ಬೆಂಗಳೂರು,ಮೇ28- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮಗೆ ಅವಕಾಶ ಬೇಡ ಎಂದು ಮಾಜಿ ಶಾಸಕ ನಿರ್ಮಲ್ ಕುಮಾರ್ ಮನವಿ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಎರಡು ದಿನ ಬಾಕಿ ಇರುವಾಗ ತಮಗೆ ಟಿಕೆಟ್ ಬೇಡ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ನಿರ್ಮಲಕುಮಾರ್ ಸುರಾನ ಅವರನ್ನು ರಾಜ್ಯಸಭೆಯ ಅಭ್ಯರ್ಥಿಯನ್ನಾಗಿ ಪರಿಗಣಿಸುವಂತೆ ಶಿಫಾರಸ್ಸು ಮಾಡಿ ಕಳುಹಿಸಲಾಗಿತ್ತು.
ಆದರೆ ಪಕ್ಷದಲ್ಲಿ ತಮಗೆ ಹೆಚ್ಚಿನ ಜವಾಬ್ದಾರಿ ಇರುವುದರಿಂದ ಕೆಲಸದ ಒತ್ತಡ ಹೆಚ್ಚಾಗುತ್ತದೆ ಎಂಬ ಕಾರಣಕ್ಕೆ ತಮಗೆ ರಾಜ್ಯಸಭೆಯ ಟಿಕೆಟ್ ಬೇಡ ಎಂದು ನಿರ್ಮಲ್ಕುಮಾರ್ ಸುರಾನ ತಿಳಿಸಿದ್ದಾರೆ.