಾಡಿದ್ದಾರೆ ಇದರಿಂದ ನಮ್ಮ ನಂಬಿಕೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಲಾಗಿತ್ತು. ಕರಾವಳಿ ಕರ್ನಾಟಕದ ಚಾವುಂಡಿ ದೈವ ಸಂಪ್ರದಾಯವನ್ನು ಅವಹೇಳನ ಮಾಡುವ ಮತ್ತು ಹಿಂದೂ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆಗಳು ಮತ್ತು ಸನ್ನೆಗಳನ್ನು ನಟ ಮಾಡಿದ್ದಾರೆ‌ ಎಂದು ವಕೀಲ ಪ್ರಶಾಂತ್‌ ಮೆಥಲ್‌ ಅವರು ದೂರು ದಾಖಲಿಸಿದ್ದರು.
    ನ್ಯಾಯಾಲಯದ ನಿರ್ದೇಶನದ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್‌‍ ಠಾಣೆಯಲ್ಲಿ ಔಪಚಾರಿಕ ದೂರು ದಾಖಲಿಸಲಾಗಿತ್ತು.‌ಆದರೆ, ಪೊಲೀಸರು ಈ ಬಗ್ಗೆ ಎಫ್ಐಆರ್ ದಾಖಲಿಸಿರಲಿಲ್ಲ.
    ಈ ಹಿನ್ನೆಲೆಯಲ್ಲಿ ಕೋರ್ಟ್ ಮೊರೆ ಹೋಗಿದ್ದ ದೂರುದಾರರು ಬೆಂಗಳೂರಿನ 1 ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌ (ಸಿಎಂಎಂ) ನ್ಯಾಯಾಲಯಲ್ಲಿ ಪ್ರಕರಣ ದಾಖಲಿಸಿದ್ದರು.
    ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ರಣವೀರ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲು ಮಾಡಲು ಆದೇಶಿಸಿದೆ.ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್‌‍) ಸೆಕ್ಷನ್‌ 196, 299 ಮತ್ತು 302 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
    ಕಳೆದ ನವೆಂಬರ್‌ 28, 2025 ರಂದು ಗೋವಾದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆದಿತ್ತು.
    ಈ ಕಾರ್ಯಕ್ರಮದ ನಿರ್ವಹಣೆಯನ್ನು ರಣವೀರ್ ಸಿಂಗ್ ನೆರವೇರಿಸಿದ್ದರು. ಈ ವೇಳೆ ಕಾಂತಾರ ಸಿನಿಮಾದಲ್ಲಿನ ಅಭಿನಯಕ್ಕಾಗಿ ಅಭಿನಯಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದ ರಿಷಬ್‌ ಶೆಟ್ಟಿ ಬಗ್ಗೆ ಮಾತನಾಡಿದ್ದರು. ಕಾಂತಾರದ ಬಗ್ಗೆ ವಿವರಿಸುವಾಗ ದೈವವನ್ನು ದೆವ್ವ ಅಂತಲೇ ಹೇಳಿದ್ದರು. ಈ ಸಮಯದಲ್ಲಿ ಬಾಲಿವುಡ್‌ನ ದಿಗ್ಗಜರು ಇದ್ದರು. ರಿಷಬ್‌ ಶೆಟ್ಟಿ ಕೂಡ ಅಲ್ಲೇ ಎದುರು ಕುಳಿತಿದ್ದರು. ಇವರೆಲ್ಲರ ಸಮುಖದಲ್ಲಿಯೇ ರಣವೀರ್‌ ಸಿಂಗ್‌ ಮನಸೋ ಇಚ್ಛೆ ಮಾತನಾಡಿದ್ದರು.
    ದೈವಗಳನ್ನು ಫೀಮೇಲ್‌ ಗೋಸ್ಟ್‌ (ಹೆಣ್ಣು ಪ್ರೇತ) ಎಂದು ಸಂಭೋಧಿಸಿದ್ದ ನಟ ರಣವೀರ್‌ ಸಿಂಗ್‌ ಅವರು ಗುಳಿಗ ದೈವ, ಚಾಮುಂಡೇಶ್ವರಿ ಬಗ್ಗೆ ಅಣಕ ಮಾಡಿದ್ದರು.
