ಬೆಂಗಳೂರು,ಜೂ.2-ವಿದ್ಯಾರ್ಥಿಗಳನ್ನು ಕರೆತರಲು ಹೋಗುತ್ತಿದ್ದ ಶಾಲಾ ಬಸ್ಹ ಳ್ಳಕ್ಕೆ ಬಿದ್ದು ಚಾಲಕ ಗಂಭೀರ ಗಾಯಗೊಂಡ ಘಟನೆ ಇಂದು ಬೆಳಗ್ಗೆ ಬೊಮ್ಮನಹಳ್ಳಿ ಸಮೀಪದ ಕೂಡ್ಲು ಬಳಿ ನಡೆದಿದೆ.
ಗಾಯಗೊಂಡ ಚಾಲಕನನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆತನ ಸ್ಥಿತಿ ಗಂಭೀರವಾಗಿದೆ.
ಹೆಚ್ಎಸ್ಆರ್ ಲೇಔಟ್ನ ಫ್ರೀಡಂ ಇಂಟರ್ನ್ಯಾಷನಲ್ ಸ್ಕೂಲ್ಗೆ ಸೇರಿದ ಬಸ್, ಬೆಳಗ್ಗೆ ವಿದ್ಯಾರ್ಥಿಗಳನ್ನು ಕರೆತರಲು ಹೋಗಿತ್ತು. ಈ ವೇಳೆ ಕೂಡ್ಲು ಬಳಿ ಇದ್ದ ಬಂಡೆ ಹಳ್ಳಕ್ಕೆ ಶಾಲಾ ಬಸ್ ಬಿದ್ದಿದೆ.
ಅದೃಷ್ಟವಶಾತ್ ಘಟನೆ ವೇಳೆ ಬಸ್ನಲ್ಲಿ ಮಕ್ಕಳು ಇರಲಿಲ್ಲ. ಆದರೆ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೂಡ್ಲು ಬಳಿಯ ರಸ್ತೆ ಪಕ್ಕ ಇರುವ ಬಂಡೆ ಹಳ್ಳ 100 ಅಡಿಗೂ ಹೆಚ್ಚು ಆಳವಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಹಳ್ಳವನ್ನು ಮುಚ್ಚಿಸಲು ಸ್ಥಳೀಯರು ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದರು. ಆದರೂ ಯಾವುದೇ ಪ್ರಯೋಜನವಾಗಿರದ ಕಾರಣ ಇದೀಗ ಅಪಘಾತದಿಂದಾಗಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Previous Articleಲಂಚಕ್ಕೆ ಬೇಡಿಕೆ: ಕಲಬುರಗಿ ಪಾಲಿಕೆ ಆಯುಕ್ತ ಡಾ.ಶಂಕರಪ್ಪ ಬಂಧನ
Next Article ನಟ ಸಲ್ಮಾನ್ ಖಾನ್ಗೆ ಭದ್ರತೆ ಹೆಚ್ಚಳ