ಬೆಂಗಳೂರು.
ಕೇಂದ್ರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಏಕ ಬಳಕೆ ಪ್ಲಾಸ್ಟಿಕ್ ಮೇಲೆ ಮಹಾನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಸಮರ ಘೋಷಣೆ ಮಾಡಿದ್ದಾರೆ.
ಪಾಲಿಕೆಯ ಅಧಿಕಾರಿಗಳು ಮತ್ತು ಮಾರ್ಷಲ್ ಗಳು ಏಕ ಬಳಕೆ ಪ್ಲಾಸ್ಟಿಕ್ ಮೇಲೆ ನಿಗಾ ವಹಿಸಬೇಕು ಇದನ್ನು ಮಾರಾಟ ಮಾಡುವವರು ಮತ್ತು ಬಳಸುವವರು ಮಾತ್ರವಲ್ಲದೆ ತಯಾರಿಸುವವರ ವಿರುದ್ಧವು ಕ್ರಮ ಕೈಗೊಳ್ಳಬೇಕು ಎಂದು ಕಟ್ಟು ನಿಟ್ಟಿನ ಸೂಚನೆಯನ್ನು ನೀಡಿದ್ದಾರೆ.
ಅದರಂತೆ ಕ್ರಮಕೈಗೊಂಡಿರುವ ಅಧಿಕಾರಿಗಳು ಏಕಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಹಾಗೂ ಬಳಕೆ ಮತ್ತು ಘನ ತ್ಯಾಜ್ಯ ನಿರ್ವಹಣೆ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಒಟ್ಟು 11,694 ಪ್ರಕರಣಗಳಲ್ಲಿ ರೂ.78.50 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದ್ದಾರೆ.
ಸೆಪ್ಟೆಂಬರ್ 2025ರಿಂದ ಇದುವರೆಗೆ ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಬಳಕೆ ಮಾಡಿದ ಅಂಗಡಿ ಮುಂಗಟ್ಟುಗಳು ಹಾಗೂ ವ್ಯಾಪಾರಸ್ಥರ ವಿರುದ್ಧ ಕ್ರಮ ಕೈಗೊಂಡಿದ್ದು, 7,047 ಪ್ರಕರಣಗಳಲ್ಲಿ ರೂ.54.69 ಲಕ್ಷ ದಂಡ ವಿಧಿಸಲಾಗಿದೆ.ಇದೇ ವೇಳೆ ಘನ ತ್ಯಾಜ್ಯ ನಿರ್ವಹಣೆ ನಿಯಮ ಉಲ್ಲಂಘಿಸಿದ 4,647 ಪ್ರಕರಣಗಳಲ್ಲಿ ರೂ.30.64 ಲಕ್ಷ ದಂಡ ವಸೂಲಿ ಮಾಡಲಾಗಿದೆ.
ನಗರ ನೈರ್ಮಲ್ಯ ಕಾಪಾಡುವುದು ನಗರ ಪಾಲಿಕೆಯ ಜವಾಬ್ದಾರಿಯಾಗಿದ್ದರೂ, ಸಾರ್ವಜನಿಕರು, ಹೋಟೆಲ್ಗಳು, ವ್ಯಾಪಾರಸ್ಥರು ಹಾಗೂ ಬಲ್್ಕ ತ್ಯಾಜ್ಯ ಉತ್ಪಾದಕರು ತ್ಯಾಜ್ಯವನ್ನು ವಿಂಗಡಣೆ ಮಾಡದೇ ರಸ್ತೆ ಬದಿ ಎಲ್ಲೆಂದರಲ್ಲಿ ಎಸೆಯುತ್ತಿರುವುದು ಕಂಡುಬರುತ್ತಿದೆ. ಇದರಿಂದ ನಗರದಲ್ಲಿ ಬ್ಲ್ಯಾಕ್ ಸ್ಪಾಟ್ಗಳು ನಿರ್ಮಾಣವಾಗಿ ಸ್ವಚ್ಛತೆ ಹಾಗೂ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ.
ಈ ಹಿನ್ನೆಲೆಯಲ್ಲಿ ತ್ಯಾಜ್ಯ ನಿರ್ವಹಣೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೂಲಕ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ದಂಡ ವಿಧಿಸುವುದರ ಜೊತೆಗೆ ಎಚ್ಚರಿಕೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಸಾರ್ವಜನಿಕರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೇ ಮನೆಗಳಿಗೆ ಬರುವ ಆಟೋ ಟಿಪ್ಪರ್ಗಳಿಗೆ ಒಣ ಮತ್ತು ತೇವ ತ್ಯಾಜ್ಯವನ್ನು ವಿಂಗಡಣೆ ಮಾಡಿ ನೀಡುವಂತೆ ಮನವಿ ಮಾಡಲಾಗಿದೆ.