    ರಣವೀರ್ ಸಿಂಗ್ ಅವರ ಈ ವರ್ತನೆಯ ಬಗ್ಗೆ ಅನೇಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟಿಕೆ ಕೂಡ ಕೇಳಿಬಂದಿತ್ತು. ಇದರಿಂದ ಎಚ್ಚೆತ್ತುಕೊಂಡ ರಣವೀರ್ ಸಿಂಗ್ ತಮ್ಮ ವರ್ತನೆಗಾಗಿ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಯಾಚನೆ ಮಾಡಿದ್ದರು.
    ತಾವು ಯಾರನ್ನು ಅಪಮಾನ ಗೊಳಿಸುವ ಅಥವಾ ದುರುದ್ದೇಶ ಪೂರ್ವಕವಾಗಿ ಈ ರೀತಿ ಮಾಡಿರಲಿಲ್ಲ ಕಾಂತಾರ ಚಿತ್ರದಲ್ಲಿರುವ ರಿಷಬ್‌ ಶೆಟ್ಟಿ ಅವರ ಅದ್ಭುತ ಅಭಿನಯವನ್ನು ಹೈಲೈಟ್‌ ಮಾಡುವುದೇ ಆಗಿತ್ತು. ಇಂತಹ ಒಂದು ದೃಶ್ಯವನ್ನು ಮಾಡಲು ಅದೆಷ್ಟು ಕಷ್ಟ ಎನ್ನುವುದು ನನಗೆ ಗೊತ್ತಿದೆ. ಅದು ನನಗೆ ತುಂಬಾನೆ ಇಷ್ಟ ಆಯಿತು. ಅದನ್ನು ಅನುಕರಣೆ ಮಾಡುವ ಪ್ರಯತ್ನ ಮಾಡಿದ್ದೇನೆ ಎಂದು ವಿವಾದವನ್ನು ಸುಖಾಂತ್ಯಗೊಳಿಸುವ ಪ್ರಯತ್ನ ಮಾಡಿದ್ದರು.
    ಆದರೆ ಇದನ್ನು ಅರ್ಜಿದಾರರು ಒಪ್ಪಿಲ್ಲ, ರಣವೀರ್‌ ದುರುದ್ದೇಶದಿಂದ ಪವಿತ್ರ ದೈವ ಸಂಪ್ರದಾಯಗಳನ್ನು ಅಸಭ್ಯ, ಹಾಸ್ಯಮಯ ಮತ್ತು ಅವಹೇಳನಕಾರಿ ರೀತಿಯಲ್ಲಿ ಚಿತ್ರಿಸುವ ಅಣಕ ವೇದಿಕೆ ಪ್ರದರ್ಶನದಲ್ಲಿ ತೊಡಗಿದ್ದರು ಎಂದು ಆರೋಪಿಸಿದ್ದಾರೆ. ಈ ದೂರಿನಲ್ಲಿ ರಣವೀರ್‌ ನಟನೆಯ ಸಮಯದಲ್ಲಿ ಪಂಜುರ್ಲಿ ಮತ್ತು ಗುಲಿಗ ದೈವಕ್ಕೆ ಸಂಬಂಧಿಸಿದ ಅಭಿವ್ಯಕ್ತಿಗಳನ್ನು ಅನುಕರಿಸಿದ್ದಾರೆ ಎಂದು ನಿರ್ದಿಷ್ಟವಾಗಿ ಉಲ್ಲೇಖಿಸಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ಚಲನಚಿತ್ರ ಧಾರ್ಮಿಕ ನ್ಯಾಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರದ ವಿರುದ್ಧ ಗುತ್ತಿಗೆದಾರರ ಸಮರ.
    Next Article ಗುತ್ತಿಗೆದಾರರಿಗೆ ಬೈರತಿ ಸುರೇಶ್ ತಿರುಗೇಟು
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Walterfak ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • ShawnShows ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Marcusreomb ರಲ್ಲಿ ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.