ಬೆಂಗಳೂರು,
ಅಧಿಕಾರ ಹಂಚಿಕೆ ಕುರಿತಾಗಿ ರಾಜ್ಯ ಕಾಂಗ್ರೆಸ್ ನಲ್ಲಿ ಉಂಟಾಗಿರುವ ಬೆಳವಣಿಗೆಗಳಿಗೆ ಅಂತ್ಯ ಹಾಡಲು ತೀರ್ಮಾನಿಸಿರುವ ಹೈಕಮಾಂಡ್ ಇದಕ್ಕಾಗಿ ಕೇಂದ್ರದ ಮಾಜಿ ಸಚಿವರು ಆಗಿರುವ ಕಾಂಗ್ರೆಸ್ ನಾಯಕ ಹಾಗೂ ವಕೀಲ ಅವರ ಮೊರೆ ಹೋಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರಲು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ರಮ ಹಾಕಿದ ಡಿಕೆ ಶಿವಕುಮಾರ್ ಅವರು ಇದೀಗ ಉಪಮುಖ್ಯಮಂತ್ರಿ ಯಾಗಿದ್ದು ಅಧಿಕಾರ ಹಸ್ತಾಂತರಕ್ಕೆ ಪಟ್ಟು ಹಿಡಿದಿದ್ದಾರೆ. ಸರ್ಕಾರ ರಚನೆಯ ಸಮಯದಲ್ಲಿ ಆದ ಒಪ್ಪಂದದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಹಸ್ತಾಂತರಿಸಲು ಸೂಚಿಸಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ ಎರಡುವರೆ ವರ್ಷಗಳ ಅಧಿಕಾರ ಅವಧಿ ಪೂರ್ಣಗೊಳಿಸಿದ್ದಾರೆ. ಆದರೂ ಅವರು ಅಧಿಕಾರ ಹಸ್ತಾಂತರಿಸಲು ಮನಸ್ಸು ತೋರುತ್ತಿಲ್ಲ ಎಂದು ಹೈಕಮಾಂಡ್ ಮುಂದೆ ಅಳಲು ತೋಡಿಕೊಂಡಿರುವ ಶಿವಕುಮಾರ್, ಒಪ್ಪಂದದಂತೆ ತಮಗೆ ಅಧಿಕಾರ ಹಸ್ತಾಂತರಿಸಲು ಸಿದ್ದರಾಮಯ್ಯ ಅವರಿಗೆ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.
ಈ ನಡುವೆ ಹೈಕಮಾಂಡ್ ಹಿಂದುಳಿದ ವರ್ಗಗಳ ಪ್ರಭಾವಿ ನಾಯಕ ಎನಿಸಿರುವ ಸಿದ್ದರಾಮಯ್ಯ ಅವರ ವಿರುದ್ಧ ಯಾವುದೇ ಗಂಭೀರ ಸ್ವರೂಪದ ಆರೋಪಗಳು ಇಲ್ಲ ಯಾವ ಕಾರಣ ನೀಡಿ ಅವರನ್ನು ಅಧಿಕಾರ ಹಸ್ತಾಂತರಸಲು ಸೂಚಿಸಬೇಕು ಎಂಬ ಒತ್ತಡದಲ್ಲಿ ಹೈಕಮಾಂಡ್ ಇದೆ.
ಈ ನಡುವೆ ಹೈಕಮಾಂಡ್ ಮೇಲೆ ಒತ್ತಡ ಹೇಳುವ ದೃಷ್ಟಿಯಿಂದ ಶಾಸಕರ ಬೆಂಬಲ ಕ್ರೋಡೀಕರಣಕ್ಕೆ ಮುಂದಾಗಿರುವ ಶಿವಕುಮಾರ್ ಭೋಜನ ಕೂಟದ ಶಾಸಕರ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ ಹಲವು ಮಂದಿ ಶಾಸಕರು ಪ್ರಬಲವಾಗಿ ಶಿವಕುಮಾರ್ ಜೊತೆ ಗುರುತಿಸಿಕೊಂಡಿದ್ದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಮುಂದಾಗಿದ್ದಾರೆ.
ಈ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸಬಾರದು ಎಂದು ಅವರ ಬಣದಲ್ಲಿಯೂ ಗುರುತಿಸಿಕೊಂಡಿರುವ ಶಾಲಾ ಕೆಲವು ಶಾಸಕರು ಹೈಕಮಾಂಡ್ ಮೇಲೆ ಒತ್ತಡ ಏರುತ್ತಿದ್ದಾರೆ.
ಆದರೆ ಯಾವುದೇ ಬಣದಲ್ಲಿ ಗುರುತಿಸಿಕೊಳ್ಳದೆ ತಟಸ್ಥವಾಗಿರುವ ಶಾಸಕರ ಸಂಖ್ಯೆ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಇದೆ ಹೈಕಮಾಂಡ್ ಇದೀಗ ಅಧಿಕಾರ ಹಸ್ತಾಂತರ ಬಿಕ್ಕಟಿನ ಕುರಿತಾಗಿ ಯಾವುದೇ ಬಣದಲ್ಲಿ ಗುರುತಿಸಿಕೊಳ್ಳದ ತಟಸ್ಥ ಶಾಸಕರ ಅಭಿಪ್ರಾಯ ಕೋರಲು ಮುಂದಾಗಿದೆ.
ತೆರೆಮರೆಯಲ್ಲಿ ಹೈಕಮಾಂಡ್ ನಾಯಕರು ತಟಸ್ಥ ಬಣಧ ಪ್ರತಿಯೊಬ್ಬ ಶಾಸಕರನ್ನು ಸಂಪರ್ಕಿಸಿದ್ದು ಈ ಬಗ್ಗೆ ಅಭಿಪ್ರಾಯ ಕೇಳಿದ್ದಾರೆ.ಈ ಎಲ್ಲಾ ಶಾಸಕರು ಸಿಎಂ ಬದಲಾವಣೆಯ ಪರವಾಗಿದ್ದಾರೆ, ಆದರೆ 2028 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಇಮೇಜ್ಗೆ ಧಕ್ಕೆ ತರದಂತೆ ಮತ್ತು ಭವಿಷ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರದ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳಬೇಕೆಂದು ಬಯಸಿರುವುದಾಗಿ ಹೇಳಿದ್ದಾರೆ.
ಚುನಾವಣೆಯ ಸಮಯದಲ್ಲಿ ಡಿಕೆ ಶಿವಕುಮಾರ್ ಉನ್ನತ ಹುದ್ದೆಯಲ್ಲಿ ಇದ್ದರೆ ಪಕ್ಷಕ್ಕೆ ಅನುಕೂಲವಾಗಲಿದೆ ಚುನಾವಣೆ ಎದುರಿಸಲು ಅವರು ಎಲ್ಲ ರೀತಿಯಲ್ಲೂ ಸಹಕಾರ ಮಾಡಲಿದ್ದಾರೆ ಅಷ್ಟೇ ಅಲ್ಲ ಪಕ್ಷ ಸಂಘಟನೆಗೆ ಶಿವಕುಮಾರ್ ಕೊಡುವಷ್ಟು ಒತ್ತನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡುವುದಿಲ್ಲ ಸಿದ್ದರಾಮಯ್ಯ ಅವರು ಉತ್ತಮ ಆಡಳಿತಗಾರ ಹಾಗೂ ಜನಪ್ರಿಯ ನಾಯಕ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ ಆದರೆ ಪಕ್ಷ ಸಂಘಟನೆಯ ವಿಷಯದಲ್ಲಿ ಅವರು ಶಿವಕುಮಾರ್ ತೋರಿಸಿದಷ್ಟು ಆಸಕ್ತಿಯನ್ನು ತೋರಿಸುವುದಿಲ್ಲ ಹೀಗಾಗಿ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರೆ ಪಕ್ಷ ಮತ್ತು ಸರ್ಕಾರ ಪ್ರಬಲವಾಗಲಿದೆ ಚುನಾವಣೆ ಎದುರಿಸಲು ಅನುಕೂಲವಾಗಲಿದೆ ಆದರೆ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಎನ್ನುವುದು ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದೆ ಪರಸ್ಪರ ಸಮ್ಮತಿಯೊಂದಿಗೆ ನಡೆಯಬೇಕು ಎಂಬ ಅಭಿಪ್ರಾಯ ನೀಡಿದ್ದಾರೆ.
ಅಲ್ಲದೆ ಶಿವಕುಮಾರ್ ಅವರ ವಿರುದ್ಧ ಇರುವ ಹಲವು ಪ್ರಕರಣಗಳು ಪಕ್ಷ ಮತ್ತು ಸರ್ಕಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಕೇಂದ್ರದ ಆಡಳಿತರೂಢ ಬಿಜೆಪಿ ಸರ್ಕಾರ ಈ ವಿಷಯವಾಗಿ ಶಿವಕುಮಾರ್ ಅವರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬಹುದು ಹೀಗಾಗಿ ಹೈಕಮಾಂಡ್ ಎಚ್ಚರಿಕೆಯ ನಡೆಯಿಡಬೇಕು ಎಂದು ಈ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿ ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿ ಇದೀಗ ಕಾಂಗ್ರೆಸ್ ಹೈಕಮಾಂಡ್
ಶಿವಕುಮಾರ್ ಮುಖ್ಯಮಂತ್ರಿಯಾದರೆ ಮುಂದೆ ಎದುರಾಗುವ ಕಾನೂನು ತೊಡಕುಗಳ ಬಗ್ಗೆ ಎಐಸಿಸಿ ಕಾನೂನು ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದೆ. ಅಕ್ರಮ ಆಸ್ತಿ ಪ್ರಕರಣ ಸೇರಿದಂತೆ ಶಿವಕುಮಾರ್ ವಿರುದ್ಧ ಬಾಕಿ ಇರುವ ಕೆಲವು ಪ್ರಕರಣಗಳನ್ನು ನಿರ್ವಹಿಸುತ್ತಿರುವ ಸುಪ್ರೀಂ ಕೋರ್ಟ್ ವಕೀಲ ಕಪಿಲ್ ಸಿಬಲ್ ಶೀಘ್ರವೇ ಎಐಸಿಸಿಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಕಪಿಲ್ ಸಿಬಲ್ ಅವರು ಈ ಕುರಿತಾಗಿ ನೀಡುವ ವರದಿಯನ್ನು ಆಧರಿಸಿ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

